ಗರೀಬ್‌ ಕಲ್ಯಾಣ ಬಡವರಿಗೆ ಸಹಕಾರಿ

ಕೋವಿಡ್‌ ವೇಳೆ ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರ: ಸಂಸದ ಬಿ.ವೈ. ರಾಘವೇಂದ್ರ

Team Udayavani, Apr 14, 2022, 3:50 PM IST

gareeb-kalyana

ಶಿವಮೊಗ್ಗ: ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಿಂದ ರಾಜ್ಯದ ಒಟ್ಟು ಫಲಾನುಭವಿಗಳ 4.31ಕೋಟಿ ಕುಟುಂಬಗಳಿಗೆ ಪಡಿತರ ನೀಡಿದ್ದೇವೆ. ಶಿವಮೊಗ್ಗ ಜಿಲ್ಲೆಯ 13.12 ಲಕ್ಷ ಫಲಾನುಭವಿಗಳಿಗೆ ಈ ಯೋಜನೆಯಿಂದ ಅನುಕೂಲವಾಗಿದೆ. ಭಾರತ ಕೋವಿಡ್‌-19ರ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಎರಡು ವರ್ಷಗಳ ಕಾಲ ತನ್ನ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರ ಆಹಾರ ಧಾನ್ಯ ಒದಗಿಸಿದ್ದನ್ನು ವಿಶ್ವ ಅಚ್ಚರಿಯಿಂದ ಗಮನಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಭಾರತೀಯ ಜನತಾ ಪಕ್ಷದ 40ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಏಪ್ರಿಲ್‌ 7ರಿಂದ ಏಪ್ರಿಲ್‌ 20ರ ವರೆಗೆ ಬಿಜೆಪಿಯ ವಿವಿಧ ಜನಪರ ಕೆಲಸಗಳನ್ನು ಜನರಿಗೆ ತಲುಪಿಸುವ ಅಂಗವಾಗಿ ವಿನೋಬನಗರದ ಸಾಕಮ್ಮ ನ್ಯಾಯಬೆಲೆ ಅಂಗಡಿ ಮುಂಭಾಗದಲ್ಲಿ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ವಿತರಿಸಲಾದ ಪಡಿತರ ಯಶಸ್ವಿ ಅನುಷ್ಠಾನದ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶ್ವ ವ್ಯಾಪಾರ ಸಂಸ್ಥೆ ಅನುಮತಿಸಿದರೆ ಭಾರತ ವಿಶ್ವಕ್ಕೆ ಆಹಾರ ಸಂಗ್ರಹ ಪೂರೈಸಲು ಸಿದ್ಧವಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಉಕ್ರೇನ್‌ ಯುದ್ಧದ ಪರಿಣಾಮ ಜಗತ್ತಿನ ವಿವಿಧ ದೇಶಗಳಲ್ಲಿ ಭಾರೀ ಆಹಾರ ಕೊರತೆ ತಲೆದೋರಿದ್ದು, ಯುದ್ಧದ ಪರಿಣಾಮ ಜಗತ್ತಿನ ದೇಶಗಳಲ್ಲಿ ಅನಿಶ್ಚಿತತೆ ಉದ್ಭವವಾಗಿದೆ. ಈಗ ಜಗತ್ತು ಹೊಸ ಸಮಸ್ಯೆ ಎದುರಿಸುತ್ತಿದೆ. ವಿಶ್ವದ ಆಹಾರ ಸಂಗ್ರಹ ಬರಿದಾಗುತ್ತಿದೆ. ನಾವು ಈಗ ನಮ್ಮ ಜನರಿಗೆ ಅಗತ್ಯವಿರುವ ಸಾಕಷ್ಟು ಆಹಾರಧಾನ್ಯಗಳನ್ನು ಹೊಂದಿದ್ದು, ನಮ್ಮ ರೈತರು ವಿಶ್ವಕ್ಕೆ ಅನ್ನ ಒದಗಿಸಲು ಶಕ್ತರಿದ್ದಾರೆ ಎಂದು ಪ್ರಧಾನಿಯವರು ತಿಳಿಸಿದ್ದಾರೆ ಎಂದರು.

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್‌. ದತ್ತಾತ್ರಿ, ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ. ಮೇಘರಾಜ್‌, ಬಿಜೆಪಿಯ ನಗರದ ಅಧ್ಯಕ್ಷರಾದ ಜಗದೀಶ್‌, ಸುಡಾ ಅಧ್ಯಕ್ಷರಾದ ನಾಗರಾಜ್‌, ಮಂಜುನಾಥ್‌, ರಾಹುಲ್‌ ಬಿದರೆ, ಮಾಲತೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.