ಕೋವಿಡ್ 19; ಜಿಲ್ಲಾಡಳಿತದ ನಿರ್ದೇಶನ ಪಾಲಿಸಿ
Team Udayavani, Apr 1, 2020, 6:56 PM IST
ಶಿವಮೊಗ್ಗ: ಕೋವಿಡ್ 19 ವೈರಸ್ ನಿಯಂತ್ರಣ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ನೆರವಾಗಲು ನೋಂದಣಿ ಮಾಡಿಸಿರುವ ಕೋವಿಡ್ 19 ವಾರಿಯರ್ ಸ್ವಯಂ ಸೇವಕರು ಜಿಲ್ಲಾಡಳಿತದ ನಿರ್ದೇಶನದ ಪ್ರಕಾರ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲೆಯ ಕೋವಿಡ್ 19 ವಾರಿಯರ್ ಪ್ರಥಮ ತಂಡಕ್ಕೆ ಅಗತ್ಯ ಸೂಚನೆಗಳನ್ನು ನೀಡಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಬರುವ ವದಂತಿಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಕ್ಷಣ ತರುವುದು. ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ಮನೆ ಬಾಗಿಲಿಗೆ ಆಹಾರ, ಅಗತ್ಯವಿರುವವರಿಗೆ ಪಡಿತರ ಪೂರೈಕೆ ಮಾಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು, ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಕ್ರಮ ವಹಿಸುವುದು, ಜನರು ಗುಂಪು ಸೇರದಂತೆ ಸೂಚನೆಗಳನ್ನು ನೀಡುವುದು, ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಆಶ್ರಯ ಇತ್ಯಾದಿ ಕಾರ್ಯಗಳನ್ನು ಕೈಗೊಳ್ಳುವುದು ಸೇರಿದಂತೆ ಜಿಲ್ಲಾಡಳಿತ ಸೂಚಿಸುವ ಕಾರ್ಯಗಳನ್ನು ಕೋವಿಡ್ 19 ವಾರಿಯರ್ ನಿರ್ವಹಿಸಬೇಕಾಗಿದೆ ಎಂದು ಅವರು ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ಕಂಡು ಬರುವ ಯಾವುದೇ ವದಂತಿ, ಅನ ಧಿಕೃತ ಸುದ್ದಿಗಳನ್ನು ತಕ್ಷಣ ಜಿಲ್ಲಾ ವಾರ್ತಾಧಿಕಾರಿ ಅವರ ಗಮನಕ್ಕೆ ತರಬೇಕು. ಕೋವಿಡ್ 19 ವಾರಿಯರ್ ಸ್ವಯಂ ಸೇವಕರಿಗೆ ಸರ್ಕಾರದ ವತಿಯಿಂದ ಗುರುತಿನ ಪತ್ರ ಒದಗಿಸಲಾಗಿದ್ದು, ಯಾವುದೇ ಕಾರಣಕ್ಕೂ ಅದನ್ನು ದುರುಪಯೋಗ ಪಡಿಸಿಕೊಳ್ಳಬಾರದು. ದುರುಪಯೋಗ ಪಡಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಸ್ವಯಂಸೇವಾ ಕಾರ್ಯಗಳಿಗೆ ಮಾತ್ರ ಗುರುತಿನ ಚೀಟಿ ಬಳಕೆ ಮಾಡಬೇಕು ಎಂದು ಅವರು ಸ್ಪಷ್ಟಪಡಿಸಿದರು.
ರೆಡ್ಕ್ರಾಸ್ ಸಂಸ್ಥೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಾರ್ಮಿಕ ಸೊಸೈಟಿ ಜಂಟಿಯಾಗಿ ಕೋವಿಡ್ 19 ವಾರಿಯರ್ಗಳನ್ನು ಆನ್ಲೈನ್ ಮೂಲಕ ನೋಂದಣಿ ಮಾಡಿಸಿ ಈಗಾಗಲೇ ತರಬೇತಿ ನೀಡಿದೆ. ಜಿಲ್ಲೆಯಲ್ಲಿ 200ಕ್ಕೂ ಅ ಧಿಕ ಮಂದಿ ಸ್ವಯಂ ಸೇವಕರಾಗಿ ನೋಂದಾಯಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ