ಮಕ್ಕಳಲ್ಲಿ ಪರಿಸರದ ಅರಿವು ಮೂಡಿಸಿ: ರಮೇಶ್
Team Udayavani, Jun 10, 2018, 5:40 PM IST
ಶಿವಮೊಗ್ಗ: ಮಕ್ಕಳಲ್ಲಿ ಪರಿಸರ ಕುರಿತು ತಿಳುವಳಿಕೆ ಮೂಡಿಸಿದಾಗ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಪರಿಸರ
ಕಾಪಾಡಲು ಸಾಧ್ಯ ಎಂದು ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಆಯುಕ್ತ ಎಚ್.ಡಿ. ರಮೇಶ್ ಶಾಸ್ತ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಕೌಟ್ ಭವನದಲ್ಲಿ ಪರಿಸರ ದಿನಾಚರಣೆ ನಿಮಿತ್ತ ಆವರಣದಲ್ಲಿ ಗಿಡ ನೆಟ್ಟು, ಮಕ್ಕಳಿಗೆ ಸಸಿ ವಿತರಿಸಿ ಅವರು ಮಾತನಾಡಿದರು. ಪರಿಸರದ ಮಹತ್ವ ಗೊತ್ತಿದ್ದವರು ಅದರ ನಾಶ ಮಾಡಲಾರರು. ಇಂದು ಪರಿಸರ ತೀವ್ರ ಪ್ರಮಾಣದಲ್ಲಿ ನಾಶವಾಗುತ್ತಿರುವುದರಿಂದ ವಿವಿಧ ರೀತಿಯ ದುಷ್ಪರಿಣಾಮಗಳನ್ನು ನಾವು ಎದುರಿಸುವಂತಾಗಿದೆ.
ಇದರಿಂದಾಗಿ ಪರಿಸರದ ಮಹತ್ವ ಏನು ಎನ್ನುವುದು ಈಗ ಅರಿವಾಗತೊಡಗಿದೆ ಎಂದರು.
ಎಲ್ಲಿಯವರೆಗೆ ಮಕ್ಕಳಲ್ಲಿ ನಾವು ಪರಿಸರ, ಆರೋಗ್ಯ, ಪ್ರಕೃತಿ, ಕಾಡಿನ ಬಗ್ಗೆ ವಿಚಾರವನ್ನು ತುಂಬುವುದಿಲ್ಲವೋ
ಅಲ್ಲಿಯವರೆಗೆ ಅದರ ಮಹತ್ವ ಅವರಿಗೆ ಗೊತ್ತಾಗುವುದಿಲ್ಲ. ಪಠ್ಯ ಕ್ರಮದಲ್ಲಿ ಈ ಸಂಬಂಧ ವಿಚಾರಗಳಿದ್ದಲ್ಲಿ ಅದು ಮಕ್ಕಳ ಮನಸ್ಸನ್ನು ಸೆಳೆಯಲು ಯಶಸ್ವಿಯಾಗುತ್ತದೆ. ಈ ದೃಷ್ಟಿಯಿಂದ ಪರಿಸರ ಕುರಿತು ಮಕ್ಕಳಿಗೆ ಹೆಚ್ಚಿನ ತಿಳುವಳಿಕೆ ನೀಡುವ ಕೆಲಸವಾಗಬೇಕು ಎಂದರು.
ಜಿಲ್ಲಾ ಸ್ಕೌಟ್ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ನೆಲ, ಜಲ, ಕಾಡು ಕಾಪಾಡುವುದು ಎಲ್ಲರ ಕರ್ತವ್ಯ ಎಂದು ಗೊತ್ತಿದ್ದರೂ ಸಹ ಅದನ್ನು ನಾಶ ಮಾಡುವುದಕ್ಕೆ ಹೆಚ್ಚಿನ ಅದ್ಯತೆ ಕೊಟ್ಟಿರುವ ಪರಿಣಾಮವನ್ನು ಈಗ ಎದುರಿಸುತ್ತಿದ್ದೇವೆ. ಬಳುವಳಿಯಾಗಿ ಬಂದ ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮ ಕರ್ತವ್ಯ ಎಂದರು.
ಸ್ಕೌಟ್ ಆಯುಕ್ತ ಉಮೇಶ್ ಶಾಸ್ತ್ರಿ ಮಾತನಾಡಿ, ಪ್ರಕೃತಿದತ್ತವಾದ ಪರಿಸರ ಉಳಿಸುವ ಬಗ್ಗೆ ಮಕ್ಕಳಲ್ಲಿ
ಅರಿವು ಮೂಡಿಸಬೇಕು. ಪರಿಸರ ಸ್ವತ್ಛತೆ ಸಹಾ ಇಂದಿನ ದಿನದಲ್ಲಿ ಮಹತ್ವವಾಗಿದೆ. ಪ್ರತೀ ಮಕ್ಕಳು ತಮ್ಮ ಮನೆಯ
ಅಂಗಳದಲ್ಲಿ ಒಂದೊಂದು ಗಿಡ ನೆಟ್ಟು ಪೋಷಿಸಬೇಕು ಎಂದರು. ನಗರ ಮಟ್ಟದ ಶಾಲಾ ವಿದ್ಯಾರ್ಥಿಗಳಿಗೆ
ಏರ್ಪಡಿಸಿದ್ದ ಪರಿಸರ ಕುರಿತ ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ಕೌಟ್- ಗೈಡ್ಸ್ ತರಬೇತುದಾರ ರಾಜೇಶ್ ಇದ್ದರು. ಸಹಾಯಕ ಆಯುಕ್ತೆ ಭಾರತಿ ಡಯಾಸ್ ಉಸ್ತುವಾರಿ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ