3000 ಮಂದಿಗೆ ಆಹಾರದ ಕಿಟ್
Team Udayavani, Jun 12, 2021, 4:18 PM IST
ತೀರ್ಥಹಳ್ಳಿ: ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಹಮಾಲಿಗಳು, ಬಡ ಕಾರ್ಮಿಕರು, ಕ್ಷೇತ್ರದ ಬಡವರು ಸೇರಿದಂತೆ ಹಲವರಿಗೆ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಆಹಾರದ ಕಿಟ್ ವಿತರಣೆ ನಿರಂತರವಾಗಿ ಸಾಗಿದೆ. ಈ ನಡುವೆ ಗುರುವಾರ ಶಿವಮೊಗ್ಗ ಸಂಸದ ರಾಘವೇಂದ್ರ ಅವರು ಸುಮಾರು 3000 ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಭಾಗಿಯಾಗಿ ಚಾಲನೆ ನೀಡಿದರು.
ಪ್ರೇರಣಾ ಟ್ರಸ್ಟ್, ಸೇವಾ ಭಾರತಿ ಮತ್ತು ಪರಿವಾರ ಸಂಘಟನೆಗಳ ನೂರಾರು ಕಾರ್ಯಕರ್ತರು ಈ ಕಿಟ್ ಸಿದ್ಧಪಡಿಸಿದ್ದಾರೆ. ತೀರ್ಥಹಳ್ಳಿಯ ಶಾಂತವೇರಿ ಗೋಪಾಲ ಗೌಡ ರಂಗಮಂದಿರದಲ್ಲಿ ಸೇವಾ ಭಾರತಿ, ಪ್ರೇರಣಾ ಟ್ರಸ್ಟ್, ಪರಿವಾರ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಶ್ರಮಿಕ ವರ್ಗದವರಿಗೆ ಆಹಾರದಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದಸಂಸದ ರಾಘವೇಂದ್ರ ಅವರು, ಪ್ರಧಾನಿ ಮೋದಿ ಅವರು ಇಂತಹ ಸ್ಥಿತಿಯಲ್ಲಿ ಅಧಿಕಾರದಲ್ಲಿಇಲ್ಲದಿದ್ದರೆ ಈ ದೇಶದ ಸ್ಥಿತಿ ಕಷ್ಟ ಇತ್ತು. ವಿಶ್ವದಲ್ಲೇಅತೀ ಹೆಚ್ಚು ಜನರಿಗೆ ಲಸಿಕೆ ಕೊಟ್ಟ ದೇಶ ನಮ್ಮದು ಎಂದರು.
ಶಿವಮೊಗ್ಗ ಜಿಲ್ಲೆಗೆ ಕರೋನಾ ನಡುವೆಯೂ ಕೇಂದ್ರ ಸರಕಾರ 5000 ಕೋಟಿ ಬಿಡುಗಡೆ ಮಾಡಿದೆ. 350 ಕೋಟಿ ಆಗುಂಬೆ ರಸ್ತೆಗೆ ಮಂಜೂರಾಗಿದ್ದು, ಘಾಟಿಯಲ್ಲಿ ಯೋಜನೆ ಬಳಿಕಹೆವಿ ವಾಹನ ಕೂಡ ಓಡಾಡಬಹುದು. ಎಲ್ಲಾಸೇರಿ ಕರೋನಾ ವಿರುದ್ಧ ಹೋರಾಟ ಮಾಡೋಣ ಎಂದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಪ್ರತಿಯೊಬ್ಬರೂ ಕಷ್ಟದಲ್ಲಿದ್ದಾರೆ. ಬಹುತೇಕರ ಬದುಕನ್ನು ಕೊರೊನಾ ಬೀದಿಗೆ ತಂದಿದೆ. ಆಟೋ ಚಾಲಕರು, ಬಡವರು, ಕಾರ್ಮಿಕರಿಗೆ ಅನ್ನ ಇಲ್ಲ ಎನ್ನಬಾರದು. ಹೀಗಾಗಿ ಕಿಟ್ ವಿತರಣೆ ಮಾಡಿದ್ದೇವೆ ಎಂದರು.
ಬಿಜೆಪಿ ನಾಯಕ ಭಾನುಪ್ರಕಾಶ್ ಮಾತನಾಡಿ, ದೇಶಕ್ಕೆ ಪ್ರಧಾನಿ ಮೋದಿ ಅವರು ಏಕೈಕ ಆಶಾಕಿರಣ. ಎಲ್ಲರೂ ಸೇರಿ ಕೊರೊನಾ ಓಡಿಸಬೇಕು. ಎಲ್ಲರಿಗೂ ಧೈರ್ಯ ತುಂಬಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ತೀರ್ಥಹಳ್ಳಿಯ ನಾಯಕರಾದ ಬಾಳೆಬೈಲುರಾಘವೇಂದ್ರ, ಸೊಪ್ಪುಗುಡ್ಡೆ ರಾಘವೇಂದ್ರ, ಗೀತಾ ಶೆಟ್ಟಿ, ಸಿ.ಬಿ. ಈಶ್ವರ್, ನಾಗರಾಜ ಶೆಟ್ಟಿ, ಸಾಲೆಕೊಪ್ಪರಾಮಚಂದ್ರ, ಕಾಸರವಳ್ಳಿ ಶ್ರೀನಿವಾಸ್, ಯಶೋಧ ಮಂಜುನಾಥ, ಸಂದೇಶ್ ಜವಳಿ, ಕುಕ್ಕೆ ಪ್ರಶಾಂತ್, ಹೆದ್ದೂರು ನವೀನ್, ಚಂದವಳ್ಳಿ ಸೋಮಶೇಖರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ