ಶಾಸಕರಿಬ್ಬರಿಗೆ ಪ್ರತಿಷ್ಠೆಯ ಕಣವಾದ ಗ್ರಾಪಂ ಕದನ


Team Udayavani, Dec 15, 2020, 5:37 PM IST

ಶಾಸಕರಿಬ್ಬರಿಗೆ ಪ್ರತಿಷ್ಠೆಯ ಕಣವಾದ ಗ್ರಾಪಂ ಕದನ

ಹೊಸನಗರ: ತಾಲೂಕು ಒಂದಾದರೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಹೋಗಿರುವ ಇಲ್ಲಿ ಸಮಸ್ಯೆಗಳು ಹಲವು. ಗ್ರಾಪಂ ಚುನಾವಣೆ ಇಬ್ಬರು ಶಾಸಕರಿಗೆಪ್ರತಿಷ್ಠೆಯಾಗಿದ್ದರೆ, ವಿಪಕ್ಷಗಳಿಗೆ ಸ್ಥಳೀಯ ಮಟ್ಟದಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಸವಾಲು.

ಹೌದು, ಕಸಬಾ, ಕೆರೆಹಳ್ಳಿ, ಹುಂಚಾ ಮತ್ತು ನಗರ ಸೇರಿ ನಾಲ್ಕು ಹೋಬಳಿ ಹೊಂದಿರುವಹೊಸನಗರ ತಾಲೂಕಿನಲ್ಲಿ ಗ್ರಾಪಂ ಚುನಾವಣೆ2 ನೇ ಹಂತದಲ್ಲಿ ನಡೆಯಲಿದೆ. ಬಿಜೆಪಿ ಮತ್ತುಕಾಂಗ್ರೆಸ್‌ ಸ್ಪರ್ಧೆ ಬಹುತೇಕ ಕಂಡುಬಂದರೆ ಜೆಡಿಎಸ್‌ ನಡೆ ಇನ್ನೂ ನಿಗೂಢವಾಗಿದೆ.

ಸಮಸ್ಯೆಗಳ ಸಾಲು: ವಾರಾಹಿ, ಚಕ್ರಾ ಸಾವೇಹಕ್ಲು ಮತ್ತು ಶರಾವತಿ ಸಂತ್ರಸ್ತರಸಮಸ್ಯೆ ಇಲ್ಲಿಯ ಹಲವು ದಶಕದ ಸಮಸ್ಯೆ.ಇನ್ನು ಭೂಮಿ ಹಕ್ಕಿಗಾಗಿ ಹೋರಾಟನಡೆಯುತ್ತಲೇ ಇದೆ. ನೂತನ ಬಿಜೆಪಿ ಸರ್ಕಾರ ಬಂದ ಮೇಲೆ ಈವರೆಗೆ ಬಗರ್‌ಹುಕುಂ ಸಮಿತಿ ರಚನೆಯಾಗದಿರುವುದು ವಿಪಕ್ಷಗಳಚುನಾವಣಾ ಅಸ್ತ್ರವಾಗಿ ಮಾರ್ಪಾಡಾಗಿದೆ. ಇನ್ನು ನಾಲ್ಕು ಹೋಬಳಿಯಲ್ಲಿ ವಿಭಿನ್ನ ಚಿತ್ರಣ, ವಿಭಿನ್ನ ಸಮಸ್ಯೆಗಳಿದ್ದು ಸ್ಥಳೀಯ ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಹರತಾಳು ಹಾಲಪ್ಪ ಹೊಸನಗರ ಕ್ಷೇತ್ರದ ಕೊನೆಯ ಶಾಸಕರು: ಹರತಾಳು ಹಾಲಪ್ಪ ಶಾಸಕರಾಗಿದ್ದೇ ಕೊನೆ. ಅಲ್ಲಿಂದ ಹೊಸನಗರ ವಿಧಾನಸಭಾ ಕ್ಷೇತ್ರ ಮಾನ್ಯತೆಯನ್ನು ಕಳೆದುಕೊಂಡಿದೆ. ಇದೀಗ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರತಾಳು ಹಾಲಪ್ಪ ಹೊಸನಗರ ತಾಲೂಕಿನ ಕಸಬಾ ಮತ್ತು ಕೆರೆಹಳ್ಳಿಯನ್ನು ಪ್ರತಿನಿಧಿಸುತ್ತಿದ್ದಾರೆ. ಇನ್ನು ನಗರ ಮತ್ತು ಹುಂಚಾ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವ್ಯಾಪ್ತಿಗೆ ಬರುತ್ತದೆ.ಇದೀಗ ಮತ್ತೆ ಹೊಸನಗರ ವಿಧಾನಸಭಾಕ್ಷೇತ್ರದ ಮರುಹುಟ್ಟಿಗಾಗಿ ಗ್ರಾಮಮಟ್ಟದಲ್ಲಿ ಕೂಗು ಕೇಳಿ ಬರುತ್ತಿದೆ.

ಪ್ರಭಾವಿಗಳ ಪ್ರಭಾವ: ಹೊಸನಗರ ತಾಲೂಕು ಎರಡು ಶಾಸಕರ ವ್ಯಾಪ್ತಿಗೆ ಬರುವ ಕಾರಣ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪ ಮತ್ತು ಆರಗ ಜ್ಞಾನೇಂದ್ರ ಅವರ ಪ್ರಭಾವ ಚುನಾವಣೆಮೇಲೆ ಬೀಳಲಿದೆ. ಕೋವಿಡ್ ಸಂಕಷ್ಟದ ಮಧ್ಯೆ ಕೂಡ ಪಂಚಾಯತ್‌ ಮಟ್ಟದಲ್ಲಿ ನೀಡಿರುವ ಕೊಡುಗೆಗಳ ಬಗ್ಗೆ ಮತದಾರರಿಗೆ ತಿಳಿಸುವ ಮೂಲಕ ಅಖಾಡಕ್ಕೆ ಈಗಾಗಲೇ ಧುಮುಕಿದ್ದಾರೆ. ಈ ನಡುವೆ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ಹೊಂದಿ ಹುಮ್ಮಸ್ಸಿನಲ್ಲಿರುವ ಬಿಜೆಪಿ ಕಾರ್ಯಕರ್ತರ ಸಂಘಟಿತ ಪ್ರಯತ್ನಕ್ಕೆ ಕೈಹಾಕಿದೆ.

ಕಾಂಗ್ರೆಸ್‌- ಜೆಡಿಎಸ್‌ ಹೊಂದಾಣಿಕೆ ಸಾಧ್ಯವೇ?: ಈಗಾಗಲೇ ಬಹುತೇಕ ಗ್ರಾಪಂಗಳಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಆದರೆ ಬದಲಾದ ರಾಜಕೀಯದಲ್ಲಿ ಅವುಗಳನ್ನು ಉಳಿಸಿಕೊಳ್ಳುವ ಸವಾಲು ಕಾಂಗ್ರೆಸ್‌ ಎದುರಿಗಿದೆ. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್‌, ಕಾಂಗ್ರೆಸ್‌ ವಕ್ತಾರ ಬೇಳೂರು ಗೋಪಾಲಕೃಷ್ಣ ಈಗಾಗಲೇ ಒಂದು ಹಂತದ ಪಂಚಾಯತ್‌ ಮಟ್ಟದಲ್ಲಿ ಸಭೆ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಿದ್ದಾರೆ.

ಈ ನಡುವೆ ಜೆಡಿಎಸ್‌ ಸಂಘಟನೆ ತಾಲೂಕಿನಲ್ಲಿ ಹೇಳಿಕೊಳ್ಳುವಂತಿಲ್ಲ.ಹೊಸನಗರ ಪಪಂ ತನ್ನದೇ ಒಂದಷ್ಟು ಹಿಡಿತ ಹೊಂದಿರುವ ಜೆಡಿಎಸ್‌ ನಗರ ಹೋಬಳಿಯಲ್ಲಿ ಕೂಡ ಒಂದಷ್ಟು ಪ್ರಭಾವ ಹೊಂದಿದೆ. ಪಕ್ಷ ಮಟ್ಟದಲ್ಲಿ ಹೊಂದಾಣಿಕೆ ಕಂಡು ಬರದಿದ್ದರೂ ಕೂಡ ಲೋಕಲ್‌ನಲ್ಲಿಅಲ್ಲಲ್ಲಿ ಅಭ್ಯರ್ಥಿಗಳ ನಡುವೆ ಸಹಮತ ಕಂಡುಬಂದಿದೆ.

 

ಕುಮುದಾ ನಗರ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.