ಜನ ಜಾಗೃತಿಗಾಗಿ ಉಪವಾಸ ಸತ್ಯಾಗ್ರಹ
Team Udayavani, May 31, 2020, 8:10 AM IST
ತೀರ್ಥಹಳ್ಳಿ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ತಾರತಮ್ಯ ನೀತಿ, ಆಡಳಿತ ವೈಫಲ್ಯದ ಕುರಿತು ಜನ ಜಾಗೃತಿಗಾಗಿ ಜೂನ್ 1ರಂದು ತಾಲೂಕು ಕಚೇರಿ ಮುಂಭಾಗ ಉಪವಾಸ ಕುಳಿತುಕೊಳ್ಳುತ್ತೇನೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.
ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಮುಖಂಡರ ಷಡ್ಯಂತ್ರ ಹಾಗೂ ಚಿತಾವಣೆಯಿಂದ ದಾಖಲಿಸಿರುವ ರಾಜಕೀಯ ಪ್ರೇರಿತ ಎಫ್ಐಆರ್ ಅನ್ನು ರದ್ದುಪಡಿಸುವಂತೆ ಆಗ್ರಹಪಡಿಸಿದರು. ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಮಾಡಿರುವ ಕೋಮು ಪ್ರಚೋದನೆ ಭಾಷಣದ ವಿರುದ್ಧ ಭಾರತ ದಂಡ ಸಂಹಿತೆ ಪ್ರಕಾರ ಸ್ವಯಂಪ್ರೇರಿತ ದೂರು ದಾಖಲು ಮಾಡಬೇಕು ಎಂದರು.
ರಾತ್ರೋರಾತ್ರಿ ಮರಳು ಕಳ್ಳತನ ಮಾಡುವ ಬಿಜೆಪಿಯವರೇನು ಸತ್ಯ ಹರಿಶ್ಚಂದ್ರರೇ? ಹೊಸಳ್ಳಿ, ಹೊಸನಗರ, ಮುಂಡುವಳ್ಳಿ ಕ್ವಾರೆಗಳಿಗೆ ಏಕೆ ಜ್ಞಾನೇಂದ್ರ ಭೇಟಿ ನೀಡುವುದಿಲ್ಲ ಎಂದು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೆಸ್ತೂರು ಮಂಜುನಾಥ್, ವಿಶ್ವನಾಥ್ ಶೆಟ್ಟಿ ಮತ್ತಿತರ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ