Karnataka Politics; ಕಾವೇರಿ ಸಮಸ್ಯೆ ಉಲ್ಬಣಕ್ಕೆ ಡಿಕೆ ಶಿವಕುಮಾರ್ ಕಾರಣ: ಈಶ್ವರಪ್ಪ ಆರೋಪ


Team Udayavani, Sep 22, 2023, 1:14 PM IST

ಕಾವೇರಿ ಸಮಸ್ಯೆ ಉಲ್ಬಣಕ್ಕೆ ಡಿಕೆ ಶಿವಕುಮಾರ್ ಕಾರಣ: ಈಶ್ವರಪ್ಪ ಆರೋಪ

ಶಿವಮೊಗ್ಗ: ರಾಜ್ಯದಲ್ಲಿ ಕಾವೇರಿ‌ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಕಾರಣ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಇಂಡಿಯಾ ಗ್ರೂಪ್ ತೃಪ್ತಿಪಡಿಸಲು, ಸ್ಟಾಲಿನ್ ತೃಪ್ತಿಪಡಿಸಲು ಸೋನಿಯಾಗಾಂಧಿ ತೃಪ್ತಿಪಡಿಸಲು ಯಾರನ್ನೂ ಕೇಳದೆ ಕದ್ದು ಮುಚ್ಚಿ ನೀರು ಬಿಟ್ಟರು ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ನೀರು ಬಿಡುವ ಮುನ್ನ ಸರ್ವ ಪಕ್ಷ ಸಭೆ ಕರೆಯಬೇಕಿತ್ತು. ಅದು ಯಾವುದು ಮಾಡದೆ ಮುಟ್ಟಾಳತನ ಮಾಡಿದರು. ರೈತರ ಪರಿಸ್ಥಿತಿ ಏನು, ಬೆಳೆ ಏನು ಬೆಳೆದಿದ್ದಾರೆ, ವಸ್ತುಸ್ಥಿತಿ ಏನಿದೆ ಯಾವುದನ್ನೂ ಅವಲೋಕಿಸಿಲ್ಲ. ನಂತರ ದೆಹಲಿಗೆ ಸಿಎಂ ಅವರನ್ನು ಕರೆದುಕೊಂಡು ಹೋದರು. ದೆಹಲಿಗೆ ಹೋಗಿ ಎಲ್ಲಾ ಸಂಸದರ ಸಭೆ ಕರೆದರು. ದೆಹಲಿಯಲ್ಲಿ ಎಂಪಿಗಳು ಛೀಮಾರಿ ಹಾಕಿದ್ದಾರೆ ಎಂದರು

ಕಾವೇರಿ ನೀರು‌ ಕಾಂಗ್ರೆಸ್, ಡಿಕೆ ಶಿವಕುಮಾರ್ ಸ್ವತ್ತಲ್ಲ. ಇದು ರಾಜ್ಯದ ಜನರ ಸ್ವತ್ತು. ಮುಖ್ಯಮಂತ್ರಿ ಅವರು ತಕ್ಷಣ ಡಿಕೆಶಿ ರಾಜೀನಾಮೆ ಪಡೆಯಬೇಕು. ಕಾನೂನು ತಜ್ಞರು, ನೀರಾವರಿ ತಜ್ಞರು, ಸಂಸದರ ವಿಶೇಷ ಸಭೆ ಕರೆಯಬೇಕು. ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಬೇಕು. ಇವರು ಮಾಡಿದ ತಪ್ಪನ್ನು ಮುಚ್ಚಲು ಪ್ರಧಾನಮಂತ್ರಿ ಅವರನ್ನು ಮಧ್ಯ ತರುತ್ತಿದ್ದಾರೆ. ತಜ್ಞರ ಜೊತೆ ಸಭೆ ನಡೆಸಿದ್ದರೇ ರಾಜ್ಯಕ್ಕೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಲೋಕಸಭೆ ಚುನಾವಣೆ ಮುಂದಿಟ್ಟುಕೊಂಡು ರಾಜ್ಯದ ಜನರಿಗೆ ಅನ್ಯಾಯ ಮಾಡಿದ್ದಾರೆ ಎಂದು ಕಿಡಿಕಾರಿದರು.

ಬಂಗಾರಪ್ಪ ಅವರು ಸಿಎಂ ಆಗಿದ್ದಾಗ ಇದೇ ಪರಿಸ್ಥಿತಿ ಎದುರಾಗಿತ್ತು. ಆಗ ಬಂಗಾರಪ್ಪ ಅವರು ಸರ್ವಪಕ್ಷ ಸಭೆ ಕರೆದು, ಎಲ್ಲರ ಜೊತೆ ಚರ್ಚೆ ಮಾಡಿದರು. ನೀರು ಬಿಡುವುದಿಲ್ಲವೆಂದು ಸುಗ್ರೀವಾಜ್ಞೆ ಹೊರಡಿಸಿದರು. ಆದರೆ ಡಿಕೆ ಶಿವಕುಮಾರ್ ಅವರು ಸ್ಟಾಲಿನ್, ಸೋನಿಯಾಗಾಂಧಿ ಮೆಚ್ಚಿಸಲು ಕದ್ದು ಮುಚ್ಚಿ‌ ನೀರು ಬಿಟ್ಟು ರೈತರಿಗೆ ಸಂಕಷ್ಟ ತಂದಿಟ್ಟಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದರು.

ಮುಖ್ಯಮಂತ್ರಿ ಅವರು ರಾಜ್ಯದ ಜಲಾಶಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿ. ಜಲಾಶಯದ ವಸ್ತು ಸ್ಥಿತಿ ಅರಿಯಲಿ. ಕರ್ನಾಟಕ ಸದ್ಯಕ್ಕೆ ಶಾಂತಿಯಿಂದ ಇದೆ. ಮುಂದೆ ಶಾಂತಿಯಿಂದ ಇರುತ್ತದೆಂದು ನನಗೆ ಅನಿಸಲ್ಲ ಎಂದರು.

ಟಾಪ್ ನ್ಯೂಸ್

1-wewqqwe

ICC T20 ಬೌಲಿಂಗ್ ರ‍್ಯಾಂಕಿಂಗ್‌: ಅಗ್ರಸ್ಥಾನದಲ್ಲಿ ರವಿ ಬಿಷ್ಣೋಯ್

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

1-sada-d

KMC Manipal: ಸಂಕೀರ್ಣ ಹೊಂದಾಣಿಕೆಯಾಗದ ರಕ್ತದ ಸುರಕ್ಷಿತ ವರ್ಗಾವಣೆಗಾಗಿ MMA

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

1-puttige-1

Udupi: ಪುತ್ತಿಗೆ ‘ವಿಶ್ವ ಗೀತಾ ಪರ್ಯಾಯ’ ಪೂರ್ವಭಾವಿ ಧಾನ್ಯ ಮುಹೂರ್ತ ವೈಭವ

web-halim

Halim Seeds: ಪೌಷ್ಠಿಕಾಂಶದ ಶಕ್ತಿ ಕೇಂದ್ರ… ಹಲೀಮ್‌ ಬೀಜಗಳ ಪ್ರಯೋಜನವೇನು?

1-sdsadasd

RSS ವಿರುದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆರೋಪ: ಸ್ಪಷ್ಟನೆ ನೀಡಿದ ಸಂಘ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdsadasd

RSS ವಿರುದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆರೋಪ: ಸ್ಪಷ್ಟನೆ ನೀಡಿದ ಸಂಘ

BSY: ಅಲ್ಪಸಂಖ್ಯಾತರ ಓಲೈಕೆಯಿಂದ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡದು: ಬಿಎಸ್ ವೈ

BSY: ಅಲ್ಪಸಂಖ್ಯಾತರ ಓಲೈಕೆಯಿಂದ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡದು: ಬಿಎಸ್ ವೈ

3-elephant

Elephants: 60 ವರ್ಷ ಮೀರಿದ ಆನೆಗಳನ್ನು ಕಾರ್ಯಾಚರಣೆಗೆ ಬಳಸಬೇಡಿ

2-arjuna-elephant

Elephnat Arjuna: ಅರ್ಜುನ ಆನೆ ಮುಂದೆ ಕಾವಾಡಿಗರ ಕಣ್ಣೀರು

high court karnataka

Chikkamagalur: ವಕೀಲರು-ಪೊಲೀಸರ ನಡುವೆ‌ ಗಲಾಟೆ- CID ತನಿಖೆಗೆ ಸಮ್ಮತಿಸಿದ ಹೈಕೋರ್ಟ್‌

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1-wewqqwe

ICC T20 ಬೌಲಿಂಗ್ ರ‍್ಯಾಂಕಿಂಗ್‌: ಅಗ್ರಸ್ಥಾನದಲ್ಲಿ ರವಿ ಬಿಷ್ಣೋಯ್

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

ಸಾವಯವ ಗೊಬ್ಬರ ಬಳಕೆಗೆ ಮುಂದಾಗಿ: ಡಾ.ಕೆ.ಸಂಧ್ಯಾ

ಸಾವಯವ ಗೊಬ್ಬರ ಬಳಕೆಗೆ ಮುಂದಾಗಿ: ಡಾ.ಕೆ.ಸಂಧ್ಯಾ

ರಸ್ತೆ ಅಗಲೀಕರಣ: ಕಟ್ಟಡ ತೆರವಿಗೆ ‌ತಡೆಯಾಜ್ಞೆ

ರಸ್ತೆ ಅಗಲೀಕರಣ: ಕಟ್ಟಡ ತೆರವಿಗೆ ‌ತಡೆಯಾಜ್ಞೆ

1-sada-d

KMC Manipal: ಸಂಕೀರ್ಣ ಹೊಂದಾಣಿಕೆಯಾಗದ ರಕ್ತದ ಸುರಕ್ಷಿತ ವರ್ಗಾವಣೆಗಾಗಿ MMA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.