ಮನೆ ಹಕ್ಕುಪತ್ರಕ್ಕಾಗಿ ಅರಣ್ಯ ಇಲಾಖೆ ಕಚೇರಿ ಏರಿದ ಗ್ರಾಪಂ ಉಪಾಧ್ಯಕ್ಷ!
Team Udayavani, Dec 4, 2019, 10:55 PM IST
ಹೊಸನಗರ: ವಾಸದ ಮನೆ ಹಕ್ಕುಪತ್ರ ಪಡೆಯಲು ಅರಣ್ಯ ಇಲಾಖೆ ಎನ್ಒಸಿ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾ.ಪಂ. ಉಪಾಧ್ಯಕ್ಷರೇ ಅರಣ್ಯ ಕಚೇರಿ ಕಟ್ಟಡ ಏರಿ ಪ್ರತಿಭಟಿಸಿದ ಘಟನೆ ತಾಲೂಕಿನ ನಗರ ವಲಯ ಅರಣ್ಯಾಧಿಕಾರಿ ಕಚೇರಿ ಬಳಿ ಬುಧವಾರ ನಡೆದಿದೆ.
ಮೂಡುಗೊಪ್ಪ ಗ್ರಾ.ಪಂ. ವ್ಯಾಪ್ತಿಯ ಸರ್ವೆ ನಂ.220ರಲ್ಲಿ ಸುಮಾರು 128 ಕುಟುಂಬಗಳಿಗೆ ವಾಸದ ಮನೆ ಹಕ್ಕುಪತ್ರ ಪಡೆಯಲು ಅರಣ್ಯ ಇಲಾಖೆ ಎನ್ಒಸಿ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾ.ಪಂ. ಉಪಾಧ್ಯಕ್ಷ ಕರುಣಾಕರ ಶೆಟ್ಟಿ ಅವರು ಚಿಕ್ಕಪೇಟೆಯಲ್ಲಿರುವ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ ಏರಿ ಪ್ರತಿಭಟನೆ ನಡೆಸಿದರು.
ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕರುಣಾಕರ ಶೆಟ್ಟಿ ಮನವೊಲಿಸಿ ಮಾತುಕತೆಗೆ ಒಪ್ಪಿಸಿದರು. ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೇ ಕಾರ್ಯ ಚುರುಕುಗೊಳಿಸಿ ಸಮಸ್ಯೆ ಇತ್ಯರ್ಥಕ್ಕೆ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಅನಂತರ ಕರುಣಾಕರ ಶೆಟ್ಟಿ ತಮ್ಮ ಪ್ರತಿಭಟನೆ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ