Thirthahalli: ಹೊಸ ತುಂಗಾ ಸೇತುವೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ; ಮೂವರ ವಿರುದ್ಧ ಕೇಸ್
Team Udayavani, Feb 28, 2024, 3:09 PM IST
ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169ರ ಕುರುವಳ್ಳಿಯಿಂದ 169 (ಎ) ಬಾಳೆಬೈಲುವಿಗೆ ಸಂಪರ್ಕ ಕಲ್ಪಿಸುವ ನೂತನ ತುಂಗಾ ಸೇತುವೆಯನ್ನು ನಿರ್ಮಿಸಲಾಗಿದ್ದು, ಸೇತುವೆ ನೋಡಲು ಪ್ರವಾಸಿಗರು ಮತ್ತು ವಾಯುವಿಹಾರ ಮಾಡುವ ಸ್ಥಳೀಯರು ಕುಟುಂಬ ಸಮೇತರಾಗಿ ಈ ಸೇತುವೆ ಬಳಿ ಬರುತ್ತಾರೆ.
ಆದರೆ ಈ ಸ್ಥಳದಲ್ಲಿ ಕೆಲ ಪುಂಡರ ಹಾವಳಿ ಜೋರಾಗಿದ್ದು ಬೈಕ್ ವೇಗವಾಗಿ ಚಲಾಯಿಸುವುದು, ಪಾರ್ಟಿ ಮಾಡುವುದು, ಫೋಟೋ ತೆಗೆಯುವ ದೃಷ್ಟಿಯಿಂದ ಇತರರಿಗೆ ತೊಂದರೆ ಕೊಡುವುದು, ಹೀಗೆ ಹಲವು ವಿಷಯಗಳನ್ನು ಸ್ಥಳೀಯ ಮಾಧ್ಯಮಗಳು ಸುದ್ದಿ ಪ್ರಕಟಿಸಿದ್ದವು.
ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರು ಕೆಲ ದಿನಗಳ ಹಿಂದೆ ದಿಡೀರ್ ಕಾರ್ಯಾಚರಣೆ ನಡೆಸಿ ಕೆಲ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಕೈಗೊಂಡಿದ್ದರು.
ಆದರೆ ಇದೀಗ ಮತ್ತೆ ಸೇತುವೆಯ ಮೇಲೆ ಮಧ್ಯಪಾನ ಸೇವಿಸಿ ಬೈಕ್ ಚಲಾವಣೆ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮೂರು ಜನರ ಮೇಲೆ ಕೇಸ್ ದಾಖಲು ಮಾಡಿ ಎರಡು ಬೈಕುಗಳನ್ನು ವಶಪಡಿಸಿಕೊಂಡಿದ್ದು ಡಿವೈಎಸ್ಪಿ ಅವರ ಈ ದಿಡೀರ್ ಕಾರ್ಯಾಚರಣೆಗೆ ಪಟ್ಟಣದ ಸಾರ್ವಜನಿಕರು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ