ವೇತನಕ್ಕಾಗಿ ದಿನಗೂಲಿ ನೌಕರರ ಧರಣಿ
Team Udayavani, Oct 13, 2020, 6:45 PM IST
ಭದ್ರಾವತಿ: ವೇತನ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ನಿರಾವರಿ ನಿಗಮದ ಬಿಆರ್ಎಲ್ಬಿಸಿ ನಾಲ್ಕು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ಮತ್ತು ಗುತ್ತಿಗೆ ನೌಕರರು ಮಿಲ್ಟ್ರಿ ಕ್ಯಾಂಪ್ನಲ್ಲಿರುವ ನೀರಾವರಿ ಇಲಾಖೆ ಕಚೇರಿ ಮುಂದೆ ಸೋಮವಾರ ಧರಣಿ ನಡೆಸಿದರು.
ನಾಲ್ಕು ವಿಭಾಗಗಳಲ್ಲಿ 500 ಮಂದಿ ದಿನಗೂಲಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದು, ಈ ಹಿಂದಿನ ಗುತ್ತಿಗೆದಾರ ಎರಡು ತಿಂಗಳ ವೇತನ ನೀಡದ ಕಾರಣ ನಡೆಸಿದ ಹೋರಾಟದ ಪರಿಣಾಮವಾಗಿ ಹೊಸ ಗುತ್ತಿಗೆ ನೇಮಕ ಮಾಡಲಾಗಿದೆ. ಈ ಹೊಸ ಗುತ್ತಿಗೆದಾರ ಇಎಸ್ಐ, ಪಿಎಫ್ ಕಂತು ಹಾಗೂ ವೇತನ ವ್ಯತ್ಯಾಸದ ಹಣವನ್ನು ತುಂಬಿಲ್ಲ. ಇದರಿಂದ ವೇತನವಿಲ್ಲದೆ ದಿನಗೂಲಿ ನೌಕರರ ಬದುಕು ದುಸ್ತರವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಹಳೆ ಗುತ್ತಿಗೆದಾರ ಎರಡು ತಿಂಗಳ ವೇತನವನ್ನು ತಕ್ಷಣ ನೀಡಬೇಕು ಮತ್ತು ಹೊಸ ಗುತ್ತಿಗೆದಾರರು ಇಎಸ್ಐ, ಪಿಎಫ್ಕಂತಿನ ಹಣ ತುಂಬಿಕೊಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಕಾರ್ಯಪಾಲಕ ಇಂಜಿನಿಯರ್ ರವಿಚಂದ್ರನ್, ಗುತ್ತಿಗೆದಾರರನ್ನು ಕರೆಸಿ ಮಾತನಾಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ನೀರಾವರಿ ಇಲಾಖೆ ದಿನಗೂಲಿ ಹಾಗೂ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಹರೀಶ್, ಪ್ರಕಾಶ್ಕುಮಾರ್, ಕರಿಬಸಪ್ಪ, ಬೊಮ್ಮನಕಟ್ಟೆ ಪ್ರಕಾಶ್,ದೇವೇಂದ್ರಪ್ಪ ಅಸ್ಮಾಬಾನು, ಮೇರಿ, ಶೋಭಾ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ