Ramaಮಂದಿರದಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ; ಮಾಧವ ದೇವಸ್ಥಾನದಲ್ಲಿ ವಿಶೇಷ ಪೂಜೆ
ಮತ್ತೊಮ್ಮೆ ಅದ್ದೂರಿಯಾಗಿ ನಡೆಯಲಿದೆ ತುಂಗಾ ಆರತಿ
Team Udayavani, Jan 20, 2024, 3:21 PM IST
ತೀರ್ಥಹಳ್ಳಿ: ಪಟ್ಟಣದ ಪುರಾಣ ಪ್ರಸಿದ್ಧ ರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಶ್ರೀ ಮಾಧವ ದೇವಸ್ಥಾನದಲ್ಲಿ ಜ.22 ರಂದು ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ.
ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯ ಶುಭ ಮುಹೂರ್ತದಲ್ಲಿ ದೇಶಾದ್ಯಂತ ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳು ನಡೆಸಲಾಗುತ್ತಿದ್ದು, ತೀರ್ಥಹಳ್ಳಿಯ ಮಾಧವ ದೇವಸ್ಥಾನದಲ್ಲಿ ಸಹ ಹೋಮ ಹವನಗಳು ನಡೆಯಲಿವೆ.
ಬೆಳಗ್ಗೆ 8 ಗಂಟೆಗೆ ಶ್ರೀ ರಾಮನ ಜಪ 10 ಗಂಟೆಗೆ ರಾಮ ತಾರಕ ಹೋಮ ಮಧ್ಯಾಹ್ನ 12 ಗಂಟೆಗೆ ಪೂರ್ಣ ವತಿ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ, ಹಾಗೂ ಸಂಜೆ 6 ಗಂಟೆಗೆ ತುಂಗಾ ನದಿಯ ದಡದಲ್ಲಿ ಋತ್ವಿಜರಿಂದ ತುಂಗಾ ಆರತಿ ಕಾರ್ಯಕ್ರಮ ಜರುಗಲಿದೆ.
ವರ್ಷದ ನಂತರ ತುಂಗಾ ನದಿ ಎತ್ತರದಲ್ಲಿ ತುಂಗಾ ಆರತಿ ಕಾರ್ಯಕ್ರಮ ನಡೆಯಲಿದ್ದು, ಜನರ ಕಣ್ಮನ ಸೆಳೆಯುವ ಈ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಸಾವಿರಾರು ಜನರು ಆಗಮಿಸುವ ನಿರೀಕ್ಷೆ ಇದೆ ಹಾಗೂ ಈ ಎಲ್ಲಾ ಕಾರ್ಯಕ್ರಮಗಳಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಲು ಸಮಿತಿಯವರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು