ಕುವೆಂಪು ವಿವಿ ಕುಲಪತಿ- ಆಡಳಿತ ಕುಲಸಚಿವರ ನಡುವೆ ಭಿನ್ನಮತ: ಠಾಣೆಯಲ್ಲಿ ದೂರು-ಪ್ರತಿದೂರು


Team Udayavani, May 13, 2021, 9:52 AM IST

ಕುವೆಂಪು ವಿವಿ ಕುಲಪತಿ- ಆಡಳಿತ ಕುಲಸಚಿವರ ನಡುವೆ ಭಿನ್ನಮತ: ಠಾಣೆಯಲ್ಲಿ ದೂರು-ಪ್ರತಿದೂರು

ಶಿವಮೊಗ್ಗ: ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರ ಆಶಯದಂತೆ ನಡೆಯುತ್ತಿರುವ ಕುವೆಂಪು ವಿಶ್ವವಿದ್ಯಾಲಯವು ಜಾತಿ, ಒಳಜಾತಿ, ಸ್ವಜನ ಪಕ್ಷಪಾತ, ಗುಂಪುಗಾರಿಕೆ, ಭ್ರಷ್ಟಾಚಾರದ ಕಾರಣಕ್ಕೆ ಮತ್ತೊಮ್ಮೆ ಸುದ್ದಿಯಲ್ಲಿದೆ.

ರಾಜ್ಯದ ಪ್ರತಿಷ್ಠಿತ ವಿವಿಗಳಲ್ಲಿ ಒಂದಾದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಹಾಗೂ ಆಡಳಿತ ಕುಲಸಚಿವರ ಪ್ರೊ.ಪಾಟೀಲ್‌ ನಡುವೆ ಶೀತಲ ಸಮರ ಆರಂಭವಾಗಿದ್ದು. ಇದರ ಪರಿಣಾಮ ಇಬ್ಬರೂ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿದೂರು ನೀಡಿದ್ದಾರೆ.

ಇದನ್ನೂ ಓದಿ:ಸೈಕಲ್ ಕೊಳ್ಳಲು ಇಟ್ಟಿದ್ದ ಪಿಗ್ಗಿ ಬ್ಯಾಂಕ್ ಹಣವನ್ನು ಕೋವಿಡ್ ನಿಧಿಗೆ ಕೊಟ್ಟ ಏಳರ ಪೋರ.!

ಈ ಮೂಲಕ ಉನ್ನತ ಹುದ್ದೆಯಲ್ಲಿರುವ ನಡುವಿನ ಆಂತರಿಕ ಕಚ್ಚಾಟ ಹಾಗೂ ವಿಶ್ವವಿದ್ಯಾಲಯದ ಘನತೆ ಬೀದಿಗೆ ಬಂದಂತಾಗಿದೆ.

ಏನಿದು ಗಲಾಟೆ?

ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿದ್ದ ಪ್ರೊ.ಪಾಟೀಲ್‌ ಅವರ ಜಾಗಕ್ಕೆ ಕೆಎಎಸ್‌ ಅಧಿಕಾರಿ ಶ್ರೀಧರ್‌ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಮೇ 10 ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಶ್ರೀಧರ್‌ ಅವರು ಮೇ 11ರಂದು ಅಧಿಕಾರಿ ಸ್ವೀಕರಿಸಿದ್ದಾರೆ. ಆದರೆ ಅವರ ನೇಮಕವನ್ನು ಸರಕಾರ ರದ್ದು ಮಾಡಿ ಅವರನ್ನು ಕೌಶಾಲ್ಯಾಭಿವೃದ್ಧಿ ನಿಗಮದ ಶಿವಮೊಗ್ಗ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ನೀಡಿದೆ. ಈ ನಡುವೆ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಅವರು ಪ್ರೊ.ಪಾಟೀಲ್‌ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಅವರನ್ನು ಮಾತೃ ಇಲಾಖೆಗೆ ಮರಳಿಸಿದೆ. ಅಲ್ಲದೇ ಕಚೇರಿಗೆ ಬೀಗ ಕೂಡ ಹಾಕಿಸಿದ್ದರು. ಬುಧವಾರ ವಿವಿಗೆ ಆಗಮಿಸಿದ ಪ್ರೊ.ಪಾಟೀಲ್‌ ಬೀಗ ಒಡೆದು ಒಳಪ್ರವೇಶಿಸಿದ್ದಾರೆ. ಇದನ್ನು ಪ್ರಶ್ನಿಸಿ ಕುಲಸಚಿವ ಬಿ.ಪಿ.ವೀರಭದ್ರಪ್ಪ ಬುಧವಾರ ಪಾಟೀಲ್‌ ವಿರುದ್ಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಈ ವ್ಯವಸ್ಥೆ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? ಕೇಂದ್ರದ ವಿರುದ್ಧ ಕುಮಾರಸ್ವಾಮಿ ಕಿಡಿ

ಇದಕ್ಕೆ ಪ್ರತಿಯಾಗಿ ಪ್ರೊ.ಪಾಟೀಲ್‌ ಸಹ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ಶ್ರೀಧರ್‌ ನೇಮಕ ಮರುದಿನವೇ ರದ್ದಾಗಿದೆ. ಇದು ಕುಲಸಚಿವರಿಗೂ ಗೊತ್ತಿದೆ. ಆದರೂ ಶ್ರೀಧರ್‌ ಅವರಿಗೆ ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಿದ್ದಾರೆ. ನಾನು ಇಲ್ಲದ ವೇಳೆ ಕಚೇರಿಗೆ ಬೀಗ ಹಾಕಿಸಿದ್ದಾರೆ. ಇದಕ್ಕೆ ವಿವಿ ಅಧಿಕಾರಿಗಳಾದ ನೀಲಗುಂದ್‌, ಕಣ್ಣನ್‌, ಯೋಗೇಂದ್ರ ಇತರರ ಕುಮ್ಮಕ್ಕು ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯನ್ನು ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಸರಕಾರಕ್ಕೆ ವರದಿ ಸಲ್ಲಿಸಿದ್ದು ಆದೇಶಕ್ಕೆ ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.