ಮರಗಳ ಅಕ್ರಮ ಕಡಿತ : ಟ್ರ್ಯಾಕ್ಟರ್ ಸಮೇತ ಮೂವರು ವಶಕ್ಕೆ
Team Udayavani, May 10, 2021, 2:30 PM IST
ಸೊರಬ : ಅಕ್ರಮವಾಗಿ ಮರಗಳನ್ನು ಕಡಿದು ಸಾಗಿಸುತ್ತಿದ್ದ ಮೂವರು ಆರೋಪಿಗಳ ಸಮೇತ ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹಳೇಸೊರಬ ಗ್ರಾಮದಲ್ಲಿ ಭಾನುವಾರ ಸಂಜೆ ಜರುಗಿದೆ.
ಹಳೇ ಸೊರಬ ಗ್ರಾಮದ ಸರ್ವೆ ನಂ. 245ರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಲಕ್ಷಾಂತರ ರೂ., ಬೆಲೆಬಾಳುವ ಮರಗಳನ್ನು ಕಡಿತಲೆ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಡಿಎಫ್ ಒ ಮೋಹನ್ ಕುಮಾರ್, ಎಸಿಎಫ್ ಪ್ರವೀಣ್ ಕುಮಾರ್ ಬಸರೂರು ಮಾರ್ಗದರ್ಶನದಲ್ಲಿ ಆರ್ಎಫ್ಒ ಪ್ರಭುರಾಜ ಪಾಟೀಲ್ ನೇತೃತ್ವದ ತಂಡ ದಾಳಿ ನಡೆಸಿ, ಕಡಿತಲೆ ಮಾಡಿದ ಮರಗಳ ಸಮೇತ ಆರೋಪಿತರಾದ ಸುರೇಶ್ ನಾರಾಯಣ ಆಚಾರ್, ಪ್ರಶಾಂತ್ ಪರಶುರಾಮ್, ಕೃತಿಕ್ ಗೋವಿಂದಪ್ಪ ಅವರನ್ನು ಬಂಧಿಸಲಾಗಿದೆ.
ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್, ಟ್ರ್ಯಾಕ್ಟರ್, ಮರಗಳ ಕಡಿತಲೆ ಮಿಷನ್ಗಳನ್ನು ವಶಕ್ಕೆ ಪಡೆಯಲಾಗಿದೆ.
ದಾಳಿಯಲ್ಲಿ ಉಪ ವಲಯಾರಣ್ಯಾಧಿಕಾರಿಗಳಾದ ಶ್ರೀಕಾಂತ್ ರಾಥೋಡ್, ಮುತ್ತಣ್ಣ, ಹನುಮಂತಪ್ಪ, ಅರಣ್ಯ ವೀಕ್ಷಕ ಮಂಜುನಾಥ್ ಪಾಲ್ಗೊಂಡಿದ್ದರು. ತನಿಖೆ ಮುಂದುವರೆದಿದೆ. ಇನ್ನೂ ಸಾಕಷ್ಟು ಪ್ರಮಾಣದಲ್ಲಿ ಕಡಿತಲೆಗೊಂಡಿರುವ ಮರಗಳನ್ನು ವಶಕ್ಕೆ ಪಡೆಯಬೇಕಿದ್ದು, ಕೃತ್ಯದಲ್ಲಿ ಪಾಲ್ಗೊಂಡ ಇನ್ನೂ ಹಲವರ ಬಂಧನಕ್ಕೆ ಬಲೆ ಬೀಸಲಾಗಿದೆ.
ಅನೇಕ ಅನಧಿಕೃತ ಮತ್ತು ಅಕ್ರಮ ಚಟುವಟಿಕೆಗಳಿಗೆ ನೋಂದಣಿಯಾಗದ ಟ್ರ್ಯಾಕ್ಟರ್ಗಳು ಮತ್ತು ವಾಹನಗಳನ್ನು ಬಳಕೆ ಮಾಡುತ್ತಿರುವ ವಿಷಯ ತಾಲ್ಲೂಕಿನಲ್ಲಿ ಗುಟ್ಟಾಗಿ ಉಳಿದಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಟ್ರ್ಯಾಕ್ಟರ್ ನೋಂದಣಿ ಸಂಖ್ಯೆ ಇಲ್ಲದಿರುವುದು ಸ್ಪಷ್ಟ ನಿದರ್ಶನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ