ನಡುರಾತ್ರಿ ಕಾಡುಕೋಣಗಳ ವಾಕಿಂಗ್‌!


Team Udayavani, Mar 30, 2019, 5:59 PM IST

shiv-

ಸಾಗರ: ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸುವ ಖಯಾಲಿಯನ್ನು ಸಾಗರ ತಾಲೂಕಿನ ಗ್ರಾಮೀಣ ಅರಣ್ಯಗಳಲ್ಲಿರುವ ಕಾಡುಕೋಣಗಳು ಪ್ರತಿ ಎರಡು ವರ್ಷಕ್ಕೊಮ್ಮೆ ಚಾಲ್ತಿಗೆ ತರುವ ಸಂಪ್ರದಾಯವನ್ನು
ಮಾಡಿಕೊಂಡಿವೆ ಎಂಬ ಅನುಮಾನ ವ್ಯಕ್ತವಾಗುವಂತೆ ಗುರುವಾರ ನಡುರಾತ್ರಿಯಲ್ಲಿ ನಗರದ ಎಸ್‌ ಎನ್‌ ನಗರ ಭಾಗದಲ್ಲಿ ಎರಡು ಕಾಡುಕೋಣಗಳು ರಸ್ತೆಯಲ್ಲಿಯೇ ಸಂಚರಿಸಿರುವ ವಿಡಿಯೋ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

ಎಸ್‌ಎನ್‌ ನಗರದ ದುರ್ಗಾ ಲಾಡ್ಜ್ ಎದುರಿನ ಸಾಗರ ಸಿಗಂದೂರು ರಸ್ತೆಯಲ್ಲಿ ಇವು ಸಂಚರಿಸುತ್ತಿದ್ದ ಸಂದರ್ಭದಲ್ಲಿ ಲಾರಿ, ಕಾರು, ಬೈಕ್‌ ಸವಾರರು ದೂರದಿಂದಲೇ ಅವುಗಳ ದರ್ಶನ ಪಡೆದರೇ ವಿನಃ ಅವುಗಳನ್ನು ದಾಟಿ ರಸ್ತೆಯಲ್ಲಿ ಸಾಗುವ ಧೈರ್ಯ ಮಾಡಲಿಲ್ಲ. ಕಾಡುಕೋಣಗಳು ರಸ್ತೆಯಲ್ಲಿರುವ ಮಾಹಿತಿ ಗೊತ್ತಿಲ್ಲದೆ ಸಾಗಿದ ಪೊಲೀಸರು ಕೂಡ ಬೆದರಿ ಬೈಕ್‌ ಹಿಂದಕ್ಕೆ ತಿರುಗಿಸಿದ ದೃಶ್ಯಗಳು
ಈಗ ಎಲ್ಲರ ಮೊಬೈಲ್‌ನಲ್ಲಿ ಹರಿದಾಡುತ್ತಿವೆ.

ಎರಡು ವರ್ಷಗಳ ಹಿಂದೆ 2017ರ ಮಾ. 23ರಂದು ನಗರದ ಪ್ರಮುಖ ಜೆಸಿ ರಸ್ತೆಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿತ್ತು. ಜೈಲ್‌ ಪಕ್ಕದ ಭಾಗದಿಂದ ಆಗಮಿಸಿದ ಕಾಡುಕೋಣ ಜೆಸಿ ರಸ್ತೆಯ ಮಾರ್ಗವಾಗಿ ನಗರ ಠಾಣೆ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ವಿನೋಬಾನಗರ ಮುಂತಾದ ಕಡೆಗಳಲ್ಲಿ ಸಂಚರಿಸಿ ನಂತರ ಶಿರವಾಳದ ಮಾರ್ಗ ಹಿಡಿದು ಮಾಯವಾಗಿತ್ತು.

ಚಾಮರಾಜಪೇಟೆ ವಾಕಿಂಗ್‌ ನಂತರ ಅದೇ ವರ್ಷದ ಡಿಸೆಂಬರ್‌ ಮೂರರಂದು ಒಂಟಿ ಕಾಡುಕೋಣ
ವಾಯುವಿಹಾರವನ್ನು ನಗರದ ಭೀಮನಕೋಣೆ ರಸ್ತೆಯ ಪಕ್ಕದ ವಿಜಯನಗರ ಬಡಾವಣೆಯ ಉದ್ಯಾನವನದಲ್ಲಿ ನಡೆಸಿತ್ತು.

ವಿಜಯನಗರದ ಎರಡನೇ ಬಡಾವಣೆಯ ರಸ್ತೆಗಳಲ್ಲಿ ಕಾಡುಕೋಣ ಸಂಚಾರ ಮಾಡುತ್ತಿದ್ದ ಕಾರಣ ಹಲವರ ಬೆಳಗಿನ ವಾಕಿಂಗ್‌ ಸ್ಥಗಿತಗೊಳಿಸಿ ಮನೆಯೊಳಗೇ ಪ್ರತಿಷ್ಠಾಪಿತರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಈ ಎರಡು ಘಟನೆ ನಡೆದ ಸುಮಾರು ಒಂದೂವರೆ ವರ್ಷದ ಅವ ಧಿಯಲ್ಲಿ ಕಾಡುಕೋಣ ನಗರದತ್ತ ಬಂದಿರುವ ಮಾಹಿತಿ ಇರಲಿಲ್ಲ.

ಈ ನಡುವೆ ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಕಾಡುಕೋಣಗಳ ಉಪಟಳ ವಿಪರೀತವಾಗಿದ್ದು, ಮತ್ತಿಕೊಪ್ಪ, ಹಿಂಡೂಮನೆ, ಮಾವಿನಸರ, ಹುಲಿಮನೆ ಮೊದಲಾದೆಡೆ ಕಾಡುಕೋಣಗಳು ತೋಟಗಳಲ್ಲಿ ಅಡಕೆ ಸಸಿಗಳನ್ನು ಮುರಿದು ತೋಟಗಳನ್ನೇ ಧ್ವಂಸ ಮಾಡುತ್ತಿವೆ. ಇತ್ತೀಚಿನ ದಿನಗಳಲ್ಲಿ ಕೃಷಿಕರು ಬೇಲಿಯ ಮೇಲೆ ಹಳೆಯ ಸೀರೆಗಳ ಕರ್ಟನ್‌ಗಳನ್ನು ತೂಗುಹಾಕಿ ಕಾಡುಕೋಣಗಳಿಂದ ತೋಟಗಳನ್ನು ರಕ್ಷಿಸುವ ಪ್ರಯತ್ನ ನಡೆಸುತ್ತಿರುವುದನ್ನು ಕಾಣಬಹುದು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.