ಅನುದಾನ ಹಂಚಿಕೆಯಲ್ಲಿ ಬೇಡ ತಾರತಮ್ಯ


Team Udayavani, Dec 6, 2018, 5:22 PM IST

shiv-1.jpg

ಸಾಗರ: ಅಧ್ಯಕ್ಷ ಸ್ಥಾನದಲ್ಲಿ ಕುಳಿತ ಮೇಲೆ ತಾರತಮ್ಯ ಮನೋಭಾವ ಬಿಡಬೇಕು. ಕಾಮಗಾರಿ ಹಂಚುವ ಸಂದರ್ಭದಲ್ಲಿ ಒಂದು ವಾರ್ಡ್‌ಗೆ ಹೆಚ್ಚು ಮತ್ತೂಂದು ವಾರ್ಡ್‌ಗೆ ಕಡಿಮೆ ಅನುದಾನ ಬಿಡುಗಡೆ ಮಾಡಿ ಮಲತಾಯಿ ಧೋರಣೆ ತಳೆಯುವುದು ಸರಿಯಲ್ಲ ಎಂದು ಆಡಳಿತ ಪಕ್ಷದ ಸದಸ್ಯೆ ಎನ್‌. ಲಲಿತಮ್ಮ ಗಂಭೀರ ಆರೋಪ ಮಾಡಿದರು.

ಇಲ್ಲಿನ ನಗರಸಭೆಯಲ್ಲಿ ಬುಧವಾರ ನಡೆದ ನಗರಸಭೆ ವಿಶೇಷ ಸಾಮಾನ್ಯ ಸಭೆಯ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಧ್ಯಕ್ಷರು ಸಭೆಯಲ್ಲಿ ಎಲ್ಲ ವಾರ್ಡ್‌ಗೆ ಸಮಾನ ಅನುದಾನ ನೀಡುವ ಭರವಸೆ ನೀಡಿದ್ದರು. ಆದರೆ ಕ್ರಿಯಾಯೋಜನೆ ಪಟ್ಟಿ ನೋಡಿದಾಗ ಒಂದು ವಾರ್ಡ್‌ಗೆ 11 ಲಕ್ಷ ರೂ. ಕೊಟ್ಟಿದ್ದರೆ ನನ್ನ ವಾರ್ಡ್‌ಗೆ ಕೇವಲ 4 ಲಕ್ಷ ರೂ. ನೀಡಲಾಗಿದೆ. ನನ್ನದು ನಗರದ ಹೊರಭಾಗದ ಜೊತೆಗೆ ಹಿಂದುಳಿದ ವಾರ್ಡ್‌ ಆಗಿದ್ದು ಅಭಿವೃದ್ಧಿಗೆ ಹೆಚ್ಚು ಹಣ ಇಡಬೇಕಿತ್ತು. ಹಾಲಿ ತಯಾರಿಸಿರುವ ಕ್ರಿಯಾಯೋಜನೆಗೆ ನನ್ನ ಒಪ್ಪಿಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಸದಸ್ಯೆ ಸರಸ್ವತಿ ಮಾತನಾಡಿ, ಹಿಂದೆ ಲಲಿತಮ್ಮ ಅಧ್ಯಕ್ಷರಾಗಿದ್ದಾಗ ತಮ್ಮ ವಾರ್ಡ್‌ಗೆ 40 ಲಕ್ಷ ರೂ. ಅನುದಾನ ಪಡೆದಿದ್ದಾರೆ. ಆಗ ಯಾಕೆ ತಾರತಮ್ಯದ ಪ್ರಶ್ನೆ ಉದ್ಭವವಾಗಿಲ್ಲ. ಈಗ ನನ್ನ ವಾರ್ಡ್‌ಗೆ ಸ್ವಲ್ಪ ಹಣ ಜಾಸ್ತಿ ಕೊಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಇದರಿಂದ ಸಿಟ್ಟಿಗೆದ್ದ ಲಲಿತಮ್ಮ, ಸಭೆಯಲ್ಲಿ ಅನಗತ್ಯ ಸುಳ್ಳು ಆರೋಪ ಮಾಡುವುದು ಸರಿಯಲ್ಲ. ನಾನು ಅಧ್ಯಕ್ಷಳಾಗಿದ್ದಾಗ ನನ್ನ ವಾರ್ಡ್‌ಗೆ ಎಷ್ಟು ಅನುದಾನ ತೆಗೆದುಕೊಂಡಿದ್ದೇನೆ ಎಂಬ ದಾಖಲೆ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದರು. 

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಅಧ್ಯಕ್ಷೆ ವೀಣಾ ಪರಮೇಶ್ವರ್‌, ಸಣ್ಣಪುಟ್ಟ ವ್ಯತ್ಯಾಸವಾದರೆ ಅದನ್ನು ಸರಿಪಡಿಸಲಾಗುತ್ತದೆ. ಅಂದ ಮಾತ್ರಕ್ಕೆ ತಾರತಮ್ಯ ಮಾಡಿದ್ದೇವೆ ಎಂದು ಹೇಳುವುದು ಬೇಡ. ಹಿಂದೆ ನೀವು ಅಧ್ಯಕ್ಷರಾಗಿದ್ದಾಗಲೂ ವ್ಯತ್ಯಾಸವಾಗಿತ್ತು ಎನ್ನುವುದನ್ನು ಮರೆಯಬೇಡಿ. ನೀವು ನಿಮ್ಮ ಅವಧಿಯಲ್ಲಿ ಹೆಚ್ಚಿನ ಅನುದಾನ ಪಡೆದಿರುವುದು ದಾಖಲೆಯಿಂದ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು.

ಸದಸ್ಯೆ ಉಷಾ ಗುತ್ತಿಗೆದಾರರಿಗೆ ಬಿಲ್‌ ಪಾವತಿಯಾಗುತ್ತಿಲ್ಲ ಎಂದಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಪೌರಾಯುಕ್ತ ಎಸ್‌. ರಾಜು, ಗುತ್ತಿಗೆದಾರರಿಗೆ ಬಿಲ್‌ ನೀಡಲು ವಿಳಂಬ ಮಾಡಬೇಕು ಎನ್ನುವ ಉದ್ದೇಶವಿಲ್ಲ. ಸಂಬಂಧಪಟ್ಟ ಇಂಜಿನಿಯರ್‌ಗಳು ಕಾಮಗಾರಿ ಮಾಹಿತಿಯನ್ನು ನೀಡಿಲ್ಲ. ಇಂಜಿನಿಯರ್‌ ಮಾಹಿತಿ ನೀಡಿದ ತಕ್ಷಣ ಅಧ್ಯಕ್ಷರ ಜೊತೆ ಸ್ಥಳ ಪರಿಶೀಲನೆ ನಡೆಸಿ ಬಿಲ್‌ ಪಾವತಿ ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.

ಹೊಸ ಕಾಮಗಾರಿ ನಿರ್ವಹಿಸುವ ಮೊದಲು ಹಳೆ ಕಾಮಗಾರಿ ಮುಗಿಸುವ ಬಗ್ಗೆ ಗಮನ ಹರಿಸಿ. ಈಗಾಗಲೇ ಶಾಸಕರು ನಗರೋತ್ಥಾನ ಕಾಮಗಾರಿ ನಿರ್ವಹಿಸದಂತೆ ಸೂಚನೆ ನೀಡಿದ್ದಾರೆ. ಹಣ ಇದ್ದರೂ ಕಾಮಗಾರಿ ಮಾಡದ ಸ್ಥಿತಿಯನ್ನು ಶಾಸಕರು ತಂದಿರಿಸಿದ್ದಾರೆ ಎಂದು ನಾಮ ನಿರ್ದೇಶಿತ ಸದಸ್ಯ ತಾರಾಮೂರ್ತಿ ದೂರಿದರು. 

ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಸದಸ್ಯ ಆರ್‌. ಶ್ರೀನಿವಾಸ್‌, ಶಾಸಕರ ಮೇಲೆ ಅನಗತ್ಯ ಆರೋಪ ಹೊರಿಸುವುದು ಸರಿಯಲ್ಲ. ಒಳಚರಂಡಿ ಕಾಮಗಾರಿ ಮುಗಿದ ಕಡೆ ರಸ್ತೆ ಮಾಡುವಾಗ ಮನೆ ಸಂಪರ್ಕ ನೀಡಿ ಡಾಂಬರೀಕರಣ ಮಾಡಿ ಎಂದು ಶಾಸಕರು ಸೂಚನೆ ನೀಡಿದ್ದಾರೆ ಎಂದರು.

ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸುವಂತೆ ಸದಸ್ಯರಾದ ನಾದೀರಾ ಪರ್ವಿನ್‌, ಐ.ಎನ್‌. ಸುರೇಶಬಾಬು, ಡಿಶ್‌ ಗುರು, ಸಬಾನಾ ಬಾನು, ಗಣಾಧಿಶ್‌, ಅರವಿಂದ ರಾಯ್ಕರ್‌, ನಾಗರತ್ನ ಸಿ., ಸೈಯದ್‌ ಇಕ್ಬಾಲ್‌ ಸಾಬ್‌ ಇನ್ನಿತರರು ಮಾತನಾಡಿದರು. ಸಭೆಯಲ್ಲಿ ಉಪಾಧ್ಯಕ್ಷೆ ಗ್ರೇಸಿ ಡಯಾಸ್‌ ಇದ್ದರು. 

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.