ಮತ್ತೆ ಕಾಣಿಸಿಕೊಂಡ ಕಾಡಾನೆ: ಹೆಚ್ಚಿದ ಆತಂಕ
Team Udayavani, May 12, 2022, 2:19 PM IST
ಶಿವಮೊಗ್ಗ: ಜಿಲ್ಲೆಯ ಉಂಬ್ಳೇಂಬೈಲು ಭಾಗದಲ್ಲಿ ಮತ್ತೆ ಕಾಡಾನೆ ಕಾಣಿಸಿಕೊಂಡಿದ್ದು, ಕಳೆದ ಕೆಲ ದಿನದಿಂದ ಗ್ರಾಮದ ಸನಿಹದ ಕಾಡಿನಲ್ಲೇ ಬೀಡುಬಿಟ್ಟಿದೆ.
ಉಂಬ್ಳೇಬೈಲು ಸರ್ಕಲ್ನಿಂದ ಕೈದೊಟ್ಲು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಒಂಟಿಸಲಗ ಪತ್ತೆಯಾಗಿದೆ. ಗ್ರಾಮದ ಸದಾನಂದ ಶೆಟ್ಟಿ ಎಂಬುವವರ ಮನೆ ಮುಂಭಾಗದಲ್ಲೂ ಓಡಾಡಿದೆ. ಹೀಗಾಗಿ, ಉಂಬ್ಳೇಬೈಲು ಸುತ್ತಮುತ್ತಲಿನ ಗ್ರಾಮದ ರೈತರು ಹಾಗೂ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಈ ಹಿಂದೆ ಕೂಡ ಉಂಬ್ಳೇಬೈಲು ಸುತ್ತಮುತ್ತಲ ಗ್ರಾಮದ ಅಡಿಕೆ, ಬಾಳೆ ತೋಟಕ್ಕೆ ನುಗ್ಗಿ ಕಾಡಾನೆಗಳು ಬೆಳೆ ನಾಶ ಮಾಡಿದ್ದವು.
ತಿಂಗಳ ಹಿಂದಷ್ಟೇ ಈ ಭಾಗದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆ ಇದೀಗ ಮತ್ತೆ ಪ್ರತ್ಯಕ್ಷವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನ ಲಕ್ಕಿನಕೊಪ್ಪ, ಉಂಬ್ಳೇಬೈಲು, ಮಾರಿದಿಬ್ಬ, ಕೈದೊಟ್ಲು, ಸಾಲಿಗೆರೆ, ಗೋಣಿಬೀಡು ಸೇರಿದಂತೆ ಹಲವು ಗ್ರಾಮಗಳಿಗೆ ನಿರಂತರವಾಗಿ ಆನೆಗಳು ದಾಳಿ ಮಾಡುತ್ತಿವೆ. ತೋಟಕ್ಕೆ ನುಗ್ಗಿ ಅಡಕೆ ಮರಗಳನ್ನೂ ಸಹ ಬುಡಮೇಲು ಮಾಡುತ್ತಿವೆ.
ಅರಣ್ಯ ಇಲಾಖೆ ಕೆಲವು ತಿಂಗಳ ಹಿಂದಷ್ಟೇ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿತ್ತು. ಸಕ್ರೆಬೈಲು ಆನೆ ಬಿಡಾರದ ಆನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ ಮತ್ತೆ ಗ್ರಾಮಕ್ಕೆ ಲಗ್ಗೆ ಇಟ್ಟಿದ್ದು, ಶಾಶ್ವತ ಪರಿಹಾರ ದೊರಕಿಸುವಂತೆ ರೈತರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ. ಜೊತೆಗೆ ಫೆನ್ಸಿಂಗ್ ಅಥವಾ ಟ್ರಂಚ್ ನಿರ್ಮಿಸಲು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ