ಶರಾವತಿ ಮುಳುಗಡೆ ಸಂತ್ರಸ್ತರಿಂದ ಉಪವಾಸ ಸತ್ಯಾಗ್ರಹ
Team Udayavani, Nov 19, 2019, 3:18 PM IST
ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಕೋಟಾದಡಿ ಸಿಕ್ಕ ಜಮೀನನ್ನು ತಮ್ಮ ಸ್ವಾಧೀನಕ್ಕೆ ನೀಡಬೇಕು ಎಂದು ಸಂತ್ರಸ್ತ ಕುಟುಂಬವೊಂದು ಸೋಮವಾರದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದೆ.
ಭದ್ರಾವತಿ ತಾಲೂಕು ಕೆಂಚನಹಳ್ಳಿ ಕಾಲೋನಿ ನಿವಾಸಿ ಸೀತಾರಾಮ ಕುಟುಂಬದವರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ, ಸರ್ಕಾರ ಸಂತ್ರಸ್ತರಿಗಾಗಿ ಜಮೀನು ನೀಡಿದ್ದರೂ ಕೂಡ ಅಧಿ ಕಾರಿಗಳು ಇದುವರೆಗೂ ತಮಗೆ ಮಂಜೂರು ಮಾಡಿಲ್ಲ. ಸಾಗುವಳಿ ಮಾಡಲು ಕೂಡ ಆಗುತ್ತಿಲ್ಲ ಎಂದು ದೂರಿದರು.
ಮೂಲತಃ ಹೊಸನಗರ ತಾಲೂಕು ನಗರ ಹೋಬಳಿಯ ಇಂದ್ರೋಡಿ ಗ್ರಾಮದವರು ನಾವಾಗಿದ್ದು, ಶರಾವತಿ ಹಿನೀ°ರಲ್ಲಿಮುಳುಗಡೆಯಾಗಿದ್ದರಿಂದ ಭದ್ರಾವತಿ ತಾಲೂಕುಕೂಡ್ಲಿಗೆರೆ ಹೋಬಳಿ ಯರೆಹಳ್ಳಿ ಗ್ರಾಮದಲ್ಲಿ 1964ರಲ್ಲಿಯೇ 3 ಎಕರೆ ಜಮೀನಿಗೆ ಸಾಗುವಳಿ ಚೀಟಿ ಆದೇಶ ನೀಡಿದ್ದರು. ಈ ಜಮೀನಿಗೆ ಸಂಬಂಧಪಟ್ಟ ಸಂಪೂರ್ಣ ದಾಖಲೆಗಳು ಕೂಡ ನಮ್ಮ ಹೆಸರಿಗೆ ಇವೆ. ಆದರೂ ಕೂಡ ಇದುವರೆಗೂ ನಮ್ಮ ಜಮೀನಿಗೆ ಪಕ್ಕಾ ಪೋಡು ಮಾಡಲು ಆಗಿಲ್ಲ. ಕಂದಾಯ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ ವಹಿಸಿದ್ದಾರೆ. ಸಾಗುವಳಿ ಮಾಡಲು ಹೋದರೆ ಅರಣ್ಯ ಇಲಾಖೆಯವರು ತಡೆಯುತ್ತಾರೆ ಎಂದು ದೂರಿದರು.
ನಾವು ಈ ಜಮೀನನ್ನೇ ನಂಬಿ ಜೀವನ ಮಾಡುತ್ತಿದ್ದೇವೆ. ನಮಗೆ ಬೇರೆ ಎಲ್ಲಿಯೂ ಜಮೀನು ಇಲ್ಲ. ನಮ್ಮ ಜತೆಗಿದ್ದ ರೈತರೆಲ್ಲರಿಗೂ ಸಾಗುವಳಿ ಚೀಟಿ ನೀಡಲಾಗಿದೆ. ಆದರೆ ನಮಗೆ ಮಾತ್ರ ಆಗಿಲ್ಲ. ಈಗಲಾದರೂ ನಮಗೆ ಸಾಗುವಳಿ ಚೀಟಿ ನೀಡಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ವಿಷ ಸೇವಿಸಿ ಪ್ರಾಣತ್ಯಾಗ ಮಾಡುತ್ತೇವೆ ಎಂದು ಮನವಿದಾರರು ಎಚ್ಚರಿಸಿದ್ದಾರೆ. ಸೀತಾರಾಮು, ಲಲಿತಮ್ಮ, ಮಹೇಶ್, ಮಹದೇವಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ