ಕನ್ನಡ ಭಾಷೆ ರಕ್ಷಣೆಯಲ್ಲಿ ರಾಜಕೀಯ ಬೇಡ


Team Udayavani, Oct 1, 2018, 3:55 PM IST

shiva-1.jpg

ಶಿವಮೊಗ್ಗ: ಎಲ್ಲ ಸಂಸ್ಕೃತಿಗೆ ಕನ್ನಡ ಮಾದರಿಯಾಗಿದ್ದು, ಇಂತಹ ಶ್ರೀಮಂತ ಭಾಷೆಯನ್ನು ಸಂರಕ್ಷಿಸುವಲ್ಲಿ ಯಾವುದೇ
ರಾಜಕೀಯ ಮಾಡಬಾರದು ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನಗರದ ಅಂಬೇಡ್ಕರ್‌ ಭವನದಲ್ಲಿ ಭಾನುವಾರ ಆಯೋಜಿಸಿದ್ದ “ಶಿವಮೊಗ್ಗ ತಾಲೂಕು ಎಂಟನೇ ಕನ್ನಡ ಸಾಹಿತ್ಯ ಸಮ್ಮೇಳನ’ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದರಲ್ಲೂ
ರಾಜಕೀಯ ಹಸ್ತಕ್ಷೇಪವಾದಲ್ಲಿ ಬೆಳವಣಿಗೆಗೆ ತೊಡಕಾಗುತ್ತದೆ ಎಂದು ತಿಳಿಸಿದರು.

ಕನ್ನಡ ಕಸ್ತೂರಿಯಿದ್ದಂತೆ. ಅದರ ಪರಿಮಳ ಇನ್ನಷ್ಟು ಪಸರಿಸಬೇಕಾದರೆ, ಭಾಷೆಯೆಡೆಗೆ ಪ್ರತಿಯೊಬ್ಬರಲ್ಲೂ ಗೌರವ ಭಾವ ಮೂಡಬೇಕು. ಅದನ್ನು ತನ್ನದೆಂದು ಪ್ರೀತಿಸುವ ಗುಣ ಬೆಳೆಸಬೇಕು. ಇದನ್ನು ಬಿಟ್ಟು ಗಡಿ, ಜಲ ಸೇರಿದಂತೆ ಹಲವು ಕಾರಣಗಳಿಂದಾಗಿ ಕನ್ನಡಕ್ಕೆ ತಿಲಾಂಜಲಿ ಇಡುವ ಕೆಲಸ ಮಾಡಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
 
ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲೇ ಕನ್ನಡ ಮಾತನಾಡುವವರ ಸಂಖ್ಯೆ ಕ್ಷೀಣಿಸಿದೆ. ಪರಭಾಷೆಗೆ ಕನ್ನಡಿಗರೂ ಅತಿಯಾಗಿ ನೆಚ್ಚಿಕೊಂಡಿರುವುದರಿಂದಾಗಿ ತಮ್ಮತನವನ್ನೇ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದ್ದೇವೆ. ಇದು ಮಾರಕ ಬೆಳವಣಿಗೆಯಾಗಿದ್ದು, ಕೂಡಲೇ ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಕನ್ನಡ ಭಾಷೆ, ಗಡಿ, ಸಂಸ್ಕೃತಿ ಉಳಿಯಬೇಕಾದರೆ ಇಂತಹ ಸಾಹಿತ್ಯ ಸಮ್ಮೇಳನಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜನೆಯಾಗಬೇಕು. ಇಲ್ಲಿ ನಡೆಯುವ ಗೋಷ್ಠಿಗಳ ಮೂಲಕ ಯುವ ಪೀಳಿಗೆಯಲ್ಲಿ ಕನ್ನಡದ ಬಗ್ಗೆ ಅಭಿಮಾನ ಮೂಡಬೇಕು ಎಂದು ಆಶಯ ವ್ಯಕ್ತಪಡಿಸಿದರು.

 ಕ್ರಾಂತಿಕಾರಿಗಳು, ಸಾಹಿತಿಗಳು, ದಿಗ್ಗಜರು, ಕನ್ನಡ ಅಭಿಮಾನಿಗಳು ಕರುನಾಡಿನ ಕುರಿತು ಹಾಡಿ ಹೊಗಳಿದ್ದಾರೆ. ಇಷ್ಟಾದರೂ ಇದರ ಬಗ್ಗೆ ಪೂರ್ಣ ಅರಿತುಕೊಳ್ಳಲು ಸಾಧ್ಯವಾಗಿಲ್ಲ. ಅಂತಹ ಭಾಷೆ ಕನ್ನಡವಾಗಿದೆ. ಪರ ಭಾಷೆಯ
ಅತಿಕ್ರಮಣವನ್ನು ತಪ್ಪಿಸಿ ನಮ್ಮ ಭಾಷೆ, ಸಂಸ್ಕೃತಿ ಬೆಳೆಸುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
 
ಕಸಾಪ ತಾಲೂಕು ಅಧ್ಯಕ್ಷ ಜಿ.ಪಿ. ಸಂಪತ್‌ ಕುಮಾರ್‌ ಮಾತನಾಡಿ, ನಮ್ಮಲ್ಲಿನ ಸ್ವಾರ್ಥಗಳಿಂದಾಗಿಯೇ ಕನ್ನಡ ಭಾಷೆ ಕಟ್ಟಲು ಸಾಧ್ಯವಾಗಿಲ್ಲ. ಹೀಗಾಗಿ, ಸ್ವಾರ್ಥವನ್ನು ಮರೆತು ಕೆಲಸ ಮಾಡಲು ಮುಂದಾದಲ್ಲಿ ಭಾಷೆಯನ್ನು
ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಭಾಷೆಯ ಅಧಃಪತನಕ್ಕೆ ಮೂಲಕಾರಣ “ಪರಭಾಷೆ’ಗೆ ಅಧಿಕ ಒತ್ತು ನೀಡಿರುವುದು. ಈಗಲಾದರೂ ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು. 

ಕಸಾಪ ಜಿಲ್ಲಾಧ್ಯಕ್ಷ ಡಿ.ಬಿ. ಶಂಕರಪ್ಪ ಮಾತನಾಡಿ, ಕನ್ನಡವನ್ನು ಕಟ್ಟಿ ಬೆಳೆಸುವಲ್ಲಿ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ವಚನ ಸಾಹಿತ್ಯ, ತತ್ವಪದ, ಜಾನಪದ ಸಾಹಿತ್ಯಗಳ ಮೂಲಕ ಕನ್ನಡ ಭಾಷೆಯನ್ನು ಬೆಳೆಸುವ ಕೆಲಸ
ಮಾಡಲಾಗಿದೆ. ಜತೆಗೆ, ಇಲ್ಲಿ ಸಿಕ್ಕ ಶಾಸನಗಳೂ ಇದನ್ನು ರುಜುವಾತುಪಡಿಸುತ್ತವೆ.

ಹೊಸನಗರದಲ್ಲಿ ಜೈನ ಸಾಹಿತಿಗಳಿದ್ದರು. 12ನೇ ಶತಮಾನದಲ್ಲಿ ಶರಣ ಸಾಹಿತ್ಯದ ಮೂಲಕ ಭಾಷಾ ಸೊಗಡು, ಶ್ರೀಮಂತಿಕೆಯನ್ನು ಹೆಚ್ಚಿಸಲಾಗಿದೆ ಎಂದರು. ಬೆಕ್ಕಿನಕಲ್ಮಠದ ಶ್ರೀ ಡಾ| ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿ ಸಾನ್ನಿಧ್ಯ ವಹಿಸಿದ್ದರು. 7ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಸವಿತಾ ನಾಗಭೂಷಣ್‌, ರಾಜ್ಯ ಸರಕಾರಿ ನೌಕರರ ಸಂಘದ ಕೋಶಾಧ್ಯಕ್ಷ ಸಿ.ಎಸ್‌. ಷಡಕ್ಷರಿ, ಎಸ್‌.ಎಂ. ಲೋಕೇಶ್ವರಪ್ಪ ಇತರರಿದ್ದರು. ಚನ್ನಬಸಪ್ಪ ನ್ಯಾಮತಿ ನಿರೂಪಿಸಿದರು. ಎಚ್‌. ರವಿಶಂಕರ್‌ ಸ್ವಾಗತಿಸಿದರು. ಜಿ.ಎಸ್‌. ಅನಂತ್‌ ವಂದಿಸಿದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.