ಭಾರೀ ಹೆಸರು ಗಳಿಸಿದ್ದ ‘ಈಸೂರು ದಂಗೆ’ ಇನ್ನಿಲ್ಲ..!
ಶಿವಮೊಗ್ಗ ಜಿಲ್ಲೆಯಲ್ಲಿ ಜನಪ್ರಿಯತೆ ಗಳಿಸಿದ್ದ ಹೋರಿ
Team Udayavani, Mar 5, 2021, 5:48 PM IST
ಶಿವಮೊಗ್ಗ : ಭಾರೀ ಜನಮನ್ನಣೆ ಗಳಿಸಿದ್ದ ಈಸೂರು ದಂಗೆ ಹೋರಿ ಸಾವನ್ನಪ್ಪಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ಈ ಹೋರಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಜನಪ್ರಿಯತೆ ಗಳಿಸಿತ್ತು.
ಈಸೂರು ಗ್ರಾಮದ ರೈತ ಕೊಪ್ಪದರ ಮಂಜಣ್ಣ ಎಂಬುವರು ಈ ಹೋರಿಯನ್ನು ಸಾಕಿದ್ದು, ಹೋರಿಹಬ್ಬದಂದು ಎಲ್ಲರ ಗಮನ ಸೆಳೆಯುತ್ತಿತ್ತು. ಅಲ್ಲದೆ ಈ ಹೋರಿಯನ್ನು ನೋಡಲೆಂದೇ ಅಕ್ಕ ಪಕ್ಕದ ಜಿಲ್ಲೆಯವರು ಹೋರಿ ಹಬ್ಬಕ್ಕೆ ಬರುತ್ತಿದ್ದರಂತೆ.
ಸ್ಪರ್ಧೆಯಲ್ಲಿ ಭಾಗವಹಿಸಿದರೆ ಬಹುಮಾನ ಫಿಕ್ಸ್ ಎನ್ನುವ ಮಟ್ಟಿಗೆ ಈಸೂರು ದಂಗೆ ನಂಬಿಕೆ ಗಳಿಸಿತ್ತು. 7 ಬೈಕ್, 15 ಫ್ರಿಜ್, 15 ಟಿವಿ, ಎತ್ತಿನಗಾಡಿ, ಬಂಗಾರ ಬಳೆ, 10ಕ್ಕೂ ಹೆಚ್ಚು ಗ್ರಾಂ ಬಂಗಾರ ಸೇರಿದಂತೆ ಹಲವು ಬಹುಮಾನ ಗೆದ್ದಿದೆ.
ಇಷ್ಟು ಜನಪ್ರಿಯತೆ ಪಡೆದ ಹೋರಿ ನಿನ್ನೆ ಸಂಜೆ ವಯೋಸಹಜವಾಗಿ ಮೃತಪಟ್ಟಿದ್ದು, ಟ್ರಾಕ್ಟರ್ ನಲ್ಲಿ ಮೆರವಣಿಗೆ ಮೂಲಕ ಅಂತಿಮ ಸಂಸ್ಕಾರ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!