ಉಚಿತ ಸಾಮೂಹಿಕ ವಿವಾಹ-ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ
Team Udayavani, Apr 16, 2022, 5:08 PM IST
ಶಿವಮೊಗ್ಗ: ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀಕಾಲಭೈರವೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ನಿಮಿತ್ತ 24 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮತ್ತು ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಸಮಾರಂಭ ಪೂಜ್ಯರ ಸಮ್ಮುಖದಲ್ಲಿ ನಡೆಯಿತು.
ವಿವಾಹವಾಗಿ 50 ವರ್ಷ ತುಂಬಿದ ಆದರ್ಶ ಹಿರಿಯ ದಂಪತಿಗಳನ್ನು ಸನ್ಮಾನಿಸಿ ಅವರ ಮೂಲಕ ನವ ಬದುಕಿಗೆ ಕಾಲಿಟ್ಟ ವಧು-ವರರನ್ನು ಆಶೀರ್ವದಿಸುವ ಈ ಅಪರೂಪದ ಕಾರ್ಯಕ್ರಮದ ಸಾನ್ನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾ ಧಿಪತಿ ಶ್ರೀ ಡಾ| ನಿರ್ಮಲಾನಂದ ಮಹಾಸ್ವಾಮೀಜಿ ಅವರು ವಹಿಸಿದ್ದರು.
ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಆಕರ್ಷಣೆ ಎಂಬಂತೆ ನವ ಬದುಕಿಗೆ ಕಾಲಿಟ್ಟ ದಂಪತಿ ಹಾಗೂ ಹಿರಿಯ ದಂಪತಿಗಳ ಹಬ್ಬವೆಂಬ ವಾತಾವರಣ ನಿರ್ಮಾಣವಾಗಿತ್ತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ನನ್ನ ರಾಜಕೀಯ ಜೀವನದಲ್ಲಿ ಇದೊಂದು ಸುಮಧುರ ಹಾಗೂ ದೈವ ಪ್ರೇರಣೆಯ ಕ್ಷಣ. ಜೀವನದ ಅತ್ಯಂತ ಪವಿತ್ರ ಘಳಿಗೆ. ಶ್ರೀಗಳ ಆಶೀರ್ವಾದಗಳೊಂದಿಗೆ ಹೊಸ ಬದುಕಿಗೆ ಕಾಲಿಟ್ಟ ನವ ದಂಪತಿ ಎಚ್ಚರಿಕೆಯ ಹೆಜ್ಜೆ ಇಟ್ಟು ಬದುಕು ಸಾಗಿಸಿ. ಪೂಜ್ಯರ ಸಮ್ಮುಖದಲ್ಲಿ ತಂದೆ-ತಾಯಿಯರಿಗೆ ಸಮಾನರಾದ ಹಿರಿಯ ದಂಪತಿಗಳನ್ನು ಸತ್ಕರಿಸುವ ಕಾರ್ಯ ಸಿಕ್ಕಿದ್ದು ನನ್ನ ಪುಣ್ಯ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಡಾ| ಅಂಜನಪ್ಪ ಮಾತನಾಡಿ, ಕಾಯಿಲೆ ಬಂದ ಮೇಲೆ ತಿದ್ದಿಕೊಳ್ಳುವ ಬದಲು ಕಾಯಿಲೆ ಬರದಂತೆ ನೋಡಿಕೊಳ್ಳುವುದು ಮುಖ್ಯ. ದುಶ್ಚಟಗಳಿಂದ ದೂರವಾಗಿ ಆರೋಗ್ಯ ಕಾಪಾಡಿಕೊಳ್ಳಿ ಎಂದರು.
ಆದಿಚುಂಚನಗಿರಿ ಮಹಾಸಂಸ್ಥಾನದ ಡಾ|ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿ, ಧರ್ಮದ ಕಾರ್ಯದಲ್ಲಿ ಒಂದುಗೂಡಿ ಕೆಲಸ ಮಾಡಿ, ಧರ್ಮಪತ್ನಿ ಹಾಗೂ ದಾಂಪತ್ಯ ಜೀವನ ಎಂದುಕೊಳ್ಳಿ. ಪತಿ ತನ್ನ ವೇತನವನ್ನು ಪತ್ನಿಗೆ ತಿಳಿಸಬೇಕು. ಹಣಕಾಸು ವ್ಯವಹಾರವು ಪರಸ್ಪರ ಇಬ್ಬರಿಗೂ ಗೊತ್ತಿರಬೇಕು. ನಿಜವಾದ ನಂಬಿಕೆ, ಪ್ರೀತಿ ವಿಶ್ವಾಸ ನಿಮ್ಮ ನಡುವೆ ಇರಲಿ. ಹಿರಿಯ ದಂಪತಿಗಳಿಂದ ನಿಮಗೆ ಆಶೀರ್ವಾದ ಸಿಕ್ಕಿದೆ ಸುಖವಾಗಿ ಬಾಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ