ತೀರ್ಥಹಳ್ಳಿ: ಕುಡಿದ ಮತ್ತಿನಲ್ಲಿ ಶಾಲೆಯ ವಿಗ್ರಹ ಧ್ವಂಸ ಮಾಡಿದ ಕುಡುಕ
Team Udayavani, Dec 28, 2021, 6:55 PM IST
ತೀರ್ಥಹಳ್ಳಿ: ತಾಲ್ಲೂಕಿನ ಹಾರೊಗೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಮ್ಮೂರ ಶಾಲೆಯಲ್ಲಿದ ಸರಸ್ವತಿ ವಿಗ್ರಹವನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ.
ಘಟನೆಯ ಬಗ್ಗೆ ಯಾರೋ ಕಿಡಿಗೇಡಿಗಳು ಮದ್ಯ ಕುಡಿದು ದಾಂಧಲೆ ಮಾಡಿದ್ದಾರೆ ಎಂಬುದಾಗಿ ಸುದ್ದಿ ಹಬ್ಬಿತ್ತಾದರೂ ವಾಸ್ತವವಾಗಿ ಕಳೆದ 1ವಾರದ ಹಿಂದೆ ಗೋವಿಂದ ಎಂಬುವವನು ಶಾಲೆಯ ಮುಖ್ಯ ಶಿಕ್ಷಕಿ ಬಳಿ ಬಂದು ಕುಡಿಯುವುದಕ್ಕೆ ನೀರು ಕೇಳಿದ್ದಾರೆ ನೀರು ಕೊಡದೆ ಶಿಕ್ಷಕಿ ಆಚೆ ಕಳಿಸಿದಾರೆ ಎಂದು ಸಿಟ್ಟಿಗೆ ಗೋವಿಂದ ಈ ದಾಂಧಲೆ ನಡೆಸಿದ್ದಾರೆ.
ಗೋವಿಂದ ಹಾರೋಗೊಳಿಗೆ ಸುತ್ತಮುತ್ತ ಕಳೆದ ಇಪ್ಪತ್ತು ವರ್ಷಗಳಿಂದ ಕೆಲ ಬಲಾಡ್ಯರ ಮನೆಗಳಿಗೆ ಅಡಿಕೆ ಆರಿಸುವ ಕೆಲಸಕ್ಕೆ ಈತ ಕಾಯಂ ಕೆಲಸಗಾರ,
ಈತ ಒಬ್ಬನೆ ಇದ್ದು ಸ್ಥಳೀಯ ರಂಗಮಂದಿರದಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಊರಿನಲ್ಲಿ ಅಡಿಕೆ ಆರಿಸುವ ಕೆಲಸ ಮಾಡುವುದು ಅವರು ಕೊಡುವ ಚೂರುಪಾರು ಹಣದಲ್ಲಿ ಮದ್ಯ ಸೇವನೆ ಮಾಡುವುದು ಇವರ ಕಾಯಕ ಎಂಬುದರ ಬಗ್ಗೆ ಸ್ಥಳೀಯರು ಆರೋಪಿಸಿದ್ದು, ಈತ ಕುಡಿಯಲು ನೀರು ಕೊಡಲಿಲ್ಲ ಎಂಬ ಕಾರಣಕ್ಕೆ ಶಾಲೆಯ ಎದುರು ನಿರ್ಮಾಣ ಮಾಡಿದ ಗಾಂಧೀಜಿ ಪ್ರತಿಮೆ, ಸರಸ್ವತಿ ಪ್ರತಿಮೆ, ವಿವೇಕಾನಂದ, ಬುದ್ಧ ಪ್ರತಿಮೆ ಪುಡಿ ಪುಡಿ ಮಾಡಿ ಶಾಲೆಯ ಹಿಂದಿನ ತೋಟದಲ್ಲಿ ಇರುವ ಪೈಪ್ ಲೈನ್ ಮತ್ತು ಪೈಪಿಗೆ ಅಳವಡಿಸಿದ ಆರು ಜೆಟ್ ಮುರಿದು ಹಾಕಿದ್ದಾನೆ.
ಸ್ಥಳೀಯ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಸಸಿತೋಟ ಮಂಜುನಾಥ್ ರವರು ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದಾರೆ. ದೂರಿನ ಆಧಾರದ ಮೇಲೆ ಪೋಲೀಸರು ಈತನನ್ನು ಕರೆಯಿಸಿ ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ