ಸಾಗರ: ಕೂಲಿ ಕಾರ್ಮಿಕನ ಮನೆ ಬಂಗಾರ ಕಳ್ಳತನ
Team Udayavani, Jul 31, 2022, 5:36 PM IST
ಸಾಗರ: ತಾಲೂಕಿನ ಬೊಮ್ಮತ್ತಿಯಲ್ಲಿನ ಕೂಲಿ ಕಾರ್ಮಿಕರ ಮನೆಯೊಂದರಲ್ಲಿ 70 ಸಾವಿರ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳ ಕಳ್ಳತನ ಮಾಡಲಾಗಿದ್ದು, ಈ ಸಂಬಂಧ ಶನಿವಾರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೊಮ್ಮತ್ತಿಯ ರಾಮಪ್ಪ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿ ಪರ್ಸ್ ಒಳಗೆ ಇಡಲಾಗಿದ್ದ 12 ಗ್ರಾಂ ತೂಕದ 4 ಜೊತೆ ಬಂಗಾರದ ಓಲೆ, 10 ಗ್ರಾಂ ತೂಕದ 2 ಜೊತೆ ಬೆಳ್ಳಿಯ ಗೆಜ್ಜೆಗಳನ್ನು ಕಳ್ಳತನ ಮಾಡಲಾಗಿದೆ. ರಾಮಪ್ಪ, ಪತ್ನಿ ಮತ್ತು ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರ ಕೂಲಿ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ.
ಮನೆಯಲ್ಲಿ ಗುಪ್ತವಾಗಿ ಇಡುತ್ತಿದ್ದ ಬೀಗದ ಕೀಯನ್ನೇ ಬಳಸಿ ಕಳ್ಳರು ಮನೆಯೊಳಗೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಪರಿಚಿತರಿರುವವರೇ ಕಳ್ಳತನದಲ್ಲಿ ಪಾಲ್ಗೊಂಡಿರಬಹುದು ಎಂದು ಶಂಕಿಸಲಾಗಿದೆ. ರಾಮಪ್ಪ ಅವರ ಪುತ್ರಿ ಶೋಭಾ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು