ಬೆಳೆವಿಮೆ ಹೆಸರಲ್ಲಿ ರೈತರಿಗೆ ಅನ್ಯಾಯ
Team Udayavani, Jul 6, 2018, 5:29 PM IST
ಸಾಗರ: ಬೆಳೆವಿಮೆ ಹೆಸರಿನಲ್ಲಿ ತಾಲೂಕಿನ ರೈತರಿಗೆ ದೊಡ್ಡಮಟ್ಟದ ಅನ್ಯಾಯವಾಗಿದೆ. ವಿಮೆ ಹೆಸರಿನಲ್ಲಿ ಕೇಂದ್ರ ಸರ್ಕಾರದಿಂದ 90 ಲಕ್ಷ ರೂ., ರಾಜ್ಯ ಸರ್ಕಾರದಿಂದ 90 ಲಕ್ಷ ರೂ. ಹಾಗೂ ರೈತರಿಂದ 90 ಲಕ್ಷ ರೂ. ಪಾವತಿಸಿಕೊಳ್ಳಲಾಗಿದೆ. ಆದರೆ ತಾಲೂಕಿನ 10 ಗ್ರಾಪಂನ 1662 ರೈತರಿಗೆ ಸುಮಾರು 62 ಲಕ್ಷ ರೂ. ಪರಿಹಾರ ಮಾತ್ರ ನೀಡಲಾಗಿದೆ ಎಂದು ತಾಪಂ ಅಧ್ಯಕ್ಷ ಬಿ.ಎಚ್. ಮಲ್ಲಿಕಾರ್ಜುನ ಹಕ್ರೆ ದೂರಿದರು.
ನಗರದ ತಾಪಂ ಸಭಾಂಗಣದಲ್ಲಿ ಗುರುವಾರ ಕರೆಯಲಾಗಿದ್ದ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಬಂಧಪಟ್ಟ ವಿಮೆ ಕಂಪನಿ ಎಲ್ಲಿದೆ, ಪರಿಹಾರಕ್ಕೆ ಯಾರನ್ನು ಕೇಳಬೇಕು ಎನ್ನುವ ಸಮರ್ಪಕ ಮಾಹಿತಿ ರೈತರಿಗೂ ಇಲ್ಲ. ಜನಪ್ರತಿನಿಧಿಗಳಿಗೂ ಇಲ್ಲವಾಗಿದೆ . ರೈತರನ್ನು ಹಾಗೂ ಚುನಾಯಿತ ಪ್ರತಿನಿಧಿಗಳನ್ನು ಕತ್ತಲಿನಲ್ಲಿಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ಕೆಲವು ಅಧಿಕಾರಿಗಳಿಗೆ ಈ ಕುರಿತು ವಿಚಾರಿಸಿದರೆ ಡಿಸಿಸಿ ಬ್ಯಾಂಕ್ ಕಡೆ ಬೊಟ್ಟು ಮಾಡುತ್ತಿದ್ದಾರೆ. ಯಾರನ್ನು ನಂಬಬೇಕು ಎನ್ನುವುದೇ ತಿಳಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ವಾರ ಡಿಸಿಸಿ ಬ್ಯಾಂಕ್, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ಸಭೆ ಕರೆದು ವಿಮೆ ಅವ್ಯವಸ್ಥೆ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.
ಆರೋಗ್ಯ ಇಲಾಖೆ ವತಿಯಿಂದ ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ಸಲ್ಲಿಸಲು ಬಿಡಲಾಗಿರುವ ಮೊಬೈಲ್ ವಾಹನ ಸರಿಯಾದ ಸೇವೆ ನೀಡುತ್ತಿಲ್ಲ. ಸರ್ಕಾರದಿಂದ ಪ್ರತಿ ತಿಂಗಳು 1.25 ಲಕ್ಷ ರೂ. ನೀಡಲಾಗುತ್ತಿದ್ದು, ಸೇವೆ ಸರಿಯಾಗಿ ಸಿಗುತ್ತಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಸಂಬಂಧಪಟ್ಟ ಏಜೆನ್ಸಿಗೆ ಸೂಚನೆ ನೀಡಿದರೂ ತಿದ್ದಿಕೊಂಡಿಲ್ಲ. ಹಾಲಿ ಮೊಬೈಲ್ ಯೂನಿಟ್ನಲ್ಲಿ ವೃದ್ಧ ವೈದ್ಯರೊಬ್ಬರನ್ನು ನೇಮಕ ಮಾಡಿದ್ದಾರೆ. ಜೊತೆಗೆ ಮೊಬೈಲ್ ಯೂನಿಟ್ ಸಿಬ್ಬಂದಿಗಳು ಜಗಳ ಮಾಡಿಕೊಳ್ಳುತ್ತಾರೆ ಎಂದು ದೂರುಗಳಿವೆ. ತಕ್ಷಣ ಏಜೆನ್ಸಿ ವಿರುದ್ಧ ಕ್ರಮ ಜರುಗಿಸಿ ಎಂದು ಆರೋಗ್ಯಾ ಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿನಲ್ಲಿ ವಿದ್ಯುತ್ ಸರಬರಾಜುದಾರರ ಸೌಹಾರ್ದ ಸಹಕಾರ ಸಂಘ ಸ್ಥಾಪಿಸುವ ಚರ್ಚೆ ನಡೆಯುತ್ತಿದೆ. ವಿದ್ಯುತ್
ಸರಬರಾಜು ಮಾಡಲು ಮಧ್ಯವರ್ತಿಗಳ ಅಗತ್ಯ ಇದೆಯೇ ಎಂದು ಪ್ರಶ್ನಿಸಿದ ಹಕ್ರೆ, ಇದರ ಸಾಧಕ ಬಾಧಕಗಳ ಕುರಿತು ಚರ್ಚೆ ಅಗತ್ಯ. ಈಗಾಗಲೇ ಹಿಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಜೋಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾಗರ ಮತ್ತು ಹೊಸನಗರ ಭಾಗಕ್ಕೆ ದಿನದ 24 ಗಂಟೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ವಿದ್ಯುತ್ ನೀಡಲು ಮನವಿ ಸಲ್ಲಿಸಲಾಗಿದೆ. ಈ ಕುರಿತು ಮತ್ತೂಮ್ಮೆ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ ಎಂದು ಹೇಳಿದರು. ತಾಪಂ ಕಾರ್ಯ ನಿರ್ವಾಹಣಾಧಿಕಾರಿ ಮಂಜುನಾಥಸ್ವಾಮಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
MUST WATCH
ಹೊಸ ಸೇರ್ಪಡೆ
UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.