ಕೃಷಿ ಕಾಯ್ದೆ ವಿರೋಧಿಸಿ 26 ರಂದು ರೈತರ ಪರೇಡ್‌

30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ

Team Udayavani, Jan 22, 2021, 6:57 PM IST

Shivamogga Protest

ಶಿವಮೊಗ್ಗ: ರೈತ ಮತ್ತು ಕಾರ್ಮಿಕ ವಿರೋಧಿಯಾಗಿರುವ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ಜ. 26 ರಂದು ಬೆಂಗಳೂರಿನಲ್ಲಿ ಬೃಹತ್‌ ಜನ-ಗಣರಾಜ್ಯೋತ್ಸವ ಪರೇಡ್‌ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ಗೌರವಾಧ್ಯಕ್ಷ ಎಚ್‌.ಆರ್‌. ಬಸವರಾಜಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ್ರೋಹಿ ಕಾಯ್ದೆಗಳನ್ನು ವಿರೋಧಿ ಸಿ ದೆಹಲಿಯ ಗಡಿಯಲ್ಲಿ ರೈತರು ಕಳೆದ 58 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು 500ಕ್ಕೂ ಹೆಚ್ಚು ರೈತ ಸಂಘಟನೆಗಳು ಚಾರಿತ್ರಿಕ ಹೋರಾಟ ನಡೆಸುತ್ತಿವೆ. ಈ ಹೋರಾಟವನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಪರೇಡ್‌ ನಡೆಸಲು ತೀರ್ಮಾನಿಸಲಾಗಿದ್ದು, ಈ ಹೋರಾಟ ಎರಡನೇ ಸ್ವಾತಂತ್ರ್ಯ ಚಳವಳಿ ಎಂದರು.

ಇದನ್ನೂ ಓದಿ : ಅಂತರ್ಜಲ ವೃದ್ಧಿಗೆ ಜಾಗೃತಿ ಮೂಡಿಸಿ; ಮಹ್ಮದ್‌ ಇಸ್ಮಾಯಿಲ್

ಬೆಂಗಳೂರಿನಲ್ಲಿ ನಡೆಯಲಿರುವ ರೈತರ ಗಣರಾಜ್ಯೋತ್ಸವ ಪರೇಡ್‌ನ್ನು ಬೆಂಬಲಿಸಿ ರಾಜ್ಯದ ಎಲ್ಲಾ ರೈತ ಸಂಘಗಳು, ದಲಿತ ಸಂಘರ್ಷ ಸಮಿತಿಗಳು, ಕರ್ನಾಟಕ ಜನಶಕ್ತಿ ವೇದಿಕೆ, ಪ್ರಗತಿಪರ ಸಂಘಟನೆಗಳು, ಬರಹಗಾರರು, ಸಾಹಿತಿಗಳು ಭಾಗವಹಿಸಲಿದ್ದಾರೆ ಎಂದರು.

ಸರ್ಕಾರಿ ಕಾರ್ಯಕ್ರಮ ಮುಗಿದ ನಂತರ ಬೆಂಗಳೂರಿನ ರಾಜಮಾರ್ಗಗಳಲ್ಲಿ ರೈತರು ಟ್ಯಾಕ್ಟರ್‌, ಎತ್ತಿನ ಗಾಡಿ ಮತ್ತು ವಾಹನಗಳ ಮೂಲಕ ಪರೇಡ್‌ ನಡೆಸಲಿದ್ದು, ವಾಹನಗಳ ಮೇಲೆ ರಾಷ್ಟ್ರ ಧ್ವಜ, ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಧ್ವಜಗಳೊಂದಿಗೆ ಮೆರವಣಿಗೆ ನಡೆಸಲಾಗುವುದು. ಸುಮಾರು 25-30 ಸಾವಿರ ಜನ ಭಾಗವಹಿಸಲಿದ್ದು, ಶಿವಮೊಗ್ಗ ಜಿಲ್ಲೆಯಿಂದ 1000 ಜನ ಚಳವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ಜನಶಕ್ತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ಕೆ.ಎಲ್‌. ಅಶೋಕ್‌ ಮಾತನಾಡಿ, ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ಇಲ್ಲಿಯವರೆಗೆ 138 ರೈತರು ಹುತಾತ್ಮರಾಗಿದ್ದಾರೆ ಎಂದು ರೈತ ಸಂಘಟನೆಗಳ ವೇದಿಕೆಯಾಗಿರುವ ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ ಬಿಡುಗಡೆ ಮಾಡಿದೆ. ಇಷ್ಟು ರೈತರು ಹುತಾತ್ಮರಾಗಿದ್ದರೂ ಸಹ ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯದೆ ಹಠಮಾರಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜ.26ರಂದು ತುಮಕೂರು ರಸ್ತೆ ನೈಸ್‌ ಜಂಕ್ಷನ್‌ ನಿಂದ, ಕೆ.ಆರ್‌.ಪುರಂ, ಕೆಂಗೇರಿ ಹಾಗೂ ಸಂಗೊಳ್ಳಿ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಜಾಥಾ ನಡೆಯಲಿದೆ ತಿಳಿಸಿದರು.

ಚಿಂತಕ ಪ್ರೊ. ರಾಜೇಂದ್ರ ಚೆನ್ನಿ ಮಾತನಾಡಿ, ನ್ಯಾಯ ಕೇಳಲು ನ್ಯಾಯಾಲಯಕ್ಕೆ ಹೋಗದಂತಹ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದ್ದು, ಈ ಕಾನೂನುಗಳು ಶ್ರೀಮಂತರ ಮತ್ತು ಕಾರ್ಪೋರೆಟ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡುವಂತಿವೆ ಎಂದರು. ಸುದ್ದಿಗೋಷ್ಠಿಯಲ್ಲಿ ಡಿಎಸ್‌ಎಸ್‌ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಎಚ್‌. ಹಾಲೇಶಪ್ಪ, ಎಸ್‌.ಶಿವಮೂರ್ತಿ, ಪ್ರಗತಿಪರ ಹೋರಾಟಗಾರರಾದ ಟಿ. ಅನಿಲ್‌ಕುಮಾರ್‌, ಬಾವಿಗೆ ಬಿದ್ದು ಯುವತಿ ಸಾವು ಡಿ.ಮಂಜುನಾಥ್‌, ಡಿ.ಎಸ್‌.ಶಿವಕುಮಾರ್‌ ಇದ್ದರು.

ಇದನ್ನೂ ಓದಿ :ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಉಪಕುಲಪತಿಯಾಗಿ ಪ್ರೊ. ಬಿ.ಕೆ ತುಳಸಿಮಾಲಾ ನೇಮಕ 

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.