ಅತಿಥಿ ಉಪನ್ಯಾಸಕರ ನೆರವಿಗೆ ಸಿಎಂ: ಆಯನೂರು ಅಭಿನಂದನೆ
Team Udayavani, Sep 30, 2020, 7:20 PM IST
ಶಿವಮೊಗ್ಗ: ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ಬಾಕಿ ಇರುವ ವೇತನ ಪಾವತಿ ಮಾಡಲು ಆದೇಶಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ತಮ್ಮ ಹೋರಾಟಕ್ಕೆ ಬೆಂಬಲಿಸಿದ ಸದಸ್ಯರಿಗೆ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಧನ್ಯವಾದ ಸಲ್ಲಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ಅತಿಥಿ ಉಪನ್ಯಾಸಕರಿಗೆ ಮಾರ್ಚ್ನಿಂದ ಆಗಸ್ಟ್ ತಿಂಗಳವರೆಗೆ ವೇತನ ಪಾವತಿಸದೆ ಉಚಿತವಾಗಿ ದುಡಿಸಿಕೊಳ್ಳುತ್ತಿದ್ದರಿಂದ ಆರ್ಥಿಕವಾಗಿ ದುರ್ಬಲರಾಗಿ ಅತಿಥಿ ಉಪನ್ಯಾಸಕರುಜೀವನ ನಿರ್ವಹಿಸಲು ಕಷ್ಟವಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಅತಿಥಿ ಉಪನ್ಯಾಸಕರು ಹೋರಾಟ ಮಾಡುತ್ತಿದ್ದು ಈ ಕಾರಣಕ್ಕಾಗಿ ವಿಧಾನಪರಿಷತ್ನಲ್ಲಿ ಶೂನ್ಯ ವೇಳೆಯಲ್ಲಿ ತಾವು ಪ್ರಸ್ತಾಪ ಮಾಡಿದ್ದು, ಉನ್ನತ ಶಿಕ್ಷಣ ಸಚಿವರು ಗೈರು ಹಾಜರಾಗಿದ್ದರಿಂದ ಸದನದಲ್ಲಿ ವೇತನ ಬಿಡುಗಡೆಗೆ ಒತ್ತಾಯಿಸಿ ಹೋರಾಟ ಮಾಡಿದ್ದರಿಂದ ಸದನಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ವೇತನ ಬಿಡುಗಡೆಗೆ ಆದೇಶಿಸಿದರು ಎಂದರು.
ವೇತನ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್ನ ಮೂವರು ಸದಸ್ಯರು ಪ್ರಸ್ತಾವನೆ ಸಲ್ಲಿಸಿದ್ದು, ಯಾವುದೇ ವೇತನ ಬಾಕಿ ಇಲ್ಲ ಎಂದು ಲಿಖೀತ ರೂಪದಲ್ಲಿ ಉತ್ತರಿಸಿದ್ದರಿಂದ ಕಠಿಣ ನಿಲುವು ತೆಗೆದುಕೊಂಡು ವೇತನ ಬಿಡುಗಡೆಗೆ ತಾವು ಒತ್ತಾಯಿಸಿದಾಗ ಮುಖ್ಯಮಂತ್ರಿಗಳು ನನ್ನ ಹೋರಾಟವನ್ನು ಗೌರವಿಸಿ ಸದನಕ್ಕೆ ಬಂದು ವೇತನ ಬಿಡುಗಡೆಗೆ ಆದೇಶಿಸಿರುವುದು ಖುಷಿ ತಂದಿದೆ. ಮೂರು ತಿಂಗಳ ವೇತನ ಒಂದು ವಾರದಲ್ಲಿ ಬಿಡುಗಡೆಯಾಗುವ ಭರವಸೆ ಇದ್ದು, ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಳ್ಳದೇ ಧೈರ್ಯದಿಂದಿರಿ ಎಂದ ಅವರು, ನಿಮ್ಮ ಬೇಡಿಕೆಗಳನ್ನು ಹಂತ- ಹಂತವಾಗಿ ನ್ಯಾಯಯುತವಾಗಿ ಪಡೆದುಕೊಳ್ಳೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?