ಶಿವಮೊಗ್ಗದ ಮೂರು ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಸ್ತರಣೆ
Team Udayavani, Aug 22, 2022, 8:17 PM IST
ಶಿವಮೊಗ್ಗ: ನಗರದ ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 26ರ ಬೆಳಗ್ಗೆ ಆರು ಗಂಟೆವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಸೋಮವಾರ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಭಾವಚಿತ್ರ ತೆರವು ಸಂಬಂಧಿಸಿದಂತೆ ಆಗಸ್ಟ್ 15 ರಂದು ನಡೆದಿದ್ದ ಗಲಭೆ ಬಳಿಕ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಡಿಸಿ ಸೆಲ್ವಮಣಿ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಇದೀಗ ಶಿವಮೊಗ್ಗದಲ್ಲಿ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯಲ್ಲಿ ಸಡಿಲಿಕೆ ಮಾಡಲಾಗಿದ್ದು, ನಗರಾದ್ಯಂತ ವಿಧಿಸಲಾಗಿದ್ದ ನಿಷೇಧಾಜ್ಞೆ ಇದೀಗ ಮೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಮಾತ್ರ ಸೀಮಿತವಾಗಿದೆ.
ಹಳೆ ಶಿವಮೊಗ್ಗ ಭಾಗದ ಕೋಟೆ, ದೊಡ್ಡಪೇಟೆ, ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದ್ದು, ಆಗಸ್ಟ್ 26ರಂದು ಬೆಳಗ್ಗೆ ಆರು ಗಂಟೆವರೆಗೆ ಈ ಮೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ