ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ!


Team Udayavani, Mar 9, 2021, 10:14 AM IST

ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ!

ಶಿವಮೊಗ್ಗ: ಇಲ್ಲಿನ ಸೋಗಾನೆ ವಿಮಾನ ನಿಲ್ದಾಣದ ಬಳಿ ಭಾರಿ ಪ್ರಮಾಣದ ಸ್ಪೋಟಕ ತುಂಬಿದ್ದ ಎರಡು ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ 904 ಕೆ.ಜಿ ಜಿಲೆಟಿನ್ ಕಡ್ಡಿ, 3267 ಡಿಟೊನೇಟರ್ಗಳು ಸೇರಿದಂತೆ ಹಲವರು ವಸ್ತುಗಳು ಪತ್ತೆಯಾಗಿವೆ.

ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಎರಡು ವಾಹನದಲ್ಲಿ ಸ್ಪೋಟಕ ಪತ್ತೆಯಾಗಿದೆ. ಟಾಟಾ 407 ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪಿಕ್ ಅಪ್ ವಾಹನದಲ್ಲಿ 3267 ಎಲೆಕ್ಟ್ರಾನಿಕ್ ಡಿಟೊನೇಟರ್ ಗಳು, 9 ಮೀಟರ್ ನ 79 ಎಕ್ಸೆಲ್ ಗಳು, 3 ಮಿಟರ್ ನ 105 ಎಕ್ಸೆಲ್ ಗಳು ಪತ್ತೆಯಾಗಿವೆ.

ಬೆಂಗಳೂರಿನಿಂದ ಬಂತು ಟೀಮ್

ಮಾಹಿತಿ ತಿಳಿಯುತ್ತಿದ್ದಂತೆ ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದರು. ಸ್ಪೋಟಕಗಳನ್ನು ಸುರಕ್ಷಿತಗೊಳಿಸಿದ್ದು, ಆತಂಕ ದೂರವಾಗಿದೆ.

ಇದನ್ನೂ ಓದಿ:ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು, ನಾನು ನಿರಪರಾಧಿ: ಕಣ್ಣೀರಿಟ್ಟ ರಮೇಶ್ ಜಾರಕಿಹೊಳಿ

ಸ್ಪೋಟಕ ಇಲ್ಲಿ ಬಂದಿದ್ದು ಹೇಗೆ? ಯಾಕೆ?

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕಾಮಗಾರಿ ಸ್ಥಳದಲ್ಲೆ ಕ್ವಾರಿ ಒದಗಿಸಲಾಗಿದೆ. ಇಲ್ಲಿಯೇ ಬಂಡೆ ಸ್ಪೋಟಿಸಿ, ಕಾಮಗಾರಿಗೆ ಜೆಲ್ಲಿ ಬಳಕೆ ಮಾಡಬಹುದಾಗಿದೆ. ಇದಕ್ಕೆ ಸ್ಪೋಟಕೆ ಪೂರೈಕೆ ಮಾಡುವಂತೆ ಚಿಕ್ಕಬಳ್ಳಾಪುರದ ಸ್ಪೋಟಕ ಪೂರೈಕೆ ಕಂಪನಿಯೊಂದರ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.  ಬಂಡೆ ಸ್ಪೋಟಿಸಲು ಈ ಕಂಪನಿಯವರು ಸ್ಪೋಟಕಗಳನ್ನು ತಂದಿದ್ದರು. ಎರಡು ವಾಹನಗಳನ್ನು ತಂದಿದ್ದ ಸ್ಪೋಟಕಗಳನ್ನು ಹಾಗೆ ಬಿಟ್ಟು ಹೋಗಿದ್ದರಿಂದ, ಆತಂಕ ಸೃಷ್ಟಿಯಾಗಿತ್ತು.

ಬಿಟ್ಟು ಹೋಗಿದ್ದು ಏಕೆ?

ಹುಣಸೋಡು ಕ್ವಾರಿಯಲ್ಲಿ ಸ್ಪೋಟ ಪ್ರಕರಣದ ಬಳಿಕ ಸ್ಪೋಟಕ ಬಳಕೆಗೆ ಕಡಿವಾಣ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಪೋಟಕ ಪೂರೈಕೆ ಕಂಪನಿಯವರು ಸ್ಪೋಟಕ ಬಳಕೆ ಬಗ್ಗೆ ಜಿಲ್ಲಾಧಿಕಾರಿ ಅವರ ಅನುಮತಿ ಕೇಳಿದರು. ಮಂಗಳೂರಿನಲ್ಲಿರುವ ಪೆಟ್ರೋಲಿಯಂ ಮತ್ತು ಎಕ್ಸ್ಪ್ಲೋಸಿವ್ಸ್ ಸೇಫ್ಟಿ ಆರ್ಗನೈಸೇಷನ್ನಿಂದ ಅನುಮತಿ ಪಡೆಯುವಂತೆ ಡಿಸಿ ಸೂಚಿಸಿದ್ದರು. ಅನುಮತಿಗಾಗಿ ಕೇಳಿದಾಗ ಸ್ಪೋಟಕ ಪೂರೈಕೆ ಕಂಪನಿಯವರು ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ. ಇದೇ ಗೊಂದಲದಿಂದ ಸ್ಪೋಟಕವನ್ನು ಅಲ್ಲಿಯೇ ಇರಿಸಿ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಗೆ ಬೆಳಂಬೆಳಗ್ಗೆ ಎಸಿಬಿ ಶಾಕ್..!

ಉಲ್ಲಂಘನೆ ಆದ ನಿಯಮವೇನು?

ಹೇಗೆಂದರೆ ಹಾಗೆ ಸ್ಪೋಟಕವನ್ನು ಸಾಗಣೆ ಮಾಡುವಂತಿಲ್ಲ. 150 ಕಿ.ಮೀ ಮಾತ್ರ ಸ್ಪೋಟಕ ಸಾಗಣೆ ಮಾಡಬಹುದು. ಆದರೆ ಸ್ಪೋಟಕ ಪೂರೈಕೆ ಕಂಪನಿಯು ಚಿಕ್ಕಬಳ್ಳಾಪುರದಿಂದ ಶಿವಮೊಗ್ಗದವರೆಗೆ ಸ್ಪೋಟಕ ಪೂರೈಕೆ ಮಾಡಿ ನಿಯಮನ್ನು ಉಲ್ಲಂಘಿಸಿತ್ತು. ಅಲ್ಲಿ ಸ್ಪೋಟಕ ಬಳಕೆಗೆ ಅವಕಾಶವಿಲ್ಲ ಎಂದು ಮಂಗಳೂರಿನ ಪೆಟ್ರೋಲಿಯಂ ಮತ್ತು ಎಕ್ಸ್ಪ್ಲೋಸಿವ್ಸ್ ಸೇಫ್ಟಿ ಆರ್ಗನೈಸೇಷನ್ನಿಂದ ತಿಳಿದು ಬಂದಿತ್ತು. ಹಾಗಾಗಿ ಸ್ಪೋಟಕ ಪೂರೈಕೆ ಕಂಪನಿಯವರು ಸ್ಪೋಟಕಗಳನ್ನು ಅಲ್ಲಿಯೇ ಬಿಟ್ಟು ತೆರಳಿದ್ದರು.

ವಾಹನದಲ್ಲಿ ಸ್ಪೋಟಕ ಇರುವ ವಿಚಾರ ತಿಳಿಯುತ್ತಿದ್ದಂತೆ ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ದೀಪಕ್ ಅವರ ನೇತೃತ್ವದ ತಂಡ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಂಡಿತ್ತು.

ನಿಗದಿತ ದೂರಕ್ಕಿಂತಲೂ ಹೆಚ್ಚು ದೂರ ಸ್ಪೋಟಕ ಸಾಗಣೆ ಮತ್ತು ಆ ಬಳಿಕ ಸ್ಪೋಟಕವನ್ನು ಕೊಂಡೊಯ್ಯದೆ ಅಪಾಯಕಾರಿ ಸ್ಥಿತಿಯಲ್ಲಿ ಬಿಟ್ಟು ಹೋಗಿರುವ ಸಂಬಂಧ, ಚಿಕ್ಕಬಳ್ಳಾಪುರದ ಸ್ಪೋಟಕ ಪೂರೈಕೆ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.