ಮಾಹಿತಿ ಕೊಡದ ಎಸಿಗೆ ಐದು ಸಾವಿರ ರೂ. ದಂಡ
Team Udayavani, Oct 23, 2021, 5:34 PM IST
ಸಾಗರ: ಮಾಹಿತಿ ಹಕ್ಕು ಅರ್ಜಿದಾರರಿಗೆ ಮಾಹಿತಿ ನೀಡದಿರುವುದು ಮತ್ತು ವಿಚಾರಣೆಗೆ ಖುದ್ದು ಹಾಜರಾಗಲು ನೀಡಿದ ಸೂಚನೆಯನ್ನೂ ಉಲ್ಲಂಘಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಎಸ್.ಎಲ್.ಪಾಟೀಲ್ ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ. ನಾಗರಾಜ್ ಎಲ್. ಅವರಿಗೆ ಐದು ಸಾವಿರ ರೂ.ಗಳ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಕೆಳದಿ ರಸ್ತೆಯ ರಾಜಕುಮಾರ ಎಂಬುವವರು 2020ರ ಮಾರ್ಚ್ನಲ್ಲಿ ಮಾಹಿತಿ ಹಕ್ಕು ಅರ್ಜಿ ಹಾಕಿ, ಆನಂದಪುರ ಹೋಬಳಿಯ ಮಲಂದೂರು ಗ್ರಾಮದ ಸರ್ವೆ ನಂಬರ್ ಒಂದಕ್ಕೆ ಸಂಬಂಧಿಸಿದಂತೆ ಮ್ಯುಟೇಷನ್, ಭೂ ಪರಿವರ್ತನೆ ದಾಖಲೆ ಮೊದಲಾದವುಗಳನ್ನು ಕೇಳಿದ್ದರು. ಮಾಹಿತಿ ಸಿಗದ ಕಾರಣ ಮೇಲ್ಮನವಿಯನ್ನು ಸಲ್ಲಿಸಿದ್ದರೂ ಪರಿಣಾಮವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ 2020ರ ಅಕ್ಟೋಬರ್ 7ರಂದು ರಾಜ್ಯ ಮಾಹಿತಿ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಈ ನಡುವೆ ಆಯೋಗ ಜುಲೈ 30ರಂದು ವಿಚಾರಣೆ ನಡೆಸಿ, ಉಚಿತವಾಗಿ ಮಾಹಿತಿ ನೀಡಿ ವರದಿ ಸಲ್ಲಿಸಲು ಎಸಿಯವರಿಗೆ ತಿಳಿಸಿತ್ತು. ಆದರೆ ಎಸಿ ಕಾರ್ಯಾಲಯ ಸದರಿ ವಿಷಯದ ಕಡತ ಲಭ್ಯವಿಲ್ಲ ಎಂದು ಅರ್ಜಿದಾರರಿಗೆ ತಿಳಿಸಿತ್ತು. ಈ ಅಂಶವನ್ನು ಪರಿಗಣಿಸಿದ ಮಾಹಿತಿ ಆಯೋಗ, ಶಾಶ್ವತ ದಾಖಲೆಗಳನ್ನು ಕಾಯ್ದಿರಿಸಿಕೊಳ್ಳುವುದು ಸಾರ್ವಜನಿಕ ಪ್ರಾಧಿಕಾರದ ಆದ್ಯ ಕರ್ತವ್ಯ. ಕಡತ ನಿರ್ವಹಿಸಿದ ಅಧಿಕಾರಿಯನ್ನು ಗುರುತಿಸಿ ಅವರ ವಿರುದ್ಧ 2010ರ ಸಾರ್ವಜನಿಕ ದಾಖಲೆ ಕಾನೂನು ಆಧಾರದಲ್ಲಿ ತನಿಖೆ ನಡೆಸಿ ಆಯೋಗಕ್ಕೆ ವರದಿ ಸಲ್ಲಿಸಲು ಎಸಿ ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಸೂಚಿಸಿತು.
ಇದನ್ನೂ ಓದಿ: ನಿಮ್ಮ ಪಾಕ್ ಗೆಳತಿಗೂ ಐಎಸ್ ಐಗೂ ಏನು ಸಂಬಂಧ: ಅಮರಿಂದರ್ ಸಿಂಗ್ ಗೆ ರಾಂಧವಾ
ಮಾಹಿತಿ ಹಕ್ಕು ಅರ್ಜಿಗೆ 30 ದಿನಗಳೊಳಗೆ ಮಾಹಿತಿ ನೀಡದಿರುವುದು, ಕಡತ ಲಭ್ಯ ಇಲ್ಲ ಎಂದು ಹಿಂಬರಹ ನೀಡಿದ್ದು, ಎರಡು ವರ್ಷದಿಂದಲೂ ಮಾಹಿತಿ ನೀಡದೆ ಸತಾಯಿಸಿರುವುದು, ಖುದ್ದು ಹಾಜರಾತಿಗೆ ತಿಳಿಸಿದ್ದರೂ ಗೈರಾಗಿರುವುದು, ಲಿಖಿತ ಸಮಜಾಯಿಷಿಯನ್ನು ನೀಡದಿರುವುದನ್ನು ಪರಿಗಣಿಸಿ ಸಾಗರದ ಸಹಾಯಕ ಆಯುಕ್ತ ಡಾ. ನಾಗರಾಜ್ ಎಲ್. ಅವರಿಗೆ ಐದು ಸಾವಿರ ರೂ. ದಂಡ ವಿಧಿಸಿ, ಆ ಮೊತ್ತವನ್ನು ಅವರ ವೇತನದಿಂದ ಕಡಿತಗೊಳಿಸಲು ಮಾಹಿತಿ ಆಯುಕ್ತರು ಸೆ. 14ರಂದು ಆನ್ಲೈನ್ ವಿಚಾರಣೆ ನಡೆಸಿದ ನಂತರ ನೀಡಿದ ಆದೇಶದಲ್ಲಿ ನಿರ್ದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ