ಬಾರದ ಬೆಳೆವಿಮೆ: ರೈತರ ಆಕ್ರೋಶ


Team Udayavani, Dec 6, 2020, 4:43 PM IST

ಬಾರದ ಬೆಳೆವಿಮೆ: ರೈತರ ಆಕ್ರೋಶ

ಸಾಂದರ್ಭಿಕ ಚಿತ್ರ

ಶೃಂಗೇರಿ: ಕೇಂದ್ರ ಸರ್ಕಾರದ ಫಸಲ್‌ ಬಿಮಾ ಯೋಜನೆಯಡಿ ವಿಮೆ ಕಟ್ಟಿದ ತಾಲೂಕಿನ ರೈತರಿಗೆ ಇದುವರೆಗೂ ಬೆಳೆ ವಿಮೆ ನೀಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ 17 ತಿಂಗಳ ಹಿಂದೆ ತಾಲೂಕಿನಲ್ಲಿ ರೈತರು ಫಸಲ್‌ ಬಿಮಾ ಯೋಜನೆಯಡಿ ವಿಮೆ ಕಂತು ಕಟ್ಟಿ ನೋಂದಾಯಿಸಿಕೊಂಡಿದ್ದರು. ಈ ಸಾಲಿನಲ್ಲಿ 2020 ರ ಮೇ ತಿಂಗಳಿನಲ್ಲಿಯೂ ರೈತರು ನೋಂದಾಯಿಸಿದ್ದು ಬೆಳೆ ಹಾನಿಯಾದಾಗ ಸರ್ಕಾರದಿಂದ ಪರಿಹಾರ ಧನ ದೊರಕುತ್ತದೆ ಎಂಬ ಭರವಸೆಯಿಂದ ಇದ್ದರು. ಆದರೆ ಇದುವರೆಗೂ ಸಹ ಆ ವಿಮೆ ರೈತರಿಗೆ ತಲುಪಿಲ್ಲ. ಸಮಸ್ಯೆ ವಿಚಾರಿಸಲುಹೋದರೆ ಸ್ಪಷ್ಟ ಮಾಹಿತಿ ದೊರಕುತ್ತಿಲ್ಲ. ಇದರಿಂದ ವಂಚಿತ ರೈತರು ಏನು ಮಾಡಬೇಕು ಎಂಬುದು ಅವರ ಚಿಂತೆಯಾಗಿದೆ. ವಿಮೆ ಹಣ ಬರದಿದ್ದರೆ ಯಾರಿಗೆ ಕೇಳಬೇಕು ಅಥವಾ ಯಾರ ಮೇಲೆ ರೈತರು ಕೇಸು ದಾಖಲಿಸಬೇಕು. ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂಬುದು ರೈತರ ಒತ್ತಾಯವಾಗಿದೆ.

ಫಸಲ್‌ ಭಿಮಾ ಯೋಜನೆಯಡಿ 1 ಹೆಕ್ಟೇರ್‌ ಅಡಕೆ ತೋಟಕ್ಕೆ 19200/- ರೂ. ವಿಮೆ ಕಟ್ಟಬೇಕಾಗಿರುತ್ತದೆ. ಇದರಲ್ಲಿ ರೈತರಿಂದ1 ಹೆಕ್ಟೇರಿಗೆ 6400 ರೂ. ವಿಮೆ ಕಂತು ಕಟ್ಟಿಸಲಾಗುತ್ತದೆ. ಉಳಿದ ಕಂತನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಮೆ ಕಂತುತುಂಬಬೇಕಾಗುತ್ತದೆ. ತಾಲೂಕಿನಲ್ಲಿ ಈ ಬಾರಿ ಅತಿವೃಷ್ಟಿ ಪ್ರದೇಶ ಎಂದು ಈಗಾಗಲೇ ಸರ್ಕಾರ ಘೋಷಿಸಿದೆ. ಈ ಬಾರಿ 140 ಕ್ಕೂ ಹೆಚ್ಚು ಇಂಚು ಮಳೆ ದಾಖಲೆ ಪ್ರಮಾಣದಲ್ಲಾಗಿದೆ. ತೋಟಗಾರಿಕಾ ಬೆಳೆಗಳು ಅತಿವೃಷ್ಟಿಯಿಂದಾಗಿ ಸಂಪೂರ್ಣ ಹಾಳಾಗಿವೆ. ಅಡಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಕೊಳೆ ರೋಗ ತಗುಲಿ ಬೆಳೆ ಸಂಪೂರ್ಣ ನಾಶವಾಗಿ ರೈತರಿಗೆ ಬೆಳೆ ಕೈಗೆ ಸಿಗದಂತಾಗಿದೆ.

ಭತ್ತ, ಅಡಕೆಸಹಿತ ತೋಟಗಾರಿಕಾ ಬೆಳೆಗೆ ನೀಡಲಾಗುವ ಬೆಳೆ ವಿಮೆ ಯೋಜನೆ ಪರಿಹಾರ ಮೊತ್ತದ ಹಂಚಿಕೆ ಕಾರ್ಯ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿದೆ ಎನ್ನಲಾಗಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇರುವರೆಗೂ ರೈತರ ಖಾತೆಗೆ ಜಮೆ ಮಾಡಲು ಕ್ರಮ ಕೈಗೊಳ್ಳದಿರುವುದು ಬೇಜವಾಬ್ದಾರಿತನ ತೋರಿಸುತ್ತದೆ. ಜೂ.1 ರಿಂದ ಮುಂದಿನ ಜೂನ್‌ ಕೊನೆಯವರೆಗೆ ಈ ವಿಮೆಯ ಅವ ಧಿ ಇದ್ದು ದಾಖಲೆ, ಹವಾಮಾನ ಆಧಾರಿತ ಪರಿಶೀಲನೆ, ಲೆಕ್ಕಾಚಾರಗಳೆಲ್ಲ ಸೆಪ್ಟೆಂಬರ್‌ ಒಳಗೆ ವಿಮೆ ಹಣ ರೈತರ ಖಾತೆಗೆ ಜಮೆಯಾಗುತ್ತಿತ್ತು. ಆದರೆ ಈ ಬಾರಿ ನವೆಂಬರ್‌ ಕಳೆದು ಡಿಸೆಂಬರ್‌ ತಿಂಗಳು ಬಂದರೂ

ರೈತರ ಖಾತೆಗೆ ಪರಿಹಾರ ಮೊತ್ತ ಜಮೆಯಾಗಿಲ್ಲ. ಈಗಾಗಲೇ ಮಲೆನಾಡು ಭಾಗದಲ್ಲಿ ರೈತರು ಅತಿವೃಷ್ಟಿಯಿಂದ ಹೈರಾಣಾಗಿದ್ದು, ಇದ್ದ ಅಲ್ಪಸ್ವಲ್ಪ ಬೆಳೆಯನ್ನು ಉಳಿಸಿಕೊಳ್ಳದೆ ಪರದಾಡುವಂತಾಗಿದೆ. ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಿ ಫಸಲ್‌ ಬಿಮಾ ಯೋಜನೆಯಡಿ ವಿಮೆ ಕಟ್ಟಿದ ರೈತರಿಗೆ ವಿಮೆ ಹಣ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ರೈತರ ಒತ್ತಾಯವಾಗಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರದಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ರೈತರು ವಿಮೆ ಕಟ್ಟಿದ್ದುಆದರೆ ಇದುವರೆಗೂ ಬೆಳೆ ವಿಮೆ ನೀಡಲಾಗಿಲ್ಲ. ಕೆಲವು ತಾಂತ್ರಿಕ  ಕಾರಣಗಳಿಂದಾಗಿ ಹಾಗೂ ಕೋವಿಡ್‌ -19 ಹಿನ್ನೆಲೆಯಲ್ಲಿ ದೇಶ ಸಂಕಷ್ಟ ಸ್ಥಿತಿ ಎದುರಿಸುತ್ತಿರುವ ಸಂದರ್ಭದಲ್ಲಿ ವಿಮೆ ಜಮಾ ಮಾಡಲು ತೊಡಕುಂಟಾಗಿದೆ. ಮುಂದಿನ ದಿನಗಳಲ್ಲಿ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.  -ಶೋಭಾ ಕರಂದ್ಲಾಂಜೆ, ಸಂಸದೆ

ಕಳೆದ 2 ವರ್ಷದಿಂದ ಫಸಲ್‌ ಬಿಮಾ ಯೋಜನೆಯಡಿ ತಾಲೂಕಿನಲ್ಲಿ ರೈತರಿಗೆ ಬೆಳೆ ವಿಮೆ ಜಮೆ ಆಗಿತ್ತು. ಈ ಬಾರಿ ಇನ್ನೂ ಬಂದಿಲ್ಲ. ಈ ಬಗ್ಗೆ ಸಂಸದರ ಹಾಗೂ ಮಾಜಿ ಸಚಿವರ ಗಮನಕ್ಕೆ ತರಲಾಗಿದೆ.– ಎ. ಸುರೇಶ್ಚಂದ್ರ, ಮ್ಯಾಮ್ಕೋಸ್‌ ನಿರ್ದೇಶಕರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.