ಸಾಗರ: 15 ನಿಮಿಷದಲ್ಲಿ ಡೆತ್ ಸರ್ಟಿಫಿಕೇಟ್!
Team Udayavani, Jan 11, 2022, 1:32 PM IST
ಸಾಗರ: ಸಾಗರ ನಗರಸಭೆ ಪ್ರತಿ ಮಂಗಳವಾರ ಹಮ್ಮಿಕೊಂಡಿರುವ ಏಕಗವಾಕ್ಷ ಯೋಜನೆಯ ಆಂದೋಲನದಲ್ಲಿ ಅರ್ಜಿ ಸಲ್ಲಿಸಿದ 15 ನಿಮಿಷಗಳೊಳಗೆ ತನ್ನ ತಾಯಿಯ ಮರಣ ಪತ್ರವನ್ನು ಇಲ್ಲಿನ ನಾಗರಿಕ ಗುರುಮೂರ್ತಿ ಪಡೆದ ಘಟನೆ ಮಂಗಳವಾರ ನಡೆದಿದೆ. ನಗರಸಭಾ ಸದಸ್ಯರಾದ ರಾಜೇಂದ್ರ ಪೈ ಅವರು ಗುರುಮೂರ್ತಿ ಅವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.
ಏಕಗವಾಕ್ಷಿ ಯೋಜನೆಯಡಿ ಒಂದೇ ಚಾವಣಿಯಡಿ ಜನರಿಗೆ ಫಾರಂ ನಂ. 3, ಈ ಸ್ವತ್ತು, ಖಾತೆ ಬದಲಾವಣೆ, ಉದ್ಯಮ ಪರವಾನಿಗೆ ಸೇರಿದಂತೆ ಹಲವು ದಾಖಲೆಗಳನ್ನು ನೀಡುವ ಮೂಲಕ ನಗರಸಭೆ ಜನಸ್ನೇಹಿ ಆಡಳಿತಕ್ಕೆ ಚಾಲನೆ ನೀಡಿದ್ದನ್ನು ಇಲ್ಲಿ ನೆನಪಿಸಬಹುದು. ಪ್ರತಿ ಮಂಗಳವಾರ ಸಾರ್ವಜನಿಕರು ನೀಡಿದ ಅರ್ಜಿಯನ್ನು ಪರಿಶೀಲಿಸಿ ಅದಕ್ಕೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ. ಜನರು ಬೇರೆಬೇರೆ ದಾಖಲೆಗಳನ್ನು ಪಡೆಯಲು ನಗರಸಭೆಗೆ ಅಲೆಯುವುದನ್ನು ತಪ್ಪಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇನ್ನಷ್ಟು ಜನರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಮಾಹಿತಿಯನ್ನು ಈ ಹಿಂದೆಯೇ ನೀಡಿದ್ದರು.
ಮಾರ್ಚ್ ತಿಂಗಳವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ತಮ್ಮ ದಾಖಲೆಗಳನ್ನು ಸರಿಪಡಿಸಿಕೊಳ್ಳಬೇಕು. ಕಳೆದ ಎರಡು ವಾರದಲ್ಲಿ 908 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 45 ಉದ್ಯಮ ಪರವಾನಿಗೆ ನೀಡಲಾಗಿದ್ದು, 78 ಜನನ ಮರಣ ಪತ್ರ ಒದಗಿಸಲಾಗಿದೆ. ಇದರಿಂದ ನಗರಸಭೆ ಆದಾಯ ಸಹ ಹೆಚ್ಚುತ್ತಿದೆ. ನಗರಸಭೆಯಿಂದ ಆಸ್ತಿ ತಂತ್ರಾಂಶದಲ್ಲಿ ದಾಖಲಾತಿ ಮಾಡಿಸಿದರೆ ಮುಂದೆ ಅವರಿಗೆ ತೆರಿಗೆ ಪಾವತಿ ಸುಲಭವಾಗುತ್ತದೆ. ಕಂದಾಯ ಪಾವತಿ ಮಾಡಲು ನಗರಸಭೆಯಲ್ಲೆ ಬ್ಯಾಂಕ್ ಕೌಂಟರ್ ತೆರೆಯಲಾಗಿದೆ ಎಂದು ಪೌರಾಯುಕ್ತ ರಾಜು ಡಿ. ಬಣಕಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ