ಗಾಜನೂರು ಜಲಾಶಯ ಭರ್ತಿ


Team Udayavani, Jun 11, 2018, 3:30 PM IST

shivm1.jpg

ಶಿವಮೊಗ್ಗ: ಜಿಲ್ಲಾದ್ಯಂತ ಮಳೆ ಆರ್ಭಟ ಜೋರಾಗಿದೆ. ತುಂಗಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ಭಾನುವಾರ ಜಲಾಶಯದ ಒಟ್ಟು 22 ಕ್ರೆಸ್ಟ್‌ಗೇಟ್‌ ಪೈಕಿ 10 ಕ್ರೆಸ್ಟ್‌ಗೇಟ್‌ ತೆರೆದು ಸುಮಾರು 13 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ನದಿಗೆ ಹರಿಸಲಾಗುತ್ತಿದ್ದು, ತುಂಗೆಗೆ ಜೀವಕಳೆ ಬಂದಿದೆ.

ತುಂಗಾ ಜಲಾನಯನ ಪ್ರದೇಶ ವ್ಯಾಪ್ತಿಯ ತೀರ್ಥಹಳ್ಳಿ ತಾಲೂಕು, ಶೃಂಗೇರಿ, ಕೊಪ್ಪ ಮೊದಲಾದ ಕಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಯ ನೀರಿನ ಮಟ್ಟ ಹೆಚ್ಚಿದೆ. ಜಲಾಶಯದ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದ 10 ಗೇಟ್‌ಗಳನ್ನು ತೆರೆದು ನೀರನ್ನು ನದಿಗೆ ಬಿಡಲಾಗುತ್ತಿದೆ. ಗಾಜನೂರು ತುಂಗಾ ಜಲಾಶಯದಲ್ಲಿ 3.24 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಹೆಚ್ಚುವರಿ ಹರಿದುಬರುತ್ತಿರುವ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಇದೀಗ 13 ಸಾವಿರ ಕ್ಯೂಸೆಕ್‌ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ.

ಜಲಾಶಯದಿಂದ ನೀರು ಹೊರಬಿಟ್ಟಿದ್ದರಿಂದ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ತುಂಗಾ ನದಿ ಜೀವಕಳೆ ಪಡೆದುಕೊಂಡಿದೆ. ಗೇಟ್‌ ತೆರೆದು ನೀರು ಹರಿಬಿಟ್ಟಿದ್ದರಿಂದ ನದಿ ಪಾತ್ರದಲ್ಲಿನ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ತುಂಬಿ ಹರಿಯುತ್ತಿರುವ ನದಿ ಹಾಗೂ ಜಲಾಶಯ ವೀಕ್ಷಿಸಲು ಜನ ಗಾಜನೂರಿಗೆ ಆಗಮಿಸತೊಡಗಿದ್ದಾರೆ. ಜಲಾಶಯದ ಗೇಟ್‌ ಮೂಲಕ ಹಾಲಿನಂತೆ ಭೋರ್ಗರೆಯುತ್ತಿರುವ ಜಲರಾಶಿಯನ್ನು ಕಣ್ತುಂಬಿಕೊಳ್ಳಲು ಹೆಚ್ಚಿನ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.

ಒಳಹರಿವು ಹೆಚ್ಚಳ: ಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳವಾಗಿದೆ.

7908 ಕ್ಯುಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಜಲಾಶಯದ ನೀರಿನ ಮಟ್ಟ ಭಾನುವಾರ ಬೆಳಗ್ಗೆಗೆ ಕೊನೆಗೊಂಡಂತೆ 115.9 ಅಡಿಗೆ ತಲುಪಿದೆ. ಇನ್ನೊಂದೆಡೆ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲೂ ವ್ಯಾಪಕ ಮಳೆ ಸುರಿಯುತ್ತಿದ್ದು, ಶರಾವತಿ ನದಿ ಹರಿವಿನ ಪ್ರಮಾಣದಲ್ಲೂ ಏರಿಕೆಯಾಗಿದೆ. 9384 ಕ್ಯುಸೆಕ್‌ ಒಳಹರಿವಿದ್ದು, ಜಲಾಶಯದ ಮಟ್ಟ 1753.05 ಅಡಿ ತಲುಪಿದೆ. 

ಪಕ್ಷಿಧಾಮಕ್ಕೆ ಕಂಟಕ: ತುಂಗಾ ನದಿಯಲ್ಲಿ ಹರಿವಿನ ಪ್ರಮಾಣ ಒಂದೇ ಸಮನೆ ಏರಿಕೆಯಾಗುತ್ತಿದ್ದು, ಪ್ರತಿವರ್ಷದಂತೆ
ಸಂತಾನಾಭಿವೃದ್ಧಿಗಾಗಿ ವಿದೇಶಗಳಿಂದ ವಲಸೆ ಬಂದಿರುವ ಬಾನಾಡಿಗಳಿಗೆ ಸಂಕಷ್ಟ ಎದುರಾಗಿದೆ.

ಪ್ರತಿ ಬಾರಿ ತುಂಗಾ ಜಲಾಶಯ ಭರ್ತಿಯಾದಾಗಲೂ ತುಂಗಾ ಜಲಾಶಯದ ಹಿನ್ನೀರಿನಲ್ಲಿ ಗೂಡು ಕಟ್ಟಿಕೊಂಡಿರುವ ವಿದೇಶಿ ಪಕ್ಷಿಗಳು ಅಸಂಖ್ಯ ಸಂಖ್ಯೆಯಲ್ಲಿ ನೀರು ಪಾಲಾಗುತ್ತವೆ. ಈ ಬಾರಿಯೂ ಜಲಾಶಯದ ಹಿನ್ನೀರಿನಲ್ಲಿ ಪಕ್ಷಿಗಳು ಮೂಕರೋಧನೆ ಅನುಭವಿಸುತ್ತಿವೆ.

ಧಾರಾಕಾರ ಮಳೆ
ಜಿಲ್ಲಾದ್ಯಂತ ಮುಂಗಾರು ಆರ್ಭಟ ಜೋರಾಗಿದೆ. ಭಾನುವಾರ ಹೊಸನಗರ, ಸಾಗರ, ರಿಪ್ಪನ್‌ಪೇಟೆ, ತೀರ್ಥಹಳ್ಳಿ ತಾಲೂಕು, ಶರಾವತಿ ಕಣಿವೆ ಪ್ರದೇಶ ಸೇರಿದಂತೆ ಹಲವೆಡೆ ಮಳೆ ಮುಂದುವರಿದಿದೆ. ರಿಪ್ಪನ್‌ಪೇಟೆ, ಹುಂಚಾ, ಗರ್ತಿಕೆರೆ, ಕೆಂಚನಾಲ, ಅರಸಾಳು, ಚಿನ್ಮನೆ ಭಾಗದಲ್ಲೂ ಉತ್ತಮ ಮಳೆಯಾಗಿದೆ. ಮಳೆಯಿಂದಾಗಿ ಯಾವುದೇ ಅನಾಹುತ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಶಿವಮೊಗ್ಗ ನಗದಲ್ಲಿ ಭಾನುವಾರ ಜಿಟಿ ಜಿಟಿ ಮಳೆ ಮುಂದುವರಿದಿದೆ. ತಾಲೂಕಿನ ಗ್ರಾಮೀಣ ಭಾಗದಲ್ಲೂ ಸಾಧಾರಣ ಮಳೆಯಾಗಿದೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.