ಮಲೆನಾಡಿಗೂ ತಬ್ಲಿಘಿ ನಂಟು: ಶಿವಮೊಗ್ಗದಲ್ಲಿ ಎಂಟು ಕೋವಿಡ್-19 ಸೋಂಕು ಪ್ರಕರಣ ಪತ್ತೆ
Team Udayavani, May 10, 2020, 12:30 PM IST
ಶಿವಮೊಗ್ಗ: ಇದುವರೆಗೆ ಯಾವುದೇ ಕೋವಿಡ್-19 ಸೋಂಕು ಪ್ರಕರಣವಿಲ್ಲದೇ ಇದ್ದ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಇಂದು ಎಂಟು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಎಲ್ಲಾ ಎಂಟು ಪ್ರಕರಣಗಳಿಗೆ ಕಾರಣ ತಬ್ಲಿಘಿ ನಂಟು ಎಂದು ವರದಿಯಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದು, ಸೋಂಕು ಪತ್ತೆಯಾದ ಎಂಟು ಮಂದಿಗೂ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.
ಅಹಮದಾಬಾದ್ ನಿಂದ ಬಂದವರಲ್ಲಿ ಕೋವಿಡ್ -19 ಸೋಂಕು ಕಾಣಿಸಿಕೊಂಡಿದ್ದು, ಇವರಲ್ಲಿ ಎಂಟು ಮಂದಿ ಶಿಕಾರಿಪುರದವರು, ಒಬ್ಬ ತೀರ್ಥಹಳ್ಳಿಯವರು ಎನ್ನಲಾಗಿದೆ.
ಶಿವಮೊಗ್ಗ ಜಿಲ್ಲೆ ಹಸಿರುವಲಯದಲ್ಲೇ ಮುಂದುವರಿಯುತ್ತದೆ. ಆದರೆ ಜನ ಜಾಗೃತರಾಗಿ ಇರಬೇಕು ಎಂದು ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ