ದಶಕ ಕಳೆದರೂ ಗಾಂಧಿ ಪ್ರತಿಮೆ ಅನಾಥ!
Team Udayavani, Oct 1, 2019, 5:02 PM IST
ಸಾಗರ: ಗಾಂಧಿ ಪ್ರತಿಮೆ ಈಗಲೂ ಅನಾಥವಾಗಿ ಬಿದ್ದಿದ್ದರೂ ಯಾರೊಬ್ಬರೂ ಗಮನಿಸದ ಸ್ಥಿತಿ ಸಾಗರದಲ್ಲಿ ನಿರ್ಮಾಣವಾಗಿದೆ. ಒಂದು ವರ್ಷದ ಕೆಳಗೆ ಈ ಬಗ್ಗೆ “ಉದಯವಾಣಿ’ ಗಮನ ಸೆಳೆದಿದ್ದರೂ ಪರಿಸ್ಥಿತಿ ಎಳ್ಳಷ್ಟು ಬದಲಾಗಿಲ್ಲ!
ಈಗ ನಗರಸಭೆಯಾಗಿ ಬದಲಾಗಿದ್ದರೂ, 2006ರಲ್ಲಿದ್ದ ಪುರಸಭೆ ಆಡಳಿತ ನಗರದ ಗಾಂಧಿನಗರ ವೃತ್ತದಲ್ಲಿ ಗಾಂಧಿ ಪ್ರತಿಮೆ ಸ್ಥಾಪಿಸಲು ಅಂದಿನ ಅಧ್ಯಕ್ಷೆ ಸಾಬಿರಾ ಯೂಸೂಫ್ ಅವಧಿಯಲ್ಲಿ ಕೌನ್ಸಿಲ್ನ ಸಾಮಾನ್ಯ ಸಭೆಯಲ್ಲಿ ನಡವಳಿಕೆ ಮೂಲಕವೇ ನಿರ್ಣಯ ಕೈಗೊಂಡಿತ್ತು. 27 ಜನ ವಾರ್ಡ್ ಸದಸ್ಯರಿದ್ದ ಪುರಸಭೆಯ 2006ರ ನವೆಂಬರ್ 30ರ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ವಿಷಯ ಸಂಖ್ಯೆ 129(4)ರಲ್ಲಿ ನಾಲ್ಕು ಪ್ರತಿಮೆಗಳ ಸ್ಥಾಪನೆಗೆ ನಡವಳಿಕೆ ದಾಖಲಾಗಿದೆ. ಡಾ. ಬಿ.ಆರ್.ಅಂಬೇಡ್ಕರ್, ಸುಭಾಷ್ ಚಂದ್ರಬೋಸ್, ಮಹಾತ್ಮಾ ಗಾಂಧಿ ಮತ್ತು ಮೌಲಾನಾ ಅಬ್ದುಲ್ ಕಲಾಮ್ ಆಜಾದ್ ಅವರ ಪ್ರತಿಮೆಗಳ ಸ್ಥಾಪನೆಗೆ ಅಂದಿನ ಪುರಸಭೆ ತೀರ್ಮಾನಿಸಿತ್ತು. ಈ ಹಿನ್ನೆಲೆಯಲ್ಲಿ ಜೋಗ ರಸ್ತೆಯ ಕಲಾವಿದ ಹರೀಶ್ ಆಚಾರ್ ಅವರಿಗೆ ಶಿಲ್ಪ ತಯಾರಿಸಲು ಬಾಯಿ ಮಾತಿನಲ್ಲಿ ಸೂಚನೆ ನೀಡಲಾಗಿತ್ತು. ಆ ಕಾಲದಲ್ಲಿ ಟೆಂಡರ್, ಆದೇಶ ಪತ್ರದ ಗೋಜಿಗೆ ಹೋಗದ, ಪರಿಚಯದ ಆಧಾರದಲ್ಲಿ ಹರೀಶ್ ಕೃಷ್ಣಶಿಲೆ ಬಳಸಿ ಗಾಂಧಿ ಪ್ರತಿಮೆ ರೂಪಿಸಿದರು. ಸಿದ್ಧವಾದ ಪ್ರತಿಮೆಗೆ ಸುಮಾರು 60 ಸಾವಿರ ರೂ. ಈಗಾಗಲೇ ಖರ್ಚಾಗಿದೆ.
ಆದರೆ ಅದಾಗಿ ಎರಡೇ ತಿಂಗಳಲ್ಲಿ ಕಾಂಗ್ರೆಸ್ ಅವಧಿ ಮುಗಿದಿತ್ತು. ಪುರಸಭೆ ಹೋಗಿ ನಗರಸಭೆಯಾದ ಹಂತದಲ್ಲಿನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಇಂತಹದ್ದೊಂದು ತೀರ್ಮಾನದ ಕುರಿತು ಜನಪ್ರತಿನಿ ಧಿಗಳಾಗಲಿ, ಅಧಿಕಾರಿಗಳಾಗಲಿ ಗಂಭೀರವಾಗಿ ಪರಿಗಣಿಸಿಲ್ಲ. ಇತ್ತ ಒಂದೆರಡು ಬಾರಿ ಕಚೇರಿಗೆ ಹೋಗಿ ತಾವು ಕೆತ್ತಿದ ಶಿಲ್ಪದ ಕುರಿತು ಹರೀಶ್ ಮಾಹಿತಿ ನೀಡಿದರೂ ಆಡಳಿತ ಅಲುಗಾಡಲಿಲ್ಲ. ಕಾಲಚಕ್ರ ತಿರುಗಿ ಬಿಜೆಪಿ ಆಡಳಿತ ಹೋಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಪರಿಸ್ಥಿತಿ ಬದಲಾಗಲಿಲ್ಲ. ಖುದ್ದು ಕಾಂಗ್ರೆಸ್ರಿಗೆ, ಅವತ್ತು ಕೂಡ ಪುರಸಭೆಯ ಸದಸ್ಯರಾಗಿದ್ದ ತೀ.ನ. ಶ್ರೀನಿವಾಸ್ ಅಂತಹವರಿಗೆ ವಿಷಯ ಮರೆತು ಹೋಗಿದೆ. ಗಾಂಧಿ ಪ್ರತಿಮೆ ವಿಷಯದಲ್ಲಿನ ನಿರ್ಲಕ್ಷ ಸಲ್ಲದು. ಆ ಬಗ್ಗೆ ಸೂಕ್ತ ಕ್ರಮಕ್ಕೆ ಮುಂದಾಗುವಂತೆ ಸೂಚನೆ ನೀಡುತ್ತೇನೆ.
ಆದಷ್ಟು ಶೀಘ್ರ ಕಲಾವಿದರಿಂದ ಗಾಂಧಿ ಮೂರ್ತಿ ಪಡೆದುಕೊಂಡು ನಿಗದಿಯಾದ ಸ್ಥಳದಲ್ಲಿ ಸ್ಥಾಪನೆ ಮಾಡಲು ಸೂಚನೆ ನೀಡುತ್ತೇನೆ ಎಂದು ತೀ.ನ. ಪ್ರತಿಕ್ರಿಯಿಸಿದರೂ ನೆಲಕ್ಕೆ ಒರಗಿದ್ದ ಗಾಂಧಿ ಪ್ರತಿಮೆಗೆ ಒಂದು ಅಡಿ ಆಚೀಚೆ ಚಲಿಸುವ ಭಾಗ್ಯವೂ ಸಿಗಲಿಲ್ಲ. ಆದರೆ ಆಡಳಿತ ಮಾತ್ರ ಬದಲಾಗಿ ಬಿಜೆಪಿಗೆ ಬಹುಮತ ಲಭಿಸಿದೆ. ವಾಸ್ತವವಾಗಿ ಬೇಸ್ಮೆಂಟ್ ಮತ್ತು ಸಣ್ಣಪುಟ್ಟ ಕೆಲಸ ಎಲ್ಲ ಮುಗಿಸಿದರೆ ಇನ್ನೂ 20-30 ಸಾವಿರ ರೂ.ಗಳಲ್ಲಿ ಪ್ರತಿಮೆ ಸ್ಥಾಪನೆಯ ಕೆಲಸ ಮುಗಿದು ಹೋಗುತ್ತದೆ. ಆದರೆ ಕಲಾವಿದರು ಕೆಲಸ ಮಾಡುವ ಶೆಡ್ ಬಳಿ ಆಕಾಶ ನೋಡುತ್ತ ಒರಗಿರುವ ಗಾಂಧಿ ಶಿಲ್ಪದ ಮುಖದಲ್ಲಿ ಮಾತ್ರ ಮಾಸದ ನಗುವಿರುವುದು ಗಾಂಧಿ ಜಯಂತಿಯ ಭಾಷಣಗಳ ಸಂದರ್ಭದಲ್ಲಿ ಬೇರೆಯದೇ ಅರ್ಥ ಕೊಡುವಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ