ಸರ್ಕಾರದಿಂದ ಜಾತಿ- ಧರ್ಮದ ನಡುವೆ ಬೆಂಕಿ ಹಚ್ಚುವ ಕೆಲಸ


Team Udayavani, Aug 3, 2017, 3:07 PM IST

03-SHIV-1.jpg

ಶಿವಮೊಗ್ಗ: ರಾಜಕೀಯ ದುರುದ್ದೇಶದಿಂದ ಜಾತಿ-ಧರ್ಮಗಳ ನಡುವೆ ಬೆಂಕಿ ಹಚ್ಚುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ನೋಬೆಲ್‌ ಪ್ರಶಸ್ತಿ ನೀಡಬೇಕು ಎಂದು ಮೇಲ್ಮನೆ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ವ್ಯಂಗ್ಯವಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳಿಗೆ ಅದರದ್ದೇ ಆದ ಕೆಲಸ ಸಾಕಷ್ಟಿದೆ. ಆದರೆ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಜಾತಿ-ಧರ್ಮದ ನಡುವೆ ವಿಷ ಬೀಜ ಬಿತ್ತುವ ಕೆಲಸದಲ್ಲಿ ನಿರತವಾಗಿದೆ. ಸರ್ಕಾರದ ನಡೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.

ಲಿಂಗಾಯಿತ ಸ್ವತಂತ್ರ ಧರ್ಮ ವಿಚಾರವಾಗಿ ಮೊದಲು ಬೆಂಕಿ ಹಚ್ಚಿದ್ದು ರಾಜ್ಯ ಸರ್ಕಾರ. ಮಗುವನ್ನು ಚಿವುಟುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಮುಂದೆ ಎಲ್ಲಾ ಜಾತಿಯವರು ಪ್ರತ್ಯೇಕ ಧರ್ಮ ಮಾಡುವಂತೆ ಬೇಡಿಕೆ ಇಡುತ್ತಾರೆ. ಇದು ಕಾಂಗ್ರೆಸ್‌ಗೆ ತಿರುಗು ಬಾಣವಾಗಲಿದೆ ಎಂದು ಹೇಳಿದರು. 

ಲ್ಯಾಂಡ್‌ ಮಾಫಿಯಾ ಗುಲಾಮರು: ಕೆರೆಗಳನ್ನು ಡಿ ನೋಟಿಫಿಕೇಶನ್‌ ಮಾಡುವ ಮೂಲಕ ಕೆರೆಗಳ ಜಾಗವನ್ನು ಲೂಟಿ ಹೊಡೆಯಲು ಸರ್ಕಾರ ಮುಂದಾಗಿರುವುದು ಖಂಡನೀಯ. ಈ ಹಿಂದೆ ಅಕ್ರಮ ಮರಳು ಮಾಫಿಯಾದಲ್ಲಿ ಕಾಂಗ್ರೆಸ್‌ನ ಅನೇಕರು ಭಾಗಿಯಾಗಿದ್ದರು. ಇದೀಗ 
ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಸರ್ಕಾರದಲ್ಲಿರುವ ಬಹುತೇಕರು “ಲ್ಯಾಂಡ್‌ ಮಾಫಿಯಾದ ಗುಲಾಮ’ರಾಗಿದ್ದಾರೆ ಎಂದು ಲೇವಡಿ ಮಾಡಿದರು. ಕೆರೆಗಳನ್ನು ಡಿ ನೋಟಿಫೈ ಮಾಡುವ ಸಂಪುಟದ ನಿರ್ಧಾರವನ್ನು ಕೂಡಲೇ ವಾಪಾಸು
ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯ ಸರ್ಕಾರದ ಕುತಂತ್ರ ರಾಜಕಾರಣಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ. ಈ ಕುರಿತು ರಾಜ್ಯಪಾಲರಿಗೆ ತಾವು ಪತ್ರ ಬರೆದಿರುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಭೀಕರ ಬರ ಎದುರಾಗಿದೆ. ಕೆರೆ, ಕಟ್ಟೆಗಳಲ್ಲಿ ನೀರಿಲ್ಲ. ಇಂತಹ ಸಂದರ್ಭದಲ್ಲಿ ಸರ್ಕಾರ ಕೆರೆಗಳನ್ನು ಉಳಿಸಲು ಮುಂದಾಗಬೇಕು. ಇದು ಜೀವಂತ ಸರ್ಕಾರದ ಲಕ್ಷಣ. ಆದರೆ ರಾಜ್ಯದಲ್ಲಿ ಇದಕ್ಕೆ ತದ್ವಿರುದ್ಧವಾದ ಸರ್ಕಾರವಿದೆ. ದೇಶದ ಇತಿಹಾಸದಲ್ಲಿ ಇಂತಹ ಕುತಂತ್ರ ಸರ್ಕಾರವನ್ನು ಹಿಂದೆಂದೂ ಕಂಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಐಟಿ ದಾಳಿ: ಕಾಂಗ್ರೆಸ್‌ ಮುಖಂಡ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವುದಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್‌ ಪಕ್ಷದವರು ಭ್ರಷ್ಟಾಚಾರ ಮಾಡಿದರೆ ಅದಕ್ಕೆ ಬಿಜೆಪಿ ಹೊಣೆಯಾಗುತ್ತದೆಯೇ ಎಂದರು. ಎಲ್ಲಾ ಸರ್ಕಾರಗಳ ಆಡಳಿತಾವಧಿಯಲ್ಲಿ ಐಟಿ ದಾಳಿ ನಡೆದಿದೆ. ಐಟಿ ದಾಳಿಯಾದಾಗ ಬೇನಾಮಿ ಹಣಕ್ಕೆ ಸ್ಪಷ್ಟ ಉತ್ತರ ಕೊಡಬೇಕೇ ಹೊರತು, ಇದರಲ್ಲಿ ರಾಜಕೀಯ ತರಬಾರದು. ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ಐಟಿ ದಾಳಿ ಹಿಂದೆ ಬಿಜೆಪಿ ಕೈವಾಡವಿದೆ, ರಾಜಕೀಯ ಕುತಂತ್ರವಿದೆ ಎಂಬ ಕಾಂಗ್ರೆಸ್‌ ಆರೋಪ ಖಂಡನೀಯ ಎಂದರು.

ಗುಜರಾತಿನ ಕಾಂಗ್ರೆಸ್‌ ಶಾಸಕರ ರೇಸಾರ್ಟ್‌ ರಾಜಕೀಯಕ್ಕೂ, ಐಟಿ ದಾಳಿಗೂ ಒಂದಕ್ಕೊಂದು ಸಂಬಂಧವೇ ಇಲ್ಲ. ಕಾಂಗ್ರೆಸ್‌ ಮುಖಂಡರು ಇದಕ್ಕೆ ತಾಳೆ ಹಾಕಿದರೆ ಗುಜರಾತ್‌ನಿಂದ ಬಂದಿರುವ ಶಾಸಕರಲ್ಲಿ ಪಕ್ಷ ನಿಷ್ಠೆ ಇಲ್ಲ. ಅವರು ಖರೀದಿ ವಸ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಂತಾಗುತ್ತದೆ. ಕಾಂಗ್ರೆಸ್‌ನ ದೌರ್ಬಲ್ಯ ತೋರಿಸಿದಂತಾಗುತ್ತದೆ. ಬೇಕಾದರೆ ಕರೆ ತಂದಿರುವ ಶಾಸಕರನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲಿ. ಅದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದು ತಿರುಗೇಟು ನೀಡಿದರು. ಗುಜರಾತ್‌ನಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಜನ ತೊಂದರೆಗೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಶಾಸಕರಾಗಿ ಅಲ್ಲಿನ ಜನರ ಕಷ್ಟ ಆಲಿಸುವುದರ ಬದಲು ಮೋಜು-ಮಸ್ತಿ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.