ಚುನಾವಣಾ ನೀತಿ ಸಂಹಿತೆ: ತೀರ್ಥಹಳ್ಳಿಯ ವಿವಿಧ ಸಹಕಾರ ಸಂಘಗಳ ಕಚೇರಿಗಳ ಮೇಲೆ ಅಧಿಕಾರಿಗಳ ದಾಳಿ
Team Udayavani, Apr 12, 2023, 6:19 PM IST
ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯಲ್ಲಿರುವ ವಿವಿಧ ಸಹಕಾರ ಸಂಘಗಳ ಕಚೇರಿಗಳ ಮೇಲೆ ತೀರ್ಥಹಳ್ಳಿ ಚುನಾವಣಾಧಿಕಾರಿ, ತೀರ್ಥಹಳ್ಳಿ ತಹಶಿಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿಯಲ್ಲಿರುವ ರಾಮೇಶ್ವರ ಬಹು ಉದ್ದೇಶಿ ಸೌಹಾರ್ದ ಸಹಕಾರಿ ಸಂಘ, ಜೊತೆಗೆ ಸರಸ್ವತಿ ಸೌಹಾರ್ದ ಸಹಕಾರ ನಿಯಮಿತ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಹಣಕಾಸು ವಹಿವಾಟಿನ ಕುರಿತು ದಾಖಲೆಗಳನ್ನು ಪರಿಶೀಲನೆ ನಡೆಸುವ ಸಾಧ್ಯತೆಗಳು ದಟ್ಟವಾಗಿದ್ದು, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಣದ ವಹಿವಾಟು ನಡೆದಿರುವ ಸಾಧ್ಯತೆಗಳ ಕುರಿತಾಗಿ ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.