ಸಿಂಪಿ ಸಮಾಜದಿಂದ ಶಿಸ್ತುಬದ್ಧ ಜೀವನ: ಹಾಲಪ್ಪ
Team Udayavani, Jun 8, 2018, 5:35 PM IST
ಸಾಗರ: ರಾಜ್ಯದ ಹಿಂದುಳಿದ ವರ್ಗದಲ್ಲಿ ಸಿಂಪಿ ನಾಮದೇವ ಸಮಾಜ ಸಹ ಒಂದಾಗಿದೆ. ಆದರೆ ಸಾಗರದಲ್ಲಿ ಸಣ್ಣ ಜನಸಂಖ್ಯೆ ಹೊಂದಿರುವ ಸಿಂಪಿ ಸಮಾಜ ಅತ್ಯಂತ ಶಿಸ್ತುಬದ್ಧ ಜೀವನ ನಡೆಸುತ್ತಿದೆ ಎಂದು ಶಾಸಕ ಹರತಾಳು ಹಾಲಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಅಶೋಕ ರಸ್ತೆಯಲ್ಲಿರುವ ಹರಿಮಂದಿರದಲ್ಲಿ ಬುಧವಾರ ನಾಮದೇವ ಸಿಂಪಿ ಸಮಾಜದ ವತಿಯಿಂದ ನೀಡಲಾದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಿಂಪಿ ಸಮಾಜ ಹಿಂದಿನಿಂದಲೂ ಬಿಜೆಪಿಯನ್ನು ಬೆಂಬಲಿಸಿಕೊಂಡು ಬಂದಿದ್ದು, ಈ ಬಾರಿ ಸಹ ಅದನ್ನು ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ ನೀವು ಅಭಿನಂದಿಸುವುದಕ್ಕಿಂತ ನಾನು ನಿಮ್ಮನ್ನು ಅಭಿನಂದಿಸುವುದೇ ಸೂಕ್ತ ಎಂದು ಹೇಳಿದರು. ರಾಜ್ಯದಲ್ಲಿ ಹಿಂದುಳಿದ ಸಮಾಜ ದೊಡ್ಡ ಪ್ರಮಾಣದಲ್ಲಿದೆ. ತಾಲೂಕಿನಲ್ಲಿ ಸಹ ಹಿಂದುಳಿದ ಸಮಾಜದ ಬಹುಸಂಖ್ಯಾತರು ಎನಿಸಿಕೊಂಡವರು ಸರ್ಕಾರದ ಬಹುತೇಕ ಸೌಲಭ್ಯಗಳನ್ನು ತಮ್ಮದಾಗಿಸಿಕೊಂಡು ಬಿಡುತ್ತಾರೆ. ಆದರೆ ನನ್ನ ಅವ ಧಿಯಲ್ಲಿ
ಅಂತಹ ಅಚಾತುರ್ಯ ನಡೆಯಲು ಅವಕಾಶ ಕೊಡುವುದಿಲ್ಲ. ಎಲ್ಲ ಜನಾಂಗಕ್ಕೂ ಸರ್ಕಾರದ ಯೋಜನೆ ಸಮಪ್ರಮಾಣದಲ್ಲಿ ಹಂಚಿಕೆಯಾಗುವಂತೆ ನಿಗಾ ವಹಿಸಲಾಗುತ್ತದೆ. ಜೊತೆಗೆ ಸಮುದಾಯ ಭವನ ನಿರ್ಮಾಣ ಮಾಡುವ ನಿಮ್ಮ ಆಶಯಕ್ಕೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ನಾಮದೇವ ಸಿಂಪಿ ಸಮಾಜದ ಅಧ್ಯಕ್ಷ ಕಾಶಿನಾಥ ಚೌಧರಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯ ಸಂತೋಷ್ ಆರ್. ಶೇಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ. ಮೇಘರಾಜ್, ಕಾರ್ಯದರ್ಶಿ ಚೇತನರಾಜ್ ಕಣ್ಣೂರು, ಕೃಷ್ಣಮೂರ್ತಿ ಬೆನ್ನೂರು ಇದ್ದರು. ಗಣೇಶ್ ಚೌಧರಿ ಸ್ವಾಗತಿಸಿದರು. ದಿಲೀಪ್ ಚೌಧರಿ ವಂದಿಸಿದರು. ಪವನ್
ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ