ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ


Team Udayavani, Dec 23, 2021, 4:55 PM IST

ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ

ಶಿವಮೊಗ್ಗ: ಇಲ್ಲಿನ ಪಶುವೈದ್ಯಕೀಯ ಮಹಾವಿದ್ಯಾಲಯದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿ ಮ್ಯೂಸಿಯಂ ಸೀಜ್ ಮಾಡಿದ್ದಾರೆ. ಬೆಂಗಳೂರು ಮತ್ತು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿವೆ. ಬೆಳಗ್ಗೆಯಿಂದ ಪರಿಶೀಲನಾ ಕಾರ್ಯ ನಡೆಸಲಾಯಿತು.

ಸೋಮಿನಕೊಪ್ಪ ಸಮೀಪದ ಪಶುವೈದ್ಯಕೀಯ ಮಹಾವಿದ್ಯಾಲಯದ ರೋಗಶಾಸ್ತ್ರ ಮ್ಯೂಸಿಯಂ ಒಂದರಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು ಹತ್ತು ಅಧಿಕಾರಿಗಳ ತಂಡ ದಾಳಿ ಮತ್ತು ಪರಿಶೀಲನೆ ನಡೆಸಿತು.

ಶಿವಮೊಗ್ಗ ಮತ್ತು ಬೆಂಗಳೂರಿನಿಂದ ಆಗಮಿಸಿರುವ ಅರಣ್ಯಾಧಿಕಾರಿಗಳ ತಂಡ ದಾಳಿಯಲ್ಲಿ ಪಾಲ್ಗೊಂಡಿದೆ. ಎಸಿಎಫ್ ವೀರೇಶ್ ಗೌಡ ಪೊಲೀಸ್ ಪಾಟೀಲ್ ಅವರ ನೇತೃತ್ವದಲ್ಲಿ ಅರಣ್ಯ ಅಪರಾಧ ನಿಯಂತ್ರಣ ವಿಭಾಗದ ಅಧಿಕಾರಿಗಳು ಬೆಂಗಳೂರಿನಿಂದ ಬಂದಿದ್ದಾರೆ.

ಪಶುವೈದ್ಯಕೀಯ ಮಹಾವಿದ್ಯಾಲಯದ ಲ್ಯಾಬ್‌ ನಲ್ಲಿ ಶೆಡ್ಯೂಲ್ 1ಕ್ಕೆ ಸೇರಿದ ಪ್ರಾಣಿಗಳ ಅಂಗಗಳನ್ನು ಇಡಲಾಗಿದೆ ಎಂದು ಹೇಳಲಾಗುತ್ತಿದೆ. ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಅಂಗಗಳನ್ನು ಇಟ್ಟುಕೊಂಡಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ದೂರು ಬಂದಿದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮ್ಯೂಸಿಯಂನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಅರಣ್ಯ ಇಲಾಖೆ ವೈದ್ಯರು ವಿವಿಧ ಅರಣ್ಯಗಳಲ್ಲಿ ಮೃತಪಟ್ಟ ಪ್ರಾಣಿಗಳ ಮರಣೋತ್ತರ ಪರೀಕ್ಷೆ ನಡೆಸುತ್ತಾರೆ. ಪಶುವೈದ್ಯಕೀಯ ಮಹಾವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು ಕೂಡ ಈ ಮರಣೋತ್ತರ ಪರೀಕ್ಷೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಇಂತಹ ಸಂದರ್ಭ ವಿದ್ಯಾರ್ಥಿಗಳ ಅಧ್ಯಯನದ ದೃಷ್ಟಿಯಿಂದ ಪ್ರಾಣಿಗಳ ಕೆಲವು ಅಂಗಗಳನ್ನು ತಂದು ಸಂಗ್ರಹಾಲಯದಲ್ಲಿ ಸಂಗ್ರಹಿಸಿ ಇಡಲಾಗುತ್ತದೆ.

ಶೆಡ್ಯೂಲ್ 1ರಲ್ಲಿ ಬರುವ ಪ್ರಾಣಿಗಳ ಅಂಗಗಳನ್ನು ಸಂಗ್ರಹಿಸುವುದು ಅಪರಾಧ. ಅಧ್ಯಯನ ದೃಷ್ಟಿಯಿಂದ ಇವುಗಳನ್ನು ತಂದು ಇಟ್ಟುಕೊಳ್ಳುವುದಕ್ಕೆ ಅರಣ್ಯ ಇಲಾಖೆಯ ಅನುಮತಿ ಕಡ್ಡಾಯ. ಕೇವಲ ಮೌಖಿಕ ಅನುಮತಿ ಮೇರೆಗೆ ಅಂಗಗಳನ್ನು ತಂದು ಇಟ್ಟುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೆಂಗಳೂರಿನಲ್ಲಿರುವ ಅರಣ್ಯ ಅಪರಾಧ ನಿಯಂತ್ರಣ ವಿಭಾಗಕ್ಕೆ ದೂರು ನೀಡಲಾಗಿದೆ.

ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು: ಶಿವಮೊಗ್ಗದ ಸೋಮಿನಕೊಪ್ಪದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯವು ರಾಜ್ಯದ ಪ್ರಮುಖ ಕಾಲೇಜುಗಳಲ್ಲಿ ಒಂದಾಗಿದೆ. ಸದ್ಯ ಇಲ್ಲಿ ಮುನ್ನೂರಕ್ಕು ಹೆಚ್ಚು ವಿದ್ಯಾರ್ಥಿಗಳು ವಿವಿಧ ಕೋರ್ಸುಗಳಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಬೃಹತ್ ಕ್ಯಾಂಪಸ್’ನೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ಆದರೆ ಶೆಡ್ಯೂಲ್ 1ರಲ್ಲಿ ಬರುವ ಪ್ರಾಣಿಗಳ ಅಂಗಗಳನ್ನು ಅನುಮತಿ ಇಲ್ಲದೆ ಸಂಗ್ರಹಿಸಿರುವ ಕಳಂಕಕ್ಕೆ ತುತ್ತಾಗಿದೆ.

ಏನಿದು ಶೆಡ್ಯೂಲ್ 1 ಪ್ರಾಣಿಗಳು?: ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಪ್ರಕಾರ ಪ್ರಾಣಿಗಳನ್ನು ಐದು ಶೆಡ್ಯೂಲ್‌ಗಳಲ್ಲಿ ವಿಂಗಡಿಸಲಾಗಿದೆ. ಶೇಡ್ಯೂಲ್ 1ರಲ್ಲಿ ಮೂರು ವಿಭಾಗಗಳಿವೆ. ಪ್ರಾಣಿಗಳು, ಜಲಚರಗಳು ಮತ್ತು ಪಕ್ಷಿಗಳು ಎಂದು ವಿಭಾಗಿಸಲಾಗಿದೆ. ಹುಲಿ, ಚಿರತೆ, ಕಾಡು ಕೋಣ ಸೇರಿದಂತೆ 41 ಪ್ರಾಣಿಗಳು ಈ ಭಾಗದಲ್ಲಿವೆ. ಇವುಗಳ ಅಂಗಗಳನ್ನು ಸಂಗ್ರಹಿಸುವುದ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ ಅಪರಾಧವಾಗಲಿದೆ.

ಸೀಜ್ ಮಾಡಿದ್ದೇವೆ: ದಾಳಿ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಎಫ್‌ಒ ರವೀಂದ್ರ ಕುಮಾರ್, ಪ್ರಾಣಿಗಳ ಮರಣೋತ್ತರ ಪರೀಕ್ಷೆ ಸಂದರ್ಭ ಕೆಲವು ವಸ್ತುಗಳನ್ನು ತಂದು ಲ್ಯಾಬ್‌ ನಲ್ಲಿ ಇಟ್ಟುಕೊಂಡಿದ್ದಾರೆ. ಅನುಮತಿ ಪಡೆದು ಇವುಗಳನ್ನು ತಂದಿಟ್ಟುಕೊಳ್ಳಬೇಕಿತ್ತು. ಆದರೆ ಯಾವುದೆ ಅನುಮತಿ ಪಡೆದಿರುವ ಹಿನ್ನೆಲೆಯಲ್ಲಿ ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.