ಮಳೆಯಿಂದ ಬೆಳೆ ನಷ್ಟ: ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು; ಮಾಜಿ ಶಾಸಕ ಮಧು ಬಂಗಾರಪ್ಪ
Team Udayavani, May 21, 2022, 8:10 PM IST
ಸೊರಬ: ಎಡಬಿಡದೇ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ನಷ್ಟವಾಗಿದ್ದು, ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸುವ ಜೊತೆಗೆ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಎಸ್. ಮಧುಬಂಗಾರಪ್ಪ ಒತ್ತಾಯಿಸಿದರು.
ತಾಲೂಕಿನ ಚಿಕ್ಕಾವಲಿ ಗ್ರಾಮದಲ್ಲಿ ಕಟಾವು ಮಾಡಿದ ಮುಸುಕಿನ ಜೋಳದ ಬೆಳೆ ಮಳೆಯಿಂದ ಮೊಳಕೆಯೊಡೆದಿರುವುದನ್ನು ಪರಿಶೀಲಿಸಿ, ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ರೈತರ ಕೈ ಸೇರುವ ಹೊಸ್ತಿಲಲ್ಲಿದ್ದ ಭತ್ತ, ಮೆಕ್ಕೆ ಜೋಳ ಮೊಳಕೆಯೊಡೆಯುತ್ತಿವೆ. ಕಟಾವಿಗೆ ಬಂದಿದ್ದ ಭತ್ತ ಧರೆಗೆ ಉರುಳಿ ಸಂಪೂರ್ಣ ಹಾಳಾಗಿರುವುದು ಕ್ಷೇತ್ರ ಪ್ರವಾಸದ ಸಂದರ್ಭದಲ್ಲಿ ಕಂಡಿದ್ದೇನೆ. ಇದು ಮಾತ್ರವಲ್ಲದೇ ತೋಟಗಾರಿಕೆ ಬೆಳೆಗಳಾದ ಬಾಳೆ, ಅಡಿಕೆ ಸೇರಿದಂತೆ ಅನೇಕ ಬೆಳೆಗಳು ಮಳೆಯಿಂದ ಹಾನಿಗೀಡಾಗಿದ್ದು, ಸರ್ಕಾರ ರೈತರ ನೆರವಿಗೆ ಧಾವಿಸುವ ಇಚ್ಛಾಶಕ್ತಿ ತೋರಬೇಕು ಎಂದರು.
ಕೃಷಿ ಇಲಾಖೆಯ ಮಾಹಿತಿಯಂತೆ ಕ್ಷೇತ್ರದಲ್ಲಿ ಈವರೆಗೆ ಸುಮಾರು 321 ಎಕರೆ ಪ್ರದೇಶದಲ್ಲಿ ಬೆಳೆದ 8775 ಕ್ವಿಂಟಾಲ್ ಭತ್ತ, ಸುಮಾರು 1290 ಎಕರೆ ಪ್ರದೇಶದಲ್ಲಿ ಬೆಳೆದ 32,250 ಕ್ವಿಂಟಾಲ್ ಮುಸುಕಿನ ಜೋಳ ಹಾಗೂ ಜಮೀನಿನಲ್ಲಿ ಕಟಾವು ಆಗದೇ ಇರುವ ಮೊಳಕೆ ಬಂದು 321 ಎಕರೆ ಪ್ರದೇಶದ ಭತ್ತ ಮತ್ತು 3110 ಎಕರೆ ಪ್ರದೇಶದ ಮುಸುಕಿನ ಜೋಳದ ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ತಾಲೂಕಿನಲ್ಲಿ ಸುಮಾರು 2.73 ಕೋಟಿ ರೂ., ಬೆಳೆ ನಷ್ಟವಾಗಿದೆ. ರೈತರು ಅತಿವೃಷ್ಟಿ-ಅನಾವೃಷ್ಟಿಯಿಂದ ಸಾಕಷ್ಟು ಆರ್ಥಿಕ ನಷ್ಟು ಅನುಭವಿಸಿದ್ದಾರೆ. ಜವಾಬ್ದಾರಿಯುತ ಸರ್ಕಾರಗಳು ರೈತರ ನೆರವಿಗೆ ಧಾವಿಸಿ ಕೂಡಲೇ ಸೂಕ್ತ ಪರಿಹಾರ ಧನವನ್ನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕುಪ್ಪಗಡ್ಡೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಲ್.ಜಿ. ರಾಜಶೇಖರ್ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ