ದೀಪ ಆರುವ ಮುನ್ನ ಜೋರಾಗಿ ಕೂಗಾಡುತ್ತದಂತೆ: ಕಾಂಗ್ರೆಸ್ ವಿರುದ್ಧ ಈಶ್ವರಪ್ಪ ವಾಗ್ದಾಳಿ
Team Udayavani, Jul 6, 2022, 4:18 PM IST
ಶಿವಮೊಗ್ಗ: ಬಿಜೆಪಿ ಮೂರು ಅಂಶಗಳ ಮೇಲೆ ನಿಂತಿರುವ ಪಕ್ಷ. ಶಿಸ್ತು, ನಾಯಕತ್ವ, ಸಿದ್ದಾಂತದ ಮೇಲೆ ನಾಯಕರು, ಕಾರ್ಯಕರ್ತರು ಕೆಲಸ ಮಾಡುತ್ತಾ ಇದ್ದಾರೆ. ಶಿಸ್ತಿನ ಜೊತೆಗೆ ನರೇಂದ್ರ ಮೋದಿ ನಾಯಕತ್ವವನ್ನು ಕಾರ್ಯಕರ್ತರು ಒಪ್ಪಿದ್ದಾರೆ. ಮೂರು ಅಂಶ ಒಪ್ಪಿ ಗುಡ್ಡಗಾಡು ಪ್ರದೇಶದಿಂದ ನಗರದವರೆಗೂ ಎಲ್ಲರೂ ಪಕ್ಷ ಸೇರುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಕಾಂಗ್ರೆಸ್ ನವರಿಗೆ ಇಡೀ ದೇಶದಲ್ಲಿ ಟೀಕೆ ಮಾಡುವುದು ಬಿಟ್ಟರೆ ಬೇರೆ ಗೊತ್ತಿಲ್ಲ. ಪಕ್ಷ ಇಲ್ಲ, ಸರಕಾರ ಇಲ್ಲ ಎಲ್ಲೂ ಆಡಳಿತ ಇಲ್ಲದಿರುವ ಸಂದರ್ಭದಲ್ಲಿ ಟೀಕೆ ಮಾಡುವುದೇ ಅವರ ಕೆಲಸ. ವಿರೋಧ ಪಕ್ಷದ ಶಾಸಕರು ಅವರ ಹಿಡಿತದಲ್ಲಿ ಇಲ್ಲ ಅಂದಾಗ ಅದೊಂದು ರಾಜಕೀಯ ಪಕ್ಷವೇ ಅಲ್ಲ ಎಂದರು.
ನಮ್ಮ ಪಕ್ಷದ ಶಾಸಕರು, ಸಂಸದರು, ಮಂತ್ರಿಗಳು ಪಕ್ಷ ಬಿಟ್ಟು ಹೋಗಲ್ಲ. ಅವರೆಲ್ಲಾ ಶಿಸ್ತು, ನಂಬಿಕೆ, ನಾಯಕತ್ವ ಹಾಗೂ ಸಿದ್ದಾಂತ ಒಪ್ಪಿದ್ದಾರೆ. ನಿಮ್ಮ ಶಾಸಕರು, ಕಾರ್ಯಕರ್ತರನ್ನು ಕಂಟ್ರೋಲ್ ನಲ್ಲಿ ಹಿಡಿದುಕೊಳ್ಳಿ. ನಿಮ್ಮ ಶಾಸಕರನ್ನು ಹಿಡಿದುಕೊಳ್ಳಲು ವಿಫಲವಾಗಿರುವುದರಿಂದ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ. ನಾವಾಗೀಯೇ ಯಾರನ್ನು ಕರೆಯೋಕೆ ಹೋಗಿಲ್ಲ. ಅವರಾಗಿಯೇ ತತ್ವ-ಸಿದ್ದಾಂತ ಒಪ್ಪಿ ಬಂದರೇ ಸಂತೋಷದಿಂದ ಸೇರಿಸಿಕೊಳ್ಳುತ್ತೇವೆ ಎಂದು ಹೇಳಿದರು.
ಜಮೀರ್ ಅಹಮದ್ ನಿವಾಸದ ಮೇಲೆ ಎಸಿಬಿ ದಾಳಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೋಟಿಗಟ್ಟಲೆ ಹಣ, ಬೇನಾಮಿ ಆಸ್ತಿ, ಸಾಕಷ್ಟು ಆಸ್ತಿ ಜಮೀರ್ ಅಹಮದ್ ಮನೆಯಲ್ಲಿ ಸಿಕ್ಕಿದೆ. ಸಿದ್ದರಾಮಯ್ಯ, ಡಿಕೆಶಿ ಮೊದಲು ಎಸಿಬಿ ಅವರನ್ನು ಕ್ಷಮೆ ಕೇಳಲಿ. ಕ್ಷಮೆ ಕೇಳಿದರೆ ಪ್ರಾಮಾಣಿಕ ರಾಜಕಾರಣಿಗಳು ಅಂತಾ ಜನ ಒಪ್ಪುತ್ತಾರೆ. ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ವಿಪಕ್ಷ ಸ್ಥಾನವು ಬರುವುದಿಲ್ಲ ಎಂದರು.
ಇದನ್ನೂ ಓದಿ: ಕಾಳಿ ಮಾತೆ ವಿರುದ್ಧ ಹೇಳಿಕೆ:ಟಿಎಂಸಿಯಿಂದ ಮೊಯಿತ್ರಾ ಉಚ್ಛಾಟಿಸಿ: ಮಮತಾಗೆ ಬಿಜೆಪಿ ಗಡುವು
ಎಸಿಬಿ ವಿರುದ್ದ ನ್ಯಾಯಾಧೀಶರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಧೀಶರ ಮೇಲೆ ಗೌರವ ಇದೆ. ಅವರು ಏಕೆ ಈ ರೀತಿ ಹೇಳಿದ್ದರೋ ಗೊತ್ತಿಲ್ಲ. ಎಸಿಬಿ ಅವರ ಕೆಲಸಕ್ಕೆ ಅವರು ಸಹ ಮೆಚ್ಚುಗೆ ವ್ಯಕ್ತಪಡಿಸಬೇಕು. ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದಂತಹ ಉದಾಹರಣೆ ಇದೆಯಾ? ಅವರು ಜೈಲಿಗೆ ಹೋಗಿದ್ದು ನನಗೆ ತೃಪ್ತಿ ಇಲ್ಲ. ಅವರು ಇತರರಿಗೆ ಮಾದರಿಯಾಗಿರಬೇಕು. ಉಳಿದಂತಹ ಅಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು ಎಂದರು.
ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಆಚರಣೆ ಹುಟ್ಟು ಹಬ್ಬ ಆಚರಣೆ ಮಾಡುವುದು ಕುಟುಂಬದವರು ಸೇರಿ ಒಳ್ಳೆಯದು ಆಗಲಿ ಅಂತಾ ಮಾಡುತ್ತಾರೆ. ಸಿದ್ದರಾಮೋತ್ಸವ ಅಂತಾ ಕಾಂಗ್ರೆಸ್ ನವರು ಹೆಸರು ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷಕ್ಕು ಅದಕ್ಕೂ ಸಂಬಂಧ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮನೆಯ ಕುಟುಂಬವೇ ಛಿದ್ರವಾಗಿ ಮನೆಯಲ್ಲಿರುವ ದೊಡ್ಡಣ್ಣನ ಉತ್ಸವ ಸಂಬಂಧ ಇಲ್ಲ ಅಣ್ತಮ್ಮರೇ ಇಲ್ಲ ಅಂದ್ರೆ ಹೇಗೆ? ಮನೆಯವರೇ ಹೀಗೇ ಹೇಳಿದರೇ ಇದನ್ನು ಜನರ ಉತ್ಸವ ಅಂತಾ ಕರೆಯಲು ಆಗುತ್ತದಾ? ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ: ಕುಲ್ಗಾಮ್ : ಎನ್ ಕೌಂಟರ್ ವೇಳೆ ಶರಣಾದ ಇಬ್ಬರು ಸ್ಥಳೀಯ ಉಗ್ರರು
ನಾನು ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಅನ್ನೋದು, ಅವರೇ ಹಿಂದಿನಿಂದ ತಮ್ಮ ಹಿಂಬಾಲಕರಿಗೆ ಹೇಳಿಕೊಡೋದು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ಮುಖ್ಯಮಂತ್ರಿ ಡಿಕೆಶಿ ಅಂತಾ ಕೂಗಿಕೊಳ್ಳುವುದು. ದೇಶದಲ್ಲಿ ಇಂತಹ ದುಸ್ಥಿತಿ ಯಾರಿಗೂ ಬಂದಿಲ್ಲ. ನಮ್ಮ ರಾಜ್ಯದಲ್ಲಿ ಬಂದಿದೆ. ದೀಪ ಆರುವ ಮುನ್ನ ಜೋರಾಗಿ ಕೂಗಾಡುತ್ತದಂತೆ. ಆ ರೀತಿ ಕೂಗಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಪಿಎಸ್ಐ ಹಗರಣ ವಿಚಾರದಲ್ಲಿ ಸಿಎಂ ಹಾಗು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ, ಡಿಕೆಶಿ ಹೇಳಿದ್ದಾರೆ. ನಿಮ್ಮ ಸರಕಾರದ ಅವಧಿಯಲ್ಲಿ ಒಂದಾದರೂ ಈ ರೀತಿ ತನಿಖೆ ಮಾಡಿ ಕ್ರಮ ಕೈಗೊಂಡಿದ್ರಾ? ಎಷ್ಟು ಪ್ರಶ್ನೆ ಪತ್ರಿಕೆ ಬಹಿರಂಗ ಆಯ್ತು. ಸುಮ್ಮನೆ ನಮ್ಮದು ಒಂದು ರಾಜಕೀಯ ಪಕ್ಷ ಅಂತಾ ಟೀಕೆ ಮಾಡ್ತಿದ್ದಾರೆ. ದೀಪ ಯಾವಾಗ ಆರಿ ಹೋಗುತ್ತದೆ ನೋಡೋಣ. ಮುಂದೆ ಅಧಿಕಾರಕ್ಕೆ ಬರುತ್ತೀವಿ ಅಂತಾ ಹೇಳುತ್ತಿದ್ದಾರೆ ದಯವಿಟ್ಟು ಅಂತಹ ಕನಸು ಕಾಣಬೇಡಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ