Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !
Team Udayavani, Mar 25, 2024, 5:54 PM IST
ತೀರ್ಥಹಳ್ಳಿ : ತಾಲ್ಲೂಕಿನ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ವಿರುದ್ಧ ಹೆಗ್ಗೋಡಿನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದ 29 ನೇ ದಿನವನ್ನು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು.
ಕಾಮ ದಹನದ ಬದಲು “ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು” ಎಂದು ರೈತರು ಘೋಷಣೆ ಕೂಗುತ್ತಾ ಹುಲ್ಲಿನ ಗೊಂಬೆಯನ್ನು ದಹಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸೌಳಿ ನಾಗರಾಜ್ ಹಿಂದೆ ಪೆರಿಯಾರ್, ಅಂಬೇಡ್ಕರ್ ಮುಂತಾದ ಜನಪರ ನಾಯಕರು ಮನುಸ್ಮ್ರತಿಯಂತಹ ಜನವಿರೋಧಿ ಗ್ರಂಥಗಳನ್ನು ಸುಟ್ಟಿದ್ದರು. ಪೂರ್ಣ ಚಂದ್ರ ತೇಜಸ್ವಿ, ಪ್ರೊ. ಎಂ. ಡಿ. ನಂಜುಂಡಸ್ವಾಮಿ, ಎನ್. ಡಿ. ಸುಂದರೇಶ್, ಕಡಿದಾಳು ಶಾಮಣ್ಣರಂತಹ ಚಿಂತಕರು ಧಾನ್ಯ ಲೆವಿ ಕಾನೂನಿನ, ರೈತರ ಆಸ್ತಿ ಜಫ್ತಿ ಹರಾಜಿನ ನೋಟೀಸುಗಳನ್ನು ಸುಟ್ಟು ಹಾಕಿದ್ದರು.
ಮುಂದೆ ರೈತ ಸಂಘ ದೇಶದ ಜನವಿರೋಧಿ ರಾಜಕಾರಣವು ದೇಶವನ್ನು ಕಾರ್ಪೊರೇಟ್ ಬಂಡವಾಳಿಗರ ಕೈಗೆ ಒಪ್ಪಿಸುವುದನ್ನು ವಿರೋಧಿಸಿ ಹಲವು ಬಹುರಾಷ್ಟ್ರೀಯ ಕಂಪೆನಿಗಳ ಮೇಲೆ ಅಹಿಂಸಾತ್ಮಕ ದಾಳಿ ನಡೆಸಿ ಅವುಗಳ ದಾಖಲೆ ಪತ್ರಗಳನ್ನು ಬೆಂಕಿಗೆ ಎಸೆಯಲಾಯಿತು. ಈಗ ನಮ್ಮ ದೇಶದ ರಾಜಕಾರಣ ಪಕ್ಷಾತೀತವಾಗಿ ನೀರು, ನೆಲ, ಕೃಷಿಯನ್ನೂ ಬಿಡದೆ ಎಲ್ಲಾ ಕ್ಷೇತ್ರಗಳನ್ನೂ ಕಾರ್ಪೊರೇಟಿಕರಣ ಮಾಡುತ್ತಿದೆ. ಆದ್ದರಿಂದ ನಾವು ಈಗ ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕುವ ನಿಟ್ಟಿನಲ್ಲಿ ಸಾಂಕೇತಿಕವಾಗಿ ಈ ಹೋಳಿ ಹಬ್ಬದ ಸಂದರ್ಭವನ್ನು ಹೀಗೆ ಆಚರಿಸುತ್ತಿದ್ದೇವೆ ‘ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ