ಹಣಕಾಸಿನ ಕೊರತೆ: ಕೆರೆ ಕಾಮಗಾರಿ ಅಂತ್ಯ?


Team Udayavani, Apr 1, 2019, 5:54 PM IST

Udayavani Kannada Newspaper
ಸಾಗರ: ನಗರದ ಸಾಗರ ತಾಲೂಕು ಜೀವಜಲ ಕಾರ್ಯಪಡೆ ಹಾಗೂ ಸ್ವಾನ್‌ ಆ್ಯಂಡ್‌ ಮ್ಯಾನ್‌ ಸಂಸ್ಥೆಯ ಸಹಯೋಗದಲ್ಲಿ ನಡೆಯುತ್ತಿದ್ದ ಕಲ್ಮನೆ ಗ್ರಾಪಂ ವ್ಯಾಪ್ತಿಯ ಚಿಪ್ಳಿಲಿಂಗದಹಳ್ಳಿಯ ಬಂಗಾರಮ್ಮನ ಕೆರೆಯ ಹೂಳು ತೆಗೆಯುವ ಕಾಮಗಾರಿ ಸೋಮವಾರ ಮತ್ತೂಮ್ಮೆ ಹಣಕಾಸಿನ ಕೊರತೆಯ ಹಿನ್ನೆಲೆಯಲ್ಲಿ ಸ್ಥಗಿತಗೊಳ್ಳುವ ಅಪಾಯ ಎದುರಾಗಿದೆ.
ದಿನಕ್ಕೆ 37 ಸಾವಿರ ರೂ.ಗಳಷ್ಟು ವೆಚ್ಚ ಬೀಳುವ ಈ ಹೂಳು ತೆಗೆಯುವ ಎರಡನೇ ಹಂತದ ಕಾಮಗಾರಿ ಕಳೆದ 14 ದಿನಗಳಿಂದ ನಡೆದಿದೆ. ಈಗಾಗಲೇ ಆರು ಲಕ್ಷ ರೂ. ಗಳಷ್ಟು ಹಣ ಬಳಕೆಯಾಗಿದೆ. ಹೊಸ ಆರ್ಥಿಕ ಮೂಲಗಳಿಂದ ಸಹಾಯ ಲಭಿಸದೆ ಕಾಮಗಾರಿ ಮುಂದುವರಿಸುವುದು ಬೇಡ ಎಂದು ಸಾಗರ ತಾಲೂಕು ಜೀವಜಲ ಕಾರ್ಯಪಡೆ ನಿರ್ಧರಿಸಿದೆ.
2017ರಲ್ಲಿ ಹಿರಿಯ ಸಾಹಿತಿ ನಾ. ಡಿಸೋಜಾ, ತಾಲೂಕಿನ ಎಸಿ, ಡಿವೈಎಸ್‌ಪಿ ಮೊದಲಾದವರನ್ನು ಒಳಗೊಂಡ ಜೀವಜಲ ಕಾರ್ಯಪಡೆ ಹೊಸ ಹುಮ್ಮಸ್ಸಿನಿಂದ ಲಿಂಗದಹಳ್ಳಿಯ ಕೆರೆ ಹೂಳೆತ್ತುವ ಕಾರ್ಯ ಸುಮಾರು 11.5 ಲಕ್ಷ ರೂ.ಗಳ ವೆಚ್ಚ ಮಾಡಿಯೂ ಶೇ. 30ರಷ್ಟು ಮಾತ್ರ ಸಾಗಿತ್ತು. ಈ ವರ್ಷ ಕರ್ನಾಟಕ ಬ್ಯಾಂಕ್‌ ಐದು ಲಕ್ಷ ರೂ. ಸಹಾಯ ಧನ ಒದಗಿಸಿದ ಹಿನ್ನೆಲೆಯಲ್ಲಿ ಎರಡನೇ ಹಂತದ ಕಾಮಗಾರಿ ನಡೆದಿದ್ದು, ಶೇ. 75ರಷ್ಟು ಕಾಮಗಾರಿ ಪೂರ್ಣಗೊಂಡಿದೆ.
ಕಾರ್ಯಪಡೆಯ ಅಖೀಲೇಶ್‌ ಚಿಪ್ಳಿ ಪತ್ರಿಕೆಯೊಂದಿಗೆ ಮಾತನಾಡಿ, ಪತ್ರಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಬಂಗಾರಮ್ಮನ ಕೆರೆಯ ವಿಷಯ ಪ್ರಸ್ತಾಪವಾದ ನಂತರದಲ್ಲಿ ಸ್ವಲ್ಪ ಮಟ್ಟಿನ ಧನಸಹಾಯದ ಭರವಸೆಗಳು ವ್ಯಕ್ತವಾಗಿವೆ. ಕೆಲವರು ಸ್ವಯಂಪ್ರೇರಿತವಾಗಿ ಕರೆ ಮಾಡಿ ಈ ರೀತಿಯ ಸಾಮಾಜಿಕ ಕಾರ್ಯಯೋಜನೆಗಳಿಗೆ ಧನಸಹಾಯ ಒದಗಿಸುವ ಸರ್ಕಾರೇತರ ಸಂಸ್ಥೆಗಳ ನೆರವನ್ನು ಒದಗಿಸಿಕೊಡುವ ಭರವಸೆ ನೀಡಿದ್ದಾರೆ. ನಾವೂ ಕೂಡ ವೈಯಕ್ತಿಕ ಮಟ್ಟದಲ್ಲಿ ಸಿಗಬಹುದಾದ ಹಣಕಾಸು ನೆರವಿಗೆ ಸಂಪರ್ಕ ನಡೆಸಿದ್ದೇವೆ ಎಂದರು.
ಈ ಬಾರಿಯ ಹಣ ಸಂಗ್ರಹವಾಗುವ ವಿಶ್ವಾಸವಿದೆ. ಅದನ್ನು ಆಧರಿಸಿ ಇನ್ನಷ್ಟು ದಿನ ಕಾಮಗಾರಿ ಮುಂದುವರಿಸಲು ಕೆಲವರು ಸಲಹೆ ನೀಡುತ್ತಿದ್ದಾರೆ. ಆದರೆ ಕಳೆದ ಬಾರಿ ಕಾಮಗಾರಿ ಆರಂಭಿಸಿ, ಹಣ ಸಂಗ್ರಹವಾಗುವ ಭರವಸೆಯ ಮೇಲೆ ಚಟುವಟಿಕೆಯನ್ನು ಧೈರ್ಯದಿಂದ ಮುಂದುವರಿಸಿದ್ದೆವು. ನಂತರದ ದಿನಗಳಲ್ಲಿ ಬಾಕಿ ಬಿಲ್‌ಗ‌ಳ ಪಾವತಿಗೆ ನಾವು ಬಹಳ ಶ್ರಮ ಪಡಬೇಕಾಯಿತು. ಈ ಹಂತದಲ್ಲಿ ಆ ಅಪಾಯವನ್ನು ತಂದುಕೊಳ್ಳುವ ಕೆಲಸ ಮಾಡುವುದು ಬೇಡ ಎಂದು ಕಾರ್ಯಪಡೆಯ ಸದಸ್ಯರು ತೀರ್ಮಾನಿಸಿದ್ದೇವೆ. ಒಂದೊಮ್ಮೆ ತಕ್ಷಣದಲ್ಲಿ ಹಣಕಾಸಿನ ನೆರವು ಹರಿದುಬಂದರೆ ವಿಳಂಬವಿಲ್ಲದೆ ಈ ವರ್ಷವೇ ಕಾಮಗಾರಿ ಪೂರೈಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.