ಲೋಕಸಭೆ, ವಿಧಾನಸಭೆಯಲ್ಲೂ ಮಹಿಳೆಯರಿಗೆ ಶೇ. 50ರ ಮೀಸಲಾತಿ; ಕಾಗೋಡು ಕರೆ


Team Udayavani, Mar 15, 2022, 6:04 PM IST

ಲೋಕಸಭೆ, ವಿಧಾನಸಭೆಯಲ್ಲೂ ಮಹಿಳೆಯರಿಗೆ ಶೇ. 50ರ ಮೀಸಲಾತಿ; ಕಾಗೋಡು ಕರೆ

ಸಾಗರ: ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಸಿಕ್ಕಿದೆ. ಮಹಿಳೆಯರು ಅಷ್ಟಕ್ಕೆ ತೃಪ್ತರಾಗದೆ ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲೂ ತಮಗೆ ಶೇ. 50 ಮೀಸಲಾತಿ ದೊರಕಿಸಿಕೊಡುವಂತೆ ಹಕ್ಕೊತ್ತಾಯ ಮಂಡಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕರೆ ನೀಡಿದ್ದಾರೆ.

ಇಲ್ಲಿನ ಗಾಂಧಿಮಂದಿರದಲ್ಲಿ ಮಂಗಳವಾರ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಹಿಳೆಯರು ತಮ್ಮ ಹಕ್ಕುಗಳನ್ನು ಬಾಯಿಬಿಟ್ಟು ಕೇಳದೆ ಹೋದರೆ ಮೀಸಲಾತಿ ಪಡೆಯಲು ಶತಮಾನಗಳೇ ಬೇಕಾಗುತ್ತದೆ. ಮಹಿಳೆಯರ ಪರವಾಗಿ ಕಾನೂನು ರೂಪಿಸುವ ದೊಡ್ಡತನ ತೋರಿಸಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಕ್ಕುಗಳು, ಸ್ತ್ರೀಶಕ್ತಿ ಸಂಘಟನೆಗಳಿಗೆ ಶಕ್ತಿ ತುಂಬಿದ್ದು ನಮ್ಮ ಪಕ್ಷ. ಇಂತಹ ಮಹಿಳಾ ದಿನಾಚರಣೆಗಳು ಸಾಂಕೇತಿಕವಾಗಬಾರದು. ಮಹಿಳೆಯರು ಅಡುಗೆಮನೆಗೆ, ತಮ್ಮ ಕುಟುಂಬಕ್ಕೆ ಸೀಮಿತವಾಗದೆ ಸಮಾಜದ ಬೆಳವಣಿಗೆಗೂ ಸಂಕಲ್ಪ ಕೈಗೊಳ್ಳಬೇಕು ಎಂದರು.

ಸಾಧಕ ಮಹಿಳೆಯರನ್ನು ಸನ್ಮಾನಿಸಿ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ, ನಮ್ಮ ಭಾಗದ ಕೆಳದಿ ರಾಣಿ ಚೆನ್ನಮ್ಮ ನಮಗೆ ಮಾರ್ಗದರ್ಶನವಾಗಬೇಕು. ಸತಿಸಹಗಮನದಂತಹ ಕೆಟ್ಟಪದ್ಧತಿ ಇದ್ದರೂ ಗಂಡನನ್ನು ಕಳೆದುಕೊಂಡರೂ ಧೃತಿಗೆಡದೆ ರಾಜ್ಯಾಡಳಿತ ವಹಿಸಿಕೊಂಡು 25 ವರ್ಷಕ್ಕೂ ಹೆಚ್ಚುಕಾಲ ದಿಟ್ಟವಾಗಿ ಆಡಳಿತ ನಡೆಸಿದ ಕೆಳದಿ ರಾಣಿ ಚೆನ್ನಮ್ಮ ನಮಗೆ ಆದರ್ಶಪ್ರಾಯಳಾಗಬೇಕು. ಎಲ್ಲ ಕ್ಷೇತ್ರದ ಹೊಣೆಗಾರಿಕೆ ಹೊತ್ತಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಮಹಿಳೆಯರು ಗುರುತಿಸಿಕೊಳ್ಳಬೇಕು. ಮಹಿಳೆಯರಿಂದ ಮಾತ್ರ ಶುದ್ಧ ಮತ್ತು ಸದೃಢ ಆಡಳಿತ ನೀಡಲು ಸಾಧ್ಯ. ಲಿಂಗ ಸಮಾನತೆ ಸಿಕ್ಕಾಗ ಮಾತ್ರ ಮಹಿಳಾ ಸಬಲೀಕರಣಕ್ಕೆ ಅರ್ಥ ಬರುತ್ತದೆ ಎಂದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷತೆ ಮಧುಮಾಲತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಬಿ.ಆರ್.ಜಯಂತ್, ಸುರೇಶಬಾಬು, ಮಂಡಗಳಲೆ ಗಣಪತಿ, ಕೆ.ಹೊಳೆಯಪ್ಪ, ಎನ್.ಲಲಿತಮ್ಮ, ಸುಮಂಗಲ ರಾಮಕೃಷ್ಣ, ಉಷಾ, ಸರಸ್ವತಿ ನಾಗರಾಜ್, ನಂದಾ ಗೊಜನೂರು, ಪ್ರಭಾವತಿ, ಶ್ವೇತಾ, ತೀ.ನ.ಶ್ರೀನಿವಾಸ್, ಪರಿಮಳ ಇನ್ನಿತರರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತೆಯರಿಗೆ, ಆಶಾ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನ ಮಾಡಲಾಯಿತು.

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.