ಹತ್ಯೆಗೀಡಾದ ಹರ್ಷ ಹೆಸರಲ್ಲಿ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆ
ಬಡವಿದ್ಯಾರ್ಥಿಗಳಿಗೆ- ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಉದ್ದೇಶ
Team Udayavani, Apr 10, 2022, 3:46 PM IST
ಶಿವಮೊಗ್ಗ: ಇತ್ತೀಚೆಗೆ ಹತ್ಯೆಗೀಡಾದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತ ಹರ್ಷನ ಹೆಸರಲ್ಲಿ ‘ಹರ್ಷ ಚಾರಿಟೇಬಲ್ ಟ್ರಸ್ಟ್’ ಸ್ಥಾಪಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಹರ್ಷನ ಸಹೋದರಿ ಹಾಗೂ ಟ್ರಸ್ಟ್ ಅಧ್ಯಕ್ಷೆ ಅಶ್ವಿನಿ ಈ ವಿಷಯ ತಿಳಿಸಿದರು.
ಹರ್ಷನ ಸಾವಿನ ದುಃಖದಿಂದ ನಾವು ಹೊರಬಂದಿಲ್ಲ. ಮಗನನ್ನು ಕಳೆದುಕೊಂಡ ನಮ್ಮ ತಾಯಿ ಇನ್ನೂ ದುಃಖದಲ್ಲಿದ್ದಾರೆ. ತಂದೆಗೆ ಹುಷಾರಿಲ್ಲ. ಇವುಗಳ ಮಧ್ಯೆಯೇ ಸರ್ಕಾರ, ಸಂಘ-ಸಂಸ್ಥೆಗಳು, ಹಿಂದೂ ಧರ್ಮದ ಮುಖಂಡರು ನಮ್ಮ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಹರ್ಷನ ಕನಸಿನಂತೆ ಈ ಆರ್ಥಿಕ ಸಹಾಯದ ಒಂದು ಭಾಗವನ್ನು ಟ್ರಸ್ಟ್ ಗಾಗಿ ಮೀಸಲಿಡುತ್ತೇವೆ ಎಂದರು.
ಹರ್ಷ ಚಾರಿಟೇಬಲ್ ಟ್ರಸ್ಟ್ಗೆ ನನ್ನ ಸಹೋದರಿ ರಜನಿ ಉಪಾಧ್ಯಕ್ಷರಾಗಿದ್ದಾರೆ. ವ್ಯವಸ್ಥಾಪಕ ಟ್ರಸ್ಟಿಯಾಗಿ ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್, ಕಾರ್ಯದರ್ಶಿಯಾಗಿ ಸಚಿನ್ ರಾಯ್ಕರ್, ಜಂಟಿ ಕಾರ್ಯದರ್ಶಿಯಾಗಿ ಪುರುಷೋತ್ತಮ್ ಕೆ.ಕೆ., ಕೆ. ಫಣೀಶ್ ಖಜಾಂಚಿಯಾಗಿದ್ದಾರೆ ಎಂದರು.
ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್ ಮಾತನಾಡಿ, ಬಡತನದ ಮಧ್ಯೆ ಉತ್ತಮ ಸಾಧನೆ ಮಾಡಿ ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸ ಮುಂದುವರೆಸಲು ಕಷ್ಟಪಡುವ ಬಡ ವಿದ್ಯಾರ್ಥಿಗಳಿಗೆ ಆಸರೆಯಾಗುವುದು. ಅನಾರೋಗ್ಯದಿಂದಿರುವ ಬಡವರಿಗೆ ನೆರವು ನೀಡುವುದು, ಗೋಶಾಲೆಗಳ ನಿರ್ಮಾಣ ಮಾಡುವುದು ಟ್ರಸ್ಟ್ ನ ಮುಖ್ಯ ಉದ್ದೇಶ. ಪ್ರಮುಖವಾಗಿ ಈ ವರ್ಷ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು.
ಈಗಾಗಲೇ ಟ್ರಸ್ಟ್ ಪಿಎಫ್ಐ ಪ್ರಚೋದಿತ ಗಲಭೆಯಲ್ಲಿ ಮೃತರಾದ ವಿಶ್ವನಾಥ ಶೆಟ್ಟಿ ಅವರ ಪುತ್ರ ಯಶಸ್ ನ ವಿದ್ಯಾಭ್ಯಾಸಕ್ಕೆ ಮತ್ತು ಕಾಸರಗೋಡಿನಲ್ಲಿ ಮೃತರಾದ ಆರ್.ಎಸ್.ಎಸ್. ಕಾರ್ಯಕರ್ತ ಜ್ಯೋತಿಷ್ ಅವರ ಕುಟುಂಬಕ್ಕೆ 2 ಲಕ್ಷ ರೂ. ನೀಡಿರುವುದಲ್ಲದೇ ಅವರ ಎರಡನೇ ಮಗನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಭರವಸೆ ನೀಡಲಾಗಿದೆ. ಇದು ಟ್ರಸ್ಟ್ ಆರಂಭಕ್ಕೆ ಮುನ್ನುಡಿಯಾಗಿದೆ ಎಂದರು.
ಟ್ರಸ್ಟ್ ಇದೀಗ ಆರಂಭವಾಗಿದ್ದು, ಹರ್ಷನ ಕುಟುಂಬಕ್ಕೆ ಸಹಾಯ ಮಾಡಿದ ಹಣದ ಒಂದು ಭಾಗವನ್ನು ಇದಕ್ಕೆ ಮೀಸಲಿಡಲಾಗಿದೆ. ಅಲ್ಲದೇ, ಈ ಟ್ರಸ್ಟ್ಗೆ ಸಹಾಯ ಮಾಡುವವರು ಮುಂದಿನ ದಿನಗಳಲ್ಲೂ ಕೂಡ ಮಾಡಬಹುದಾಗಿದೆ ಎಂದರು.
ಗೋಷ್ಠಿಯಲ್ಲಿ ಹರ್ಷನ ತಂದೆ ನಾಗರಾಜ್, ತಾಯಿ ಪದ್ಮಾ ನಾಗರಾಜ್, ಸೋದರಿ ರಜನಿ, ಕಾರ್ಯದರ್ಶಿ ಸಚಿನ್ ರಾಯ್ಕರ್, ಜಂಟಿ ಕಾರ್ಯದರ್ಶಿ ಪುರುಷೋತ್ತಮ್ ಕೆ.ಕೆ, ಖಜಾಂಚಿ ಫಣೀಶ್, ವಿನಯ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’