ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾದ ನೀರು ಹರಿಸುವ ಜಗಳ: ಐವರಿಗೆ ಗಾಯ
Team Udayavani, Mar 6, 2020, 9:15 AM IST
ಶಿವಮೊಗ್ಗ: ಎರಡು ಕುಟುಂಬಗಳ ನಡುವಿನ ಜಗಳ ವ್ಯಕ್ತಿಯೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ನಡೆದಿದೆ.
ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, 50 ವರ್ಷದ ಕರಿಯಪ್ಪ ಕೊಲೆಯಾದ ವ್ಯಕ್ತಿ.
ಗ್ರಾಮದಲ್ಲಿ ಜಮೀನಿಗೆ ನೀರು ಹಾಯಿಸುವ ವಿಚಾರದ ಹಿನ್ನಲೆಯಲ್ಲಿ ಗಲಾಟೆಯಾಗಿದೆ ಎನ್ನಲಾಗಿದೆ. ಇದೇ ವಿಚಾರವಾಗಿ ನಿನ್ನೆ ರಾತ್ರಿ ಗಲಾಟೆಯಾಗಿದ್ದು, ಕರಿಯಪ್ಪ ಮತ್ತು ಕುಟುಂಬದ ಐವರ ಮೇಲೆ ಹಲ್ಲೆ ಮಾಡಲಾಗಿದೆ.
ಜಗದೀಶ್ ಮಂಜಪ್ಪ ರಮೇಶಪ್ಪ ಸೇರಿ ಹತ್ತು ಜನರು ಕರಿಯಪ್ಪ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಘಟನೆ ನಂತರ ಇವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಕರಿಯಪ್ಪ ಕುಟುಂಬದ ಐವರಿಗೆ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆ ಗೆ ದಾಖಲಿಸಲಾಗಿದೆ.
ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್