ವಿಐಎಸ್ಎಲ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ
Team Udayavani, Jul 4, 2020, 10:15 AM IST
ಭದ್ರಾವತಿ: ಪಲ್ಲಿನ ವಿಐಎಸ್ಎಲ್ ಕಾರ್ಖಾನೆಯ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶಿವಕುಮಾರ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೋಕಿತರ ದಾಖಲಾತಿ ಮತ್ತು ಚಿಕಿತ್ಸೆಗೆ ಅಗತ್ಯವಾದ ಹೆಚ್ಚಿನ ಬೆಡ್ಗಳನ್ನು ವ್ಯವಸ್ಥೆ ಮಾಡುವತ್ತ ಗಮನ ಹರಿಸಿದ್ದು, ಅದಕ್ಕಾಗಿ ಸೂಕ್ತ ಆಸ್ಪತ್ರೆ ಕಟ್ಟಡಗಳನ್ನು ಗುರುತಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭದ್ರಾವತಿಯ ನ್ಯೂಟೌನ್ನಲ್ಲಿರುವ ವಿಐಎಸ್ಎಲ್ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಜಿಲ್ಲಾಧಿಕಾರಿ ಶಿವಕುಮಾರ್ ಅವರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕಂಪನಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಎಂ.ವೈ.ಸುರೇಶ್ ಅವರು ಆಸ್ಪತ್ರೆಯ ಕುರಿತು ಮಾಹಿತಿ ನೀಡಿದರು.
ತಹಶೀಲ್ದಾರ್ ಶಿವಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ| ಗಾಯತ್ರಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ