ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯ
Team Udayavani, Apr 17, 2019, 5:17 PM IST
ಸೊರಬ: ಹಲವು ದಿನಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು ಪಟ್ಟಣದ ಕಾನಕೇರಿ ಬಡಾವಣೆಯ ನಿವಾಸಿಗಳು ನೀರಿನ ಸಮಸ್ಯೆ ನೀಗಿಸುವಂತೆ ಖಾಲಿ ಕೊಡ ಹಿಡಿದು ಪಪಂ ಮುಂಭಾಗದಲ್ಲಿ ಮಂಗಳವಾರ ದಿಢೀರನೆ ಪ್ರತಿಭಟನೆ ನಡೆಸಿದರು.
ಕಳೆದ 15 ದಿನಗಳಿಂದ ಪಟ್ಟಣದ ಕಾನಕೇರಿಬಡಾವಣೆಯ ಹಲವಾರು ವಾರ್ಡ್ಗಳಲ್ಲಿ ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಸಮರ್ಪಕ ನೀರಿನ ವ್ಯವಸ್ಥೆ ಇದ್ದಾಗಲೂ ವಾರಕ್ಕೊಮ್ಮೆ ನೀರು ಸರಬರಾಜು ಮಾಡುತ್ತಿದ್ದ ಪಪಂ ಆಡಳಿತ ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಆಗುವ ಅಭಾವ ತಪ್ಪಿಸಲು ಮುಂಜಾಗ್ರತೆಯಾಗಿ ಕ್ರಮ ಕ್ರಮ ಕೈಗೊಳ್ಳದಿರುವುದು ಇಷ್ಟೆಲ್ಲಾ ಸಮಸ್ಯೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ನೀರಿನ ಅವ್ಯವಸ್ಥೆ ಬಗ್ಗೆ ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೆ ಸರ್ವೆ ನಂ 113ರಲ್ಲಿರುವ ವಾರ್ಡ್ಗಳು ನನ್ನ ವ್ಯಾಪ್ತಿಗೆ ಬರುವುದಿಲ್ಲ. ನೀವು ತಹಶೀಲ್ದಾರ್ ಅವರ ಬಳಿ ನಿಮ್ಮ ಸಮಸ್ಯೆ ಬಗ್ಗೆ ಹೇಳಿಕೊಳ್ಳಿ ಎಂದು ಹೇಳುವುದಲ್ಲದೇ, ನೀರನ್ನು ಅಂಗಡಿಯಲ್ಲಿ ಖರೀದಿ ಮಾಡಿಕೊಡಬೇಕೆ ಎಂಬ ಉಡಾಫೆ ಉತ್ತರ ನೀಡುತ್ತೀರಿ. ಜನರಿಗೆ ಸ್ಪಂದಿಸುವ ಮನೋಭಾವ ನಿಮಗೆ ಇಲ್ಲದಿದ್ದರೆ ಕೆಲಸಕ್ಕೆ ರಾಜೀನಾಮೆ ಕೊಡಿ ಎಂದು ಪ್ರತಿಭಟನಾಕಾರರು ಮುಖ್ಯಾಧಿಕಾರಿ ಜಗದೀಶ ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಕುಡಿಯುವ ನೀರಿಗಾಗಿ ಪಪಂ ತಾಲೂಕಿನ ವರದಾ ನದಿಗೆ ಅಡ್ಡಲಾಗಿ ಒಡ್ಡು ನಿರ್ಮಿಸಿ ಪಟ್ಟಣಕ್ಕೆ ನೀರು ಸರಬರಾಜು ಮಾಡುತ್ತಿದ್ದು, ಈ ತಾತ್ಕಾಲಿಕ ವ್ಯವಸ್ಥೆಗೆ ವರ್ಷಕ್ಕೆ ಲಕ್ಷಾಂತರ ರೂಪಾಯಿ ಹಣ ವ್ಯಯ ಮಾಡಲಾಗುತ್ತಿದೆ. ಈಗಾಗಲೇ ನದಿಯಲ್ಲಿ ನೀರು ಬರಿದಾಗಿದೆ. ಆದರೆ ಪರ್ಯಾಯವಾಗಿ ಹೆಚ್ಚಿನ ಕೊಳವೆ ಬಾವಿಗಳನ್ನು ಕೊರೆಸಿ ಪಟ್ಟಣದಲ್ಲಿ ಎದುರಾಗಿರುವ ನೀರಿನ ಬವಣೆ ನೀಗಿಸಲು ಮುಂದಾಗದೆ ವಿದ್ಯುತ್ ಸಮಸ್ಯೆ ಮುಂದಿಟ್ಟು ಜನರ ಜೀವನದ ಜೊತೆ ಚೆಲ್ಲಾಟವಾಡುವುದು ಸರಿಯೇ ಎಂದು ಪ್ರಶ್ನಿಸಿದರು.
ಇಡಗೋಡು ಇಸ್ಮಾಯಿಲ್, ರೇವಣಪ್ಪ, ನಾಗರಾಜ್, ರವಿ, ಅನ್ನೀಸ್, ನಜೀರ್ ಸಾಬ್, ಬಾಷಾ, ಜಗದೀಶ್, ರಾಜು, ರಾಮಪ್ಪ, ಗುರುರಾಜ, ರಾಜೇಶ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’