ನಗರದ 31 ವಾರ್ಡ್ಗಳಲ್ಲೂ ಫಾಗಿಂಗ್: ಉಷಾ
Team Udayavani, Jul 29, 2017, 1:20 PM IST
ಸಾಗರ: ನಗರದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಫಾಗಿಂಗ್ ಹಾಗೂ ಮೆಲಾಥಿನ್ ದ್ರಾವಣ ಸಿಂಪಡಣೆಯನ್ನು 31 ವಾರ್ಡ್ಗಳಲ್ಲೂ ಕೈಗೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷೆ ಉಷಾ ಎನ್. ತಿಳಿಸಿದ್ದಾರೆ.
ನಗರದ ಶಿವಪ್ಪ ನಾಯಕ ಬಡಾವಣೆಯಲ್ಲಿ ನಗರಸಭೆ ವತಿಯಿಂದ ಫಾಗಿಂಗ್ ಹಾಗೂ ಮೆಲಾಥಿನ್ ದ್ರಾವಣ ಸಿಂಪಡಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏಕಕಾಲದಲ್ಲಿ ನಾಲ್ಕು ಫಾಗಿಂಗ್ ಯಂತ್ರಗಳು ಹಾಗೂ ಎರಡು ಮೆಲಾಥಿನ್ ದ್ರಾವಣ ಸಿಂಪಡಣೆ ಯಂತ್ರದ ಜೊತೆಗೆ ಹತ್ತಕ್ಕೂ ಹೆಚ್ಚು ಪೌರ ಕಾರ್ಮಿಕರು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದರು. ಈಗಾಗಲೇ ಮೂರ್ನಾಲ್ಕು ಶಂಕಿತ ಡೆಂಘೀ ಪ್ರಕರಣ ಪತ್ತೆಯಾಗಿದ್ದು, ಸೂಕ್ತ ಸಂದರ್ಭದಲ್ಲಿ ಚಿಕಿತ್ಸೆ ನೀಡಿದ್ದರಿಂದ ಯಾವುದೇ ಸಾವುನೋವು ಸಂಭವಿಸಿಲ್ಲ. ಬಿಸಿಲು ಮತ್ತು ಮಳೆ ಇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ. ಜನರಲ್ಲಿ ಜಾಗೃತಿ ಮೂಡಿಸಲು ನಗರಸಭೆ ವತಿಯಿಂದ ಕರಪತ್ರ ಹಂಚುವುದು, ಕಸ ಸಂಗ್ರಹಣ ವಾಹನದಲ್ಲಿ ಧ್ವನಿವರ್ಧಕ ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ ಅ ಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಇರಿಸಿಕೊಂಡು ಜನರಿಗೆ ಸೂಕ್ತ ಮಾಹಿತಿ ನೀಡಲಾಗುತ್ತಿದೆ ಎಂದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜೂರಾಲಿ ಖಾನ್ ಮಾತನಾಡಿ, ಮೆಲಾಥಿನ್ ದ್ರಾವಣ ಸಿಂಪಡಣೆಗೆ ಸುಮಾರು 50 ಸಾವಿರ ರೂ. ವೆಚ್ಚದಲ್ಲಿ ಎರಡು ಆಧುನಿಕ ಯಂತ್ರವನ್ನು ಖರೀದಿಸಲಾಗಿದೆ. ಜೊತೆಗೆ ಬೆಳಗ್ಗೆ ಮತ್ತು ಸಂಜೆ ಫಾಗಿಂಗ್ ಮಾಡಲಾಗುತ್ತಿದೆ. ನಗರ ವ್ಯಾಪ್ತಿಯಲ್ಲಿ ಖಾಲಿ ಇರುವ ನಿವೇಶನಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸಂಬಂಧಪಟ್ಟ ಮಾಲಿಕರು ಸ್ವತ್ಛಗೊಳಿಸಬೇಕು. ಇಲ್ಲವಾದಲ್ಲಿ ನಗರಸಭೆ ವತಿಯಿಂದ ಅಂತಹ ಜಾಗದ ಮಾಲಿಕರ ಮೇಲೆ ದಂಡ ವಿಧಿ ಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜನರು ಮನೆಯ ಅಕ್ಕಪಕ್ಕ ಸ್ವತ್ಛವಾಗಿರಿಸಿಕೊಳ್ಳಬೇಕು. ಸೊಳ್ಳೆ ಉತ್ಪತ್ತಿಯಾಗುವ ಸ್ಥಳಗಳ ಬಗ್ಗೆ ಕರಪತ್ರದ ಮೂಲಕ ಮಾಹಿತಿ ನೀಡಲಾಗಿದೆ. ಅದನ್ನು ಪರಿಶೀಲನೆ ನಡೆಸಿ, ಅದರಂತೆ ನಡೆದುಕೊಳ್ಳಬೇಕು. ಒಡೆದ ಮಡಿಕೆ, ಎಳನೀರು ಚಿಪ್ಪು, ಚರಂಡಿಯಲ್ಲಿ ಹೆಚ್ಚು ನೀರು ಸಂಗ್ರಹವಾಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು. ಪೌರ ಕಾರ್ಮಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ