ಕೆಲವರಿಗೆ ಆಪಾದನೆ ಮಾಡುವುದೇ ಕೆಲಸ; ಹಾಲಪ್ಪ ತಿರುಗೇಟು
Team Udayavani, Aug 10, 2022, 9:17 PM IST
ಸಾಗರ: ಕೆಲವರು ಆಪಾದನೆ ಮಾಡಲು ಕಾಯುತ್ತಿದ್ದಾರೆ. ಇಂತಹುದ್ದಕ್ಕೆ ಹೆದರುವ ಪ್ರಶ್ನೆಯೆ ಇಲ್ಲ ಎಂದು ಶಾಸಕ, ಎಂಎಸ್ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ಅವರು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಪಾದನೆಗಳಿಗೆ ತಿರುಗೇಟು ನೀಡಿದರು.
ಇಲ್ಲಿನ ಗಾಂಧಿ ಮೈದಾನದ ನಗರಸಭೆ ರಂಗಮಂದಿರದಲ್ಲಿ ನಗರಸಭೆ ವತಿಯಿಂದ ಆ. ೧೩ರಿಂದ ೧೫ರವರೆಗೆ ನಡೆಯುವ ರಾಷ್ಟ್ರಧ್ವಜ ವಿತರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಮನೆಮನೆ ಮೇಲೂ ರಾಷ್ಟ್ರಧ್ವಜ ಹಾರಿಸುವುದು ದೇಶದ ಕೆಲಸ. ಇಲ್ಲಿ ಪಕ್ಷ, ಜಾತಿಮತ ಬೇಧ ಮರೆತು ಕೆಲಸ ಮಾಡಬೇಕು. ಟೀಕೆ ಮಾಡುವ ಕೆಲವರು ಬಂದು ಕೆಲಸ ಮಾಡಬೇಕು. ಆಗ ರಾಷ್ಟ್ರಸೇವೆಯಲ್ಲಿ ಅವರು ತೊಡಗಿಸಿಕೊಂಡಂತೆ ಆಗುತ್ತದೆ ಎಂದು ಹೆಸರು ಹೇಳದೆ ಛೇಡಿಸಿದರು.
ಬಾವುಟ ತಯಾರಿಸುವಾಗ ಎಲ್ಲ ರೀತಿಯ ಎಚ್ಚರಿಕೆ ವಹಿಸಲಾಗಿದೆ. ಸಣ್ಣಪುಟ್ಟ ಲೋಪವನ್ನು ಕೆಲವರು ಎತ್ತಿ ಆಡುವ ಕೆಟ್ಟ ಮನಸ್ಥಿತಿಯವರು ಇದ್ದಾರೆ. ಸಾರ್ವಜನಿಕರು ಇದಕ್ಕೆ ತಲೆ ಕೆಡಿಸಿಕೊಳ್ಳಬಾರದು. ಧ್ವಜ ತಯಾರಿಸಲು ಯಾರ ಬಳಿಯೂ ಹಣವನ್ನು ವಸೂಲಿ ಮಾಡಿಲ್ಲ ಎಂದು ಹೇಳಿದರು.
ತಾಲೂಕಿನಲ್ಲಿ ೫೦ರಿಂದ ೬೦ ಸಾವಿರ ಮನೆ ಇದ್ದು, ಹೆಚ್ಚುವರಿಯಾಗಿ ೧೭ ಸಾವಿರ ಬಾವುಟವನ್ನು ಎಲ್ಲ ರೀತಿಯಲ್ಲೂ ಸಿದ್ಧಪಡಿಸಲಾಗಿದೆ. ಗುರುವಾರದಿಂದ ಶಾಲಾಕಾಲೇಜು, ಸಂಘಸಂಸ್ಥೆಗಳ ಮೂಲಕ ರಾಷ್ಟ್ರಧ್ವಜವನ್ನು ಹಸ್ತಾಂತರಿಸಲಾಗುತ್ತದೆ. ಮನೆಗೊಂದೇ ಬಾವುಟ ಹಾರಿಸುವತ್ತ ಎಲ್ಲರೂ ಗಮನ ಹರಿಸಬೇಕು ಎಂದರು.
ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಸದಸ್ಯರಾದ ಟಿ.ಡಿ.ಮೇಘರಾಜ್, ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ಪೌರಾಯುಕ್ತ ರಾಜು ಡಿ. ಬಣಕಾರ್, ತಾಲ್ಲೂಕು ಪಂಚಾಯ್ತಿ ಇಓ ಪುಷ್ಪಾ ಕಮ್ಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್., ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಪರಮೇಶ್ವರಪ್ಪ, ಟಿಎಪಿಎಂಸಿಎಸ್ ಅಧ್ಯಕ್ಷ ಲೋಕನಾಥ ಬಿಳಿಸಿರಿ, ನಗರಸಭಾ ಸದಸ್ಯರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ