ಆಗುಂಬೆಯಲ್ಲಿ ಮುಗಿಯದ ಕಾಡಾನೆ ಕಾಟ!
Team Udayavani, Jun 13, 2022, 8:07 PM IST
ತೀರ್ಥಹಳ್ಳಿ : ತಾಲೂಕಿನ ಆಗುಂಬೆಯಲ್ಲಿ ಕಾಡಾನೆಯೊಂದರ ಕಾಟ ಆರಂಭವಾಗಿ ಸರಿ ಸುಮಾರು ವರ್ಷಗಳೇ ಕಳೆಯುತ್ತ ಬಂದಿದೆ. ಕಾಡಾನೆ ಇದೀಗ ವಾಟೆಹಳ್ಳದ ಸಮೀಪ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.
2018 ರಲ್ಲಿ ನಡು ರಸ್ತೆಯಲ್ಲಿಯೇ ಕಾಡಾನೆ ಓಡಾಡಿದ್ದ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದರು. ನಂತರದಲ್ಲಿ ಕಾಡಾನೆಯು ಕಂಡರೂ ಊರಿನ ಸಮೀಪದವರೆಗೆ ಯಾವಾಗಲು ಬಂದಿರಲಿಲ್ಲ. ಇದೀಗ ಊರಿನ ಸಮೀಪದಲ್ಲಿಯೇ ಕಾಣಿಸಿಕೊಂಡಿರುವುದು ಜನರಲ್ಲಿ ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.
ದೈವದ ಹರಕೆ ತೀರಿಸುವ ಪದ್ದತಿ ಈ ಭಾಗದಲ್ಲಿದ್ದು, ಕಾಡಾನೆಯಿಂದಾಗಿ ಜನರು ಅಲ್ಲಿಗೆ ಹೋಗುವುದಕ್ಕೂ ಕೂಡ ಭಯ ಭೀತರಾಗಿದ್ದಾರೆ. ಅರಣ್ಯ ಸಿಬ್ಬಂದಿಗೆ ಈ ಬಗ್ಗೆ ಹಲವು ಸಲ ಮನವಿ ಮಾಡಿದ್ದರೂ ಆನೆಯನ್ನು ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರ ಮಾಡುವ ಕೆಲಸ ಆಗುತ್ತಿಲ್ಲ ಎಂದು ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು