ಶಾಸಕರ ಮೇಲೂ ಎಫ್‌ಐಆರ್ ಹಾಕಿ; ಬೇಳೂರು ಗೋಪಾಲಕೃಷ್ಣ ಆಗ್ರಹ


Team Udayavani, Jul 14, 2022, 5:06 PM IST

1-adas-dad

ಸಾಗರ: ಮಾರ್ಚ್17 ರಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಯಲ್ಲಿ ಉಪಾಧ್ಯಕ್ಷ ಶ್ರೀಪಾದ ಹೆಗಡೆ ಮತ್ತು ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸದ ಕ್ರಮ ಖಂಡಿಸಿ ಗುರುವಾರ ಬ್ರಾಹ್ಮಣ ವೀರಶೈವ ಒಕ್ಕೂಟದ ವತಿಯಿಂದ ಡಿವೈಎಸ್‌ಪಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಎಂಡಿಎಫ್‌ನಲ್ಲಿ ಬ್ರಾಹ್ಮಣ ಸಮುದಾಯದ ಮುಖಂಡ ಶ್ರೀಪಾದ ಹೆಗಡೆ ಮತ್ತು ಲಿಂಗಾಯಿತ ಸಮಾಜದ ಮುಖಂಡ ಜಗದೀಶ್ ಗೌಡ ಅವರ ಮೇಲೆ ನಡೆದ ಹಲ್ಲೆ ಅತ್ಯಂತ ಅಮಾನವೀಯವಾಗಿದೆ. ಶಾಸಕ ಹರತಾಳು ಹಾಲಪ್ಪ ಅವರೇ ಹಲ್ಲೆಗೆ ನೇರ ಕಾರಣವಾಗಿದ್ದಾರೆ. ಶಾಸಕರಾಗಿ ತಾವೊಬ್ಬರೇ ಅಲ್ಲಿನ ಸರ್ವಸದಸ್ಯರ ಸಭೆಗೆ ಹೋಗದೆ, ಗೂಂಡಾಗಳನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಘಟನೆ ನಡೆದು ಮೂರ‍್ನಾಲ್ಕು ತಿಂಗಳು ಕಳೆದರೂ ಈತನಕ ಪೊಲೀಸರು ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲು ಮಾಡದೆ ಇರುವುದು ನೋಡಿದರೆ ಪೊಲೀಸರು ಶಾಸಕರ ಕೈಗೊಂಬೆಯಂತೆ ವರ್ತಿಸುತ್ತಿರುವುದು ಎದ್ದು ಕಾಣುತ್ತಿದೆ. ಇವತ್ತು ಶ್ರೀಪಾದರನ್ನು ಬಂಧಿಸಿ ಎಂದು ಪ್ರತಿಭಟನೆ ನಡೆಸಲಾಗುತ್ತಿದೆ. ಹಲ್ಲೆ ಮಾಡಿದವರ ಬದಲು ಹಲ್ಲೆಗೊಳಗಾದವರನ್ನು ಬಂಧಿಸುವ ಆಗ್ರಹ ಮಾಡುತ್ತಿರುವುದು ವಿಚಿತ್ರ ಬೆಳವಣಿಗೆಯಾಗಿದೆ. ಸರ್ಕಾರ ಅವರದ್ದಿರುವಾಗ ಶ್ರೀಪಾದರಾವ್ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಅನುಮಾನವಿದ್ದರೆ, ಅವರದೇ ಸರ್ಕಾರವಿರುವಾಗ ತನಿಖೆ ನಡೆಸಬಹುದಿತ್ತು. ಅಧಿಕಾರ ಇದೆ ಎಂದು ಹಲ್ಲೆ ಮಾಡಿಸಿರುವುದರಿಂದ ಶಾಸಕರ ಮೇಲೂ ಎಫ್‌ಐಆರ್ ದಾಖಲಾಗಬೇಕು ಎಂದು ಪ್ರತಿಪಾದಿಸಿದರು.

ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಎಂಡಿಎಫ್ ಎಜಿಎಂನ ಮುಂಚಿನ ದಿನವೇ ಹಲ್ಲೆ ನಡೆಸುವ ಏರ್ಪಾಡು ನಡೆದಿದೆ. ಇಲ್ಲದಿದ್ದರೆ ಅವತ್ತಿನ ಸಭೆಗೆ ಹಾಲಪ್ಪ ಒಬ್ಬರೇ ಬರುತ್ತಿದ್ದರೇ ವಿನಃ ತಮ್ಮ ಪಡೆಯನ್ನು ತರುತ್ತಿರಲಿಲ್ಲ. ಸಾಂಗ್ಲಿಯಾನ, ಕೆಂಪಯ್ಯ, ಅರುಣ್ ಚಕ್ರವರ್ತಿಯಂತಹ ಪೊಲೀಸರನ್ನು ಕಂಡ ಸಾಗರದಲ್ಲಿ ಹಲ್ಲೆಗೊಳಗಾದವರ ದೂರಿಗೆ ಎಫ್‌ಐಆರ್ ಮಾಡದ ಎಎಸ್‌ಪಿಯಂತವರನ್ನೂ ಕಾಣುವಂತಾಗಿದೆ ಎಂದು ವ್ಯಂಗ್ಯವಾಡಿದರು.

ಆಮ್‌ಆದ್ಮಿ ಪಕ್ಷದ ರಾಜ್ಯ ಮುಖಂಡ ಕೆ.ದಿವಾಕರ್ ಮಾತನಾಡಿ, ಘಟನೆ ನಡೆದು ನಾಲ್ಕು ತಿಂಗಳು ಕಳೆದರೂ ಈತನಕ ಪೊಲೀಸರು ಎಫ್‌ಐಆರ್ ದಾಖಲು ಮಾಡದಿರುವುದನ್ನು ನೋಡಿದರೆ ಪೊಲೀಸರು ಆಳುವ ಸರ್ಕಾರ ಮತ್ತು ಶಾಸಕರ ವಾಚ್‌ಮನ್‌ನಂತೆ ಕೆಲಸ ಮಾಡುತ್ತಿರುವುದಕ್ಕೆ ನಾವು ದಿಕ್ಕಾರ ಹೇಳುತ್ತಿದ್ದೇವೆ. ವಿದ್ಯಾದೇಗುಲದಲ್ಲಿ ಇಂತಹ ಘಟನೆ ನಡೆದಿರುವುದನ್ನು ಸಮಸ್ತ ಜನರು ಖಂಡಿಸಬೇಕು. ಕಳೆದ ಮೂರು ತಿಂಗಳಿನಲ್ಲಿ ಸಾಗರದಲ್ಲಿ ನಡೆದ ಎಲ್ಲ ಪ್ರಕರಣಗಳನ್ನು ಸಿಓಡಿ ತನಿಖೆಗೆ ಒಳಪಡಿಸಲಿ. ಸಾಗರದ ಪೊಲೀಸರ ಮೇಲೆ ನಮಗೆ ನಂಬಿಕೆ ಇಲ್ಲ ಎಂದರು.

ನಿವೃತ್ತ ಪ್ರಾಚಾರ್ಯ ಅ.ಪು.ನಾರಾಯಣಪ್ಪ ಮಾತನಾಡಿ, ನಡೆಯಬಾರದ ಘಟನೆ ನಡೆದಿದ್ದು ತುಂಬಾ ಜನರಿಗೆ ನೋವಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನುರೀತ್ಯಾ ಕ್ರಮ ತೆಗೆದುಕೊಳ್ಳಬೇಕು. ನೊಂದವರಿಗೆ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಬರುವಂತೆ ಅಧಿಕಾರಿಗಳು ವರ್ತನೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶ್ರೀಪಾದ ಹೆಗಡೆ ನಿಸ್ರಾಣಿ, ಜಗದೀಶ್ ಗೌಡ, ಅನಿತಾಕುಮಾರಿ, ಕೆ.ಎನ್.ಶ್ರೀಧರ್, ಯು.ಎಚ್.ರಾಮಪ್ಪ, ಬಿ.ಎಚ್.ರಾಘವೇಂದ್ರ, ಚಂದ್ರಮೌಳಿ ಹೊಸನಗರ, ವಿರೇಶ್ ಗೌಡ, ರವೀಶ್ ಕುಮಾರ್, ಸೋಮಶೇಖರ ಲ್ಯಾವಿಗೆರೆ, ವಿಜಯಕುಮಾರ್, ಸಂತೋಷ್ ಶಿವಾಜಿ, ದಾನಪ್ಪ ದಳವಾಯಿ, ಲಿಂಗರಾಜು, ರವಿ ವಿಜಯನಗರ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.